ಭ್ರಷ್ಟರನ್ನು ಸುಮ್ಮನೆ ಬಿಡಲ್ಲ ನನಗಾರೂ ಸಂಬಂಧಿ ಇಲ್ಲ


Team Udayavani, Sep 26, 2017, 6:30 AM IST

PTI9_25_2017_000192B.jpg

ಹೊಸದಿಲ್ಲಿ: “ಪ್ರತಿಪಕ್ಷಗಳಿಗೆ ಅಧಿಕಾರ ಎಂದರೆ ಮೋಜು. ಆದರೆ, ನಮಗೆ ಹಾಗಲ್ಲ. ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟದಲ್ಲಿ ಯಾವುದೇ ರಾಜಿಯಿಲ್ಲ. ಭ್ರಷ್ಟರನ್ನು ನಾವು ಸುಮ್ಮನೆ ಬಿಡುವುದೂ ಇಲ್ಲ. ಏಕೆಂದರೆ, ನನಗ್ಯಾರೂ ಸಂಬಂಧಿಕರಿಲ್ಲ.’

ಇದು ಸೋಮವಾರ ಅಂತ್ಯಗೊಂಡ ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಗುಡುಗಿದ ಪರಿ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ 13 ಮಂದಿ ಸಿಎಂಗಳು, 6 ಉಪ ಮುಖ್ಯಮಂತ್ರಿಗಳು, ಸುಮಾರು 60 ಕೇಂದ್ರ ಸಚಿವರು, ಪಕ್ಷದ ಸಂಸದರು, ಶಾಸಕರು ಸೇರಿದ್ದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಎಲ್ಲರೂ ಪಕ್ಷವನ್ನು ಚುನಾವಣೆ ಯಾಚೆಗೂ ಕೊಂಡೊಯ್ಯಬೇಕು ಹಾಗೂ ಜನರ ಜೀವನಮಟ್ಟ ಸುಧಾರಣೆ ಕ್ರಮದಲ್ಲಿ ಸಾಮೂಹಿಕವಾಗಿ ಪಾಲ್ಗೊಳ್ಳಬೇಕು’ ಎಂದು ಕರೆ ನೀಡಿದರು.

ರಾಹುಲ್‌ ವಿರುದ್ಧ ಶಾ ಕಿಡಿ: ಇದಕ್ಕೂ ಮುನ್ನ ಭಾಷಣ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ವಿರುದ್ಧ ಕಿಡಿಕಾರಿದ್ದು ಕಂಡುಬಂತು. “ಕಾಂಗ್ರೆಸ್‌ ವಂಶಾಡಳಿತ, ಓಲೈಕೆಯ ರಾಜಕಾರಣ ಮಾಡಿದರೆ, ನಾವು ಸಾಧನೆಯ ರಾಜಕಾರಣ ಮಾಡುತ್ತಿದ್ದೇವೆ. ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೆಲಸ ಮಾಡಿ ಸ್ವಂತ ಬಲದಿಂದ ಉನ್ನತ ಹುದ್ದೆಗೆ ಏರಿದರೇ ಹೊರತು, ಕುಟುಂಬದ ಮೂಲದಿಂ ದಾಗಿ ಅಲ್ಲ,’ ಎನ್ನುವ ಮೂಲಕ ರಾಹುಲ್‌ಗೆ ಟಾಂಗ್‌ ನೀಡಿದರು. ಇದೇ ವೇಳೆ, ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆ ಖಂಡಿಸಿ ಅ.3ರಿಂದ 15 ದಿನ ಅಲ್ಲಿ ಪಾದಯಾತ್ರೆ ನಡೆಸುವುದಾಗಿಯೂ ಘೋಷಿಸಿದರು.

ನವಭಾರತದ ಕನಸು ನನಸಾಗಿಸುವ ನಿರ್ಣಯ
ಕಾರ್ಯಕಾರಿಣಿಯಲ್ಲಿ ಬಿಜೆಪಿ 6 ಅಂಶಗಳ ನಿರ್ಣಯವನ್ನು ಕೈಗೊಂಡಿದೆ. ಅವೆಂದರೆ, ದೇಶವನ್ನು ಬಡತನ, ಭಯೋತ್ಪಾದನೆ, ಜಾತಿವಾದ, ಕೋಮುವಾದ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಹಾಗೂ ಪ್ರಧಾನಿ ಮೋದಿ ಅವರ 2022ರ ನವಭಾರತದ ಕನಸನ್ನು ನನಸಾಗಿಸುವುದು. ಹೀಗೆಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ನೋಟು ಅಮಾನ್ಯ ಮತ್ತು ಜಿಎಸ್‌ಟಿಯಂಥ ಸುಧಾರಣಾ ಕ್ರಮಗಳನ್ನು ಕಾರ್ಯಕಾರಿಣಿಯಲ್ಲಿ ಶ್ಲಾ ಸಲಾಯಿತು, ನೋಟು ಅಮಾನ್ಯದಿಂದಾಗಿ ಕಾಳಸಂತೆ ಮತ್ತು ಕಪ್ಪುಕುಳಗಳ ಬೆನ್ನುಮೂಳೆ ಮುರಿಯಲಾಗಿದೆ ಎಂದು ಅಭಿಪ್ರಾಯ ಪಡಲಾಯಿತು, ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ನಿರ್ಧಾರವನ್ನು ಬೆಂಬಲಿಸಲಾಯಿತು, ಡೋಕ್ಲಾಂ ವಿವಾದ ಬಗೆಹರಿಸಿದ್ದಕ್ಕೆ ಪ್ರಧಾನಿ ಮೋದಿ ಅವರನ್ನು ಶ್ಲಾ ಸಲಾಯಿತು ಎಂದಿದ್ದಾರೆ. 

ಟಿಎಂಸಿಗೆ ಮುಕುಲ್‌ ರಾಜೀನಾಮೆ; ಬಿಜೆಪಿಯತ್ತ ನಡೆ
ಟಿಎಂಸಿ ರಾಜ್ಯಸಭಾ ಸದಸ್ಯ, ಪಕ್ಷದ ನಂ2 ನಾಯಕ ಮುಕುಲ್‌ ರಾಯ್‌ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದು, ದುರ್ಗಾ ಪೂಜೆಯ ಬಳಿಕ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಬಿಜೆಪಿ ನಾಯಕ ರನ್ನು ಭೇಟಿಯಾದ ಬೆನ್ನಲ್ಲೇ ರಾಯ್‌ ಈ ಘೋಷಣೆ ಮಾಡಿದ್ದು, ಅವರು ಬಿಜೆಪಿಗೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅವರು ಬಿಜೆಪಿಗೆ ಸೇರ್ಪಡೆಯಾದರೆ ಪಶ್ಚಿಮ ಬಂಗಾಲದಲ್ಲಿ ಪಕ್ಷವನ್ನು ಬಲಪಡಿಸುವ ಬಿಜೆಪಿ ಯತ್ನಕ್ಕೆ ಬಲಬರಲಿದೆ. ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅವರನ್ನು 6 ವರ್ಷಗಳ ಅಮಾನತು ಮಾಡಿ ಟಿಎಂಸಿ ಆದೇಶ ಹೊರ ಡಿಸಿದೆ. ಇನ್ನೊಂದೆಡೆ, ಕಳೆದ ವಾರ  ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ರಾಣೆ ಅವರು ಬಿಜೆಪಿ ಅಧ್ಯಕ್ಷ ಅಮಿತ್‌ ಶಾರನ್ನು ಭೇಟಿಯಾಗಿದ್ದು, ಅವರೂ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಬಿಜೆಪಿ ವಂಶಾಡಳಿತದಲ್ಲಿ ನಂಬಿಕೆ ಇಟ್ಟಿಲ್ಲ ಎಂದಾದರೆ, ಸಿಎಂ ವಸುಂಧರಾ ರಾಜೇ, ರಮಣ್‌ ಸಿಂಗ್‌, ಮಾಜಿ ಸಿಎಂ ಪ್ರೇಮ್‌ ಕುಮಾರ್‌ ಧುಮಾಲ್‌ ಅವರ ಮಕ್ಕಳೆಲ್ಲ ಲೋಕಸಭೆಯಲ್ಲಿ ಏನು ಮಾಡುತ್ತಿದ್ದಾರೆ?
– ಮನೀಷ್‌ ತಿವಾರಿ, ಕಾಂಗ್ರೆಸ್‌ ವಕ್ತಾರ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.