ಶಾ ಪುತ್ರನ ವ್ಯವಹಾರ ಕುರಿತು ರಾಹುಲ್ ವ್ಯಂಗ್ಯ
Team Udayavani, Oct 21, 2017, 6:45 AM IST
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಮತ್ತೂಂದು ಸುತ್ತಿನ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ಉಪಾ ಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ಗುರಿಯಾಗಿಸಿ ವ್ಯಂಗ್ಯಭರಿತವಾಗಿ ಮಾತನಾಡಿದ್ದಾರೆ.
ಜಯ್ ಶಾ ಅವರು ಮಾನಹಾನಿ ಕೇಸು ದಾಖಲಿಸಿದ ಬಳಿಕ, ಅಹಮದಾಬಾದ್ನ ನ್ಯಾಯಾಲಯವು ಆರೋಪಗ ಳಿಗೆ ಸಂಬಂಧಿಸಿ ಮಧ್ಯಂತರ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್, “ಮಿತ್ರೋಂ, ನಾನು ಇನ್ನು ಶಾ-ಜಾದಾ ವಿರುದ್ಧ ಮಾತಾಡು ವುದಿಲ್ಲ, ಬೇರೆಯವರಿಗೂ ಮಾತನಾಡಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿ ಈ ಹಿಂದೆ ಹೇಳಿದ್ದ, “ನಾನೂ ತಿನ್ನುವುದಿಲ್ಲ, ಇನ್ನೊಬ್ಬರಿಗೂ ತಿನ್ನಲು ಬಿಡುವುದಿಲ್ಲ’ ಎಂಬ ಹೇಳಿಕೆಗೆ ಅಣಕವಾಡಿ ಈ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ರಾಹುಲ್, “ಶಾ-ಜಾದಾಗೆ ಸರ್ಕಾರದಿಂದಲೇ ಕಾನೂನು ನೆರವು? ವೈ ದಿಸ್ ಕೊಲವೆರಿ ಡಾ,’ ಎಂದು ಟ್ವೀಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ