ಪ್ರಧಾನಿ ಓಕೆ, ಶಾಗೆ ಜೋಕೆ ಎಂದ ದೀದಿ
Team Udayavani, Aug 20, 2017, 7:30 AM IST
ಕೋಲ್ಕತಾ: ಬಿಜೆಪಿ ಹಾಗೂ ಪ್ರಧಾನಿ ಮೋದಿಯವರ ಕಟ್ಟರ್ ವಿರೋಧಿ ಎಂದೇ ಗುರುತಿಸಿ ಕೊಂಡಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೋದಿ ಪರ ಧೋರಣೆ ತಳೆದಿದ್ದಾರಾ? ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನ ನೋಡಿದರೆ ಇಂತಹುದೊಂದು ಪ್ರಶ್ನೆ ಮೂಡದೇ ಇರದು.
“ಪ್ರಧಾನಿ ಮೋದಿ ಅವರ ಬಗ್ಗೆ ನನಗೇನೂ ಆಕ್ಷೇಪವಿಲ್ಲ.’ ಎಂದು “ಸಿಎನ್ಎನ್ ನ್ಯೂಸ್ 18’ಗೆ ನೀಡಿದ ಸಂದರ್ಶನದಲ್ಲಿ ಹೇಳುವ ಮೂಲಕ ದೀದಿ ಅಚ್ಚರಿ ಮೂಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಹರಿಹಾಯ್ದಿರುವ ಪ.ಬಂಗಾಲ ಸಿಎಂ, “ಶಾ ಒಬ್ಬ ಸರ್ವಾಧಿಕಾರಿ’ ಎಂದಿದ್ದಾರೆ. “ಅಮಿತ್ ಶಾ, ಪ್ರಧಾನಿ ಮೋದಿ ಅವರನ್ನು ಓವರ್ ಟೇಕ್ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಅಧ್ಯಕ್ಷರೊಬ್ಬರು ಸಚಿವರ ಸಭೆ ಕರೆಯು ತ್ತಾರೆ ಎಂದರೆ, ದೇಶದ ಪ್ರಧಾನಿ ಯಾರು ಎಂಬ ಬಗ್ಗೆ ಅನುಮಾನ ಮೂಡುತ್ತದೆ’ ಎಂದು ವಿಷಾದಿಸಿರುವ ಮಮತಾ, “ಈ ವಿಷ ಯ ದಲ್ಲಿ ನಾನು ಪ್ರಧಾನಿಯನ್ನು ದೂಷಿಸುವು ದಿಲ್ಲ. ಬದಲಿಗೆ ಈ ಬೆಳವಣಿಗೆಗಳಿಗೆ ಬಿಜೆಪಿಯೇ ಹೊಣೆ’ ಎನ್ನುವ ಮೂಲಕ ಮೋದಿ ಪರ ವಕಾಲತ್ತು ವಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿ ರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, “ಮೋದಿ ಅವರ ಬಡವರ ಪರ ಯೋಜ ನೆಗಳಿಗೆ ಸಿಎಂ ಮಮತಾ ಮನಸೋತಿದ್ದಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ