ಸುಪ್ರೀಂ ಕೋರ್ಟ್ ದೇವರಲ್ಲ!
Team Udayavani, Sep 24, 2017, 7:55 AM IST
ನವದೆಹಲಿ: “ನಾವು ದೇವರಲ್ಲ. ದೇವರಿಂದ ಮಾತ್ರ ಸಾಧ್ಯವಾಗುವ ಕೆಲಸಗಳನ್ನು ನೀವು ಮಾಡಿ ಎಂದು ದಯವಿಟ್ಟು ನಮ್ಮನ್ನು ಕೇಳಬೇಡಿ!’
ಹೀಗೆ ಹೇಳಿದ್ದು ಸುಪ್ರೀಂ ಕೋರ್ಟ್. ದೇಶದ ಪರಮೋತ್ಛ ನ್ಯಾಯದಾನ ಸಂಸ್ಥೆಯೇ ಹೀಗೆ ಹೇಳಿದರೆ ಜನ ತಮ್ಮ ಸಮಸ್ಯೆಯನ್ನ ಇನ್ನಾರ ಮುಂದೆ ಹೇಳಿಕೊಳ್ಳಬೇಕು ಎಂದು ಯೋಚಿಸುತ್ತಿದ್ದೀರಾ? ಆದರೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ವ್ಯಕ್ತಿಯ ಕೋರಿಕೆ ಕೇಳಿದರೆ ನ್ಯಾಯಾಲಯ ಹೇಳಿದ್ದೇ ಸರಿ ಎಂದು ನೀವು ತಲೆದೂಗುತ್ತೀರ. “ದೇಶದಲ್ಲಿ ಸೊಳ್ಳೆಗಳು ವಿಪರೀತವಾಗಿವೆ. ಅವುಗಳನ್ನು “ನಿರ್ಮೂಲನೆ’ ಮಾಡಲು ನೀವೇ ಏನಾದರೂ ಮಾಡಬೇಕು’ ಎಂದು ಧನೇಶ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಶನಿವಾರ ಈ ಅರ್ಜಿ ವಿಚಾರಣೆಗೆ ಎತ್ತಿಕೊಂಡ ನ್ಯಾ. ಮೋಹನ್ ಬಿ. ಲೋಕೂರ್ ಮತ್ತು ದೀಪಕ್ ಗುಪ್ತಾ ಅವರಿದ್ದ ದ್ವಿಸದಸ್ಯ ಪೀಠ, “ನಿಮ್ಮ ಸಮಸ್ಯೆಯನ್ನು ಪರಿಹರಿಸಲು ದೇವರಿಂದ ಮಾತ್ರ ಸಾಧ್ಯ. ನಾವೇನೂ ದೇವರಲ್ಲ,’ ಎಂದು ಹೇಳಿ ಅರ್ಜಿಯನ್ನು ತಳ್ಳಿಹಾಕಿದೆ.
ಜಗತ್ತಿನಾದ್ಯಂತ ಪ್ರತಿ ವರ್ಷ 7.25 ಲಕ್ಷ ಮಂದಿ ಸೊಳ್ಳೆ ಕಚ್ಚಿಸಿಕೊಂಡು ಮರಣ ಹೊಂದುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ವರದಿ ನೀಡಿತ್ತು. ವಿಶ್ವದಾದ್ಯಂತ ವಿಜ್ಞಾನಿಗಳು ಏನೇ ಸಂಶೋಧನೆ ನಡೆಸಿದರೂ, ಸಾರ್ವಜನಿಕರು ಏನೇನೋ ಉಪಾಯ ಮಾಡಿದರೂ ಸೊಳ್ಳೆಗಳ ಸಂತತಿ ಮಾತ್ರ ನಾಶವಾಗುತ್ತಿಲ್ಲ. ಆದರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಧನೇಶ್, “ಸೊಳ್ಳೆ ನಿರ್ಮೂಲನೆಗೆ ಅಧಿಕಾರಿಗಳು ಏನೂ ಮಾಡುತ್ತಿಲ್ಲ. ನೀವಾದರೂ ಅವರಿಗೆ ತಿಳಿ ಹೇಳಿ ಸೊಳ್ಳೆಗಳಿಂದ ಮುಕ್ತಿ ಕೊಡಿಸಿ,’ ಎಂದು ನ್ಯಾಯಾಲಯವನ್ನು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!