ಇಂದು ವಾಸ್ಕೊದ ಬೈನಾದಲ್ಲಿರುವ ಕನ್ನಡಿಗರ ಮನೆ ತೆರವು?
Team Udayavani, Sep 26, 2017, 8:15 AM IST
ಪಣಜಿ (ವಾಸ್ಕೊ): ವಾಸ್ಕೊದ ಬೈನಾದಲ್ಲಿ ಖಾಸಗಿ ಜಾಗದಲ್ಲಿರುವ ಕನ್ನಡಿಗರ 55 ಮನೆಗಳನ್ನು ಮಂಗಳವಾರ (ಸೆ.26) ತೆರವುಗೊಳಿಸಲು ದಕ್ಷಿಣ ಗೋವಾ ಉಪಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಳೆದ ವಾರವಷ್ಟೇ ಈ ಕನ್ನಡಿಗರ ಮನೆ ತೆರವಿಗೆ ತುರ್ತು ತಡೆ ನೀಡಿದ್ದ ಇದೇ ಉಪಜಿಲ್ಲಾಧಿಕಾರಿಗಳು ಇದೀಗ ಇದ್ದಕ್ಕಿದ್ದಂತೆ ಕನ್ನಡಿಗರ ಮನೆ ತೆರವಿಗೆ ಆದೇಶ ಹೊರಡಿಸಿದ್ದಾರೆ.
ಇದರಿಂದಾಗಿ ಬೈನಾದಲ್ಲಿನ ಕನ್ನಡಿಗರು ಮತ್ತೆ ಬೀದಿಗೆ ಬೀಳುವ ಆತಂಕ ಎದುರಾಗಿದೆ. ನಗರಪಾಲಿಕೆಯು ಬೈನಾ ಆಪರೇಶನ್ ತೆರವು ಕಾರ್ಯಾಚರಣೆ ಕೈಗೊಳ್ಳಲು ಸಜ್ಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪರಿಸರದಲ್ಲಿಯೇ ಸುಮಾರು 40ಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯದಾದ ಬಸವಣ್ಣನ ಗುಡಿಯಿದೆ. ಈ ಗುಡಿ ಕೂಡ ತೆರವುಗೊಳ್ಳುವ ಸಾಧ್ಯತೆಯಿದೆ. ಬೈನಾದ ಖಾಸಗಿ ಜಮೀನಿನಲ್ಲಿ ಕಳೆದ 40 ವರ್ಷಗಳಿಂದ ಈ 55 ಕನ್ನಡಿಗರ ಕುಟುಂಬಗಳು ವಾಸಿಸುತ್ತಿದ್ದವು. ಇದು ಚರ್ಚ್ವೊಂದರ ಜಾಗವಾಗಿತ್ತು. ಹಲವು ವರ್ಷಗಳ ನಂತರ ಚರ್ಚ್ ಈ ಜಾಗವನ್ನು ಆನಂದ ಬೋಸ್ ಕಂಪನಿಗೆ ಮಾರಾಟ ಮಾಡಿತ್ತು.
ಈ ಜಾಗವನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಇಲ್ಲಿ ವಾಸಿಸುವ ಕನ್ನಡಿಗರ ಕುಟುಂಬಗಳ ಜವಾಬ್ದಾರಿ ತೆಗೆದುಕೊಳ್ಳುವ ಕುರಿತಂತೆಯೂ ಕಂಪನಿಗೆ ಸೂಚಿಸಿತ್ತು ಎನ್ನಲಾಗಿದೆ. ಆದರೆ, ಸದ್ರಿ ಕಂಪನಿಯು ಅನೇಕ ವರ್ಷಗಳಿಂದ ವಾಸಿಸುತ್ತಿರುವ ಈ ಕನ್ನಡಿಗರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನೂ ನೀಡದೆ ಮನೆ ತೆರವುಗೊಳಿಸಲು ಮುಂದಾಗಿದೆ. ವಾಸ್ಕೊ ಮುರಗಾಂವ ನಗರಪಾಲಿಕೆ ಬೈನಾದಲ್ಲಿರುವ 55 ಕನ್ನಡಿಗರ ಮನೆ ಮಾಲೀಕರಿಗೆ ಸೆ.7 ರಂದು ಮನೆ ಖಾಲಿ ಮಾಡುವಂತೆ ನೋಟಿಸ್ ಜಾರಿಗೊಳಿಸಿತ್ತು. ನಿವಾಸಿಗಳು ಇದರ ವಿರುದ್ಧ ಮುಂಬೈ ಹೈಕೋರ್ಟ್ನ ಗೋವಾ ಖಂಡಪೀಠದ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯ ಈ ಪ್ರಕರಣವನ್ನು ರದ್ದುಗೊಳಿಸಿತ್ತು. ನಂತರ ನಗರಪಾಲಿಕೆ ಸೆ.15 ರಂದು ಮನೆಗಳನ್ನು ತೆರವುಗೊಳಿಸಲು ಸಿದ್ಧತೆ ನಡೆಸಿತ್ತು. ಈ ಸಂದರ್ಭದಲ್ಲಿ ಮನೆಗಳ ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದುಕೊಳ್ಳಲು ಪ್ರಥಮವರ್ಗ ದಂಡಾಧಿ ಕಾರಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಈ ಪ್ರಯತ್ನವೂ ಸಫಲವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್