ರಾಜಸ್ಥಾನದಲ್ಲಿ ಇನ್ನೊಬ್ಬ ಗುರ್ಮಿತ್‌, ಫ‌ಲಾಹಾರಿ ಬಾಬಾ ಸೆರೆ


Team Udayavani, Sep 23, 2017, 4:18 PM IST

Phalahari Baba-700.jpg

ಆಳ್ವಾರ್‌ : ಫ‌ಲಾಹಾರಿ ಬಾಬಾ ಎಂದೇ ಖ್ಯಾತನಾಗಿರುವ ಸ್ವಘೋಷಿತ ದೇವಮಾನವ ಕುಶಲೇಂದ್ರ ಪ್ರಪಣ್ಣಾಚಾರಿ ಎಂಬಾತನನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜಸ್ಥಾನದ ಆಳ್ವಾರ್‌ ಪೊಲೀಸರು ಇಂದು ಬಂಧಿಸಿದ್ದಾರೆ. 

ಖಾಸಗಿ ಆಸ್ಪತ್ರೆಯಲ್ಲಿದ್ದ ಆತನನ್ನು ಪೊಲೀಸರು ಅಲ್ಲಿಂದಲೇ ಬಂಧಿಸಿ ಸರಕಾರಿ ಆಸ್ಪತ್ರೆಗೆ ಒಯ್ದು ಅಲ್ಲಿ ಆತನನ್ನು ವೈದ್ಯಕೀಯ ತಪಾಸಣೆಗೆ ಗುರಿಪಡಿಸಿದರು. 

ಫ‌ಲಾಹಾರಿ ಬಾಬಾ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಿಲಾಸ್‌ಪುರ ಕಾನೂನು ವಿದ್ಯಾರ್ಥಿನಿಯೋರ್ವಳು ಆಳ್ವಾರ್‌ ಪೊಲೀಸರಲ್ಲಿ ದೂರು ದಾಖಲಿಸಿದ್ದಳು. ಆ ಪ್ರಕಾರ ಪೊಲೀಸರು ಬಾಬಾನನ್ನು ಬಂಧಿಸಿದರು. ಆತನ ಮೇಲೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದಕ್ಕಾಗಿ ಪೊಲೀಸರು ಪರಿಣತ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯೊಂದನ್ನು ರಚಿಸಿದ್ದಾರೆ. 

ಹರಿಯಾಣದ ಸಿರ್ಸಾದಲ್ಲಿನ ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ 15 ವರ್ಷಗಳ ಹಿಂದೆ ಎಸಗಿದ್ದ ಅತ್ಯಾಚಾರ ಅಪರಾಧಕ್ಕಾಗಿ ನ್ಯಾಯಾಲಯವು ಆತನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕಳೆದ ಆ.28ರಂದು ನೀಡಿದ್ದ ತೀರ್ಪಿನಿಂದ ಪ್ರೇರಿತಳಾದ ಕಾನೂನು ವಿದ್ಯಾರ್ಥಿನಿಯು ತನ್ನ ಮೇಲೆ ಫ‌ಲಾಹಾರಿ ಬಾಬಾ ಅತ್ಯಾಚಾರ ಎಸಗಿದ್ದ ಬಗ್ಗೆ  ಧೈರ್ಯದಿಂದ ಪೊಲೀಸರಿಗೆ ದೂರು ನೀಡಿ ಆತನ ಬಂಧನಕ್ಕೆ ಕಾರಣಳಾಗಿದ್ದಾಳೆ. 

ಅತ್ಯಾಚಾರದ ದೂರು ಕೊಟ್ಟಿರುವ ಕಾನೂನು ವಿದ್ಯಾರ್ಥಿನಿಯ ಹೆತ್ತವರು ಕಳೆದ ಅನೇಕ ವರ್ಷಗಳಿಂದ ಫ‌ಲಾಹಾರಿ ಬಾಬಾನ ಅನುಯಾಯಿಗಳಾಗಿದ್ದರು. 

ಫ‌ಲಾಹಾರಿ ಬಾಬಾ ತನ್ನ ಮೇಲೆ ಕಳೆದ ಆಗಸ್ಟ್‌ 7ರಂದು ಆತನ ಆಳ್ವಾರ್‌ ಆಶ್ರಮದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಹುಡುಗಿ ದೂರಿನಲ್ಲಿ ಹೇಳಿದ್ದಾಳೆ. 

ಕಳೆದ 25 ವರ್ಷಗಳಿಂದ ತಾನು ಕೇವಲ ಫ‌ಲಾಹಾರದಲ್ಲೇ ಬದುಕುತ್ತಿರುವುದಾಗಿ ಸ್ವಘೋಷಿತ ದೇವಮಾನವ ಬಾಬಾ ಹೇಳಿಕೊಂಡಿದ್ದು ಆ ಕಾರಣಕ್ಕಾಗಿ ಆತನನ್ನು ಆತನ ಅನುಯಾಯಿಗಳು “ಫ‌ಲಾಹಾರಿ ಬಾಬಾ’ ಎಂದೇ ಕರೆಯುತ್ತಾರೆ. 

ಅತ್ಯಾಚಾರದ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಫ‌ಲಾಹಾರಿ ಬಾಬಾ ವಿರುದ್ಧ ಐಪಿಸಿ ಸೆ.376, ಸೆ.506ರ ಅಡಿ ತಾವು ಕೇಸು ದಾಖಲಿಸಿಕೊಂಡಿರುವುದಾಗಿ ಆಳ್ವಾರ್‌ ಹೆಚ್ಚುವರಿ ಎಸ್‌ಪಿ ಪಾರಸ್‌ ಜೈನ್‌ ಹೇಳಿದ್ದಾರೆ. 

ತನ್ನ ಮೇಲೆ ಅತ್ಯಾಚಾರದ ದೂರು ದಾಖಲಾದ ಬೆನ್ನಿಗೇ ಫ‌ಲಾಹಾರಿ ಬಾಬಾ ಅಲಿಯಾಸ್‌ ಕುಶಲೇಂದ್ರ ಪ್ರಪಣ್ಣಾಚಾರಿ ಬುಧವಾರ ಸಂಜೆಯೇ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದ. ಆತ ಆರೋಗ್ಯದಿಂದ ಇದ್ದು ಬಿಡುಗಡೆಗೆ ಯೋಗ್ಯನಿದ್ದಾನೆ ಎಂದು ವೈದ್ಯರು ಘೋಷಿಸಿದ ಬೆನ್ನಿಗೇ ಆತನನ್ನು ಪೊಲೀಸರು ಬಂಧಿಸಿದರು.   

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.