ಆಯೋಗದ ವಿರುದ್ಧ ಚಿದು ಕಿಡಿ: ಬಿಜೆಪಿ ತಿರುಗೇಟು


Team Udayavani, Oct 21, 2017, 7:40 AM IST

Gujarat-Election,-Election-.jpg

ನವದೆಹಲಿ: ಗುಜರಾತ್‌ ಚುನಾವಣೆ ದಿನಾಂಕವನ್ನು ಘೋಷಿಸದೇ ಇರುವ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ವಾಗ್ಧಾಳಿ ನಡೆಸಿದ್ದಾರೆ. 

ಆಯೋಗವು ದಿನಾಂಕ ಘೋಷಣೆ ಮಾಡುವ “ಅಧಿಕಾರ’ವನ್ನು ಪ್ರಧಾನಿ ಮೋದಿ ಅವರಿಗೇ ವಹಿಸಿದಂತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಗುಜರಾತ್‌ ಸಿಎಂ ವಿಜಯ್‌ ರೂಪಾನಿ, “ಕಾಂಗ್ರೆಸ್‌ಗೆ ಚುನಾವಣೆಯ ಭಯ ಹುಟ್ಟಿರುವುದು ಈ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ’ ಎಂದಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್‌ಗಳನ್ನು ಮಾಡಿದ ಚಿದಂಬರಂ, “ಗುಜರಾತ್‌ ಸರ್ಕಾ ರವು ಎಲ್ಲ ಕೊಡುಗೆಗಳನ್ನು ಘೋಷಿ ಸುವವರೆಗೆ ಚುನಾವಣಾ ಆಯೋಗವು ರಜೆಯಲ್ಲಿರುತ್ತದೆ. ಚುನಾವಣಾ ದಿನಾಂಕ ನಿಗದಿಯ ಹೊಣೆಯನ್ನು ಪ್ರಧಾನಿ ಮೋದಿ ಅವರಿಗೇ ಆಯೋಗ ವಹಿಸಿದಂ ತಿದೆ. ತಮ್ಮ ಕೊನೆಯ ರ್ಯಾಲಿಯಲ್ಲಿ ಮೋದಿ ಅವರು ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ,’ ಎಂದು ಹೇಳಿದ್ದಾರೆ.

ಹತಾಶೆಯ ಹೇಳಿಕೆ: ಚಿದಂಬರಂ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ರೂಪಾನಿ, “ಚಿದಂಬರಂ ಹಾಗೂ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಸೋಲುವ ಭಯ ಕಾಡುತ್ತಿದೆ. ಹತಾಶೆಯಿಂದ ಇಂಥ ಹೇಳಿಕೆ ನೀಡುತ್ತಿದ್ದಾರೆ. ಚುನಾವಣಾ ಆಯೋಗವನ್ನು ಟೀಕಿಸುವುದು ಪ್ರಜಾ ಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ,’ ಎಂದಿದ್ದಾರೆ.

ನಾಳೆ ಗುಜರಾತ್‌ಗೆ ಪ್ರಧಾನಿ ಭೇಟಿ: ಭಾನುವಾರ ಪ್ರಧಾನಿ ಮೋದಿ ಅವರು ಗುಜರಾತ್‌ಗೆ ಮತ್ತೆ ಭೇಟಿ ನೀಡಲಿದ್ದು, ಭಾವ್‌ನಗರ ಮತ್ತು ವಡೋದರಾದಲ್ಲಿ ಹಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದು ಪ್ರಸಕ್ತ ತಿಂಗಳಲ್ಲಿ ಪ್ರಧಾನಿ ಮೋದಿ ಅವರ 3ನೇ ಗುಜರಾತ್‌ ಭೇಟಿಯಾಗಿದೆ. ತಮ್ಮ ಕನಸಿನ ಯೋಜನೆಯಾದ ಘೋಘಾದಿಂದ ದಹೇಜ್‌ಗೆ ದೋಣಿ ಸೇವೆಯ ಮೊದಲ ಹಂತವನ್ನು ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲಿ ಅವರು ದೋಣಿಯಲ್ಲೇ ಪ್ರಯಾಣ ಬೆಳೆಸಿ, ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

“ರಾಹುಲ್‌ ಉಳಿಸಿ’ ಅಭಿಯಾನ
ಇನ್ನೊಂದೆಡೆ, ಬಿಜೆಪಿ ವಕ್ತಾರ ಜಿ.ವಿ. ಎಲ್‌. ನರಸಿಂಹ ರಾವ್‌ ಅವರೂ ಚಿದಂಬರಂ ವಿರುದ್ಧ ಹರಿಹಾಯ್ದಿದ್ದು, “ಇದು ರಾಹುಲ್‌ ಉಳಿಸಿ ಅಭಿಯಾನದ ಒಂದು ಭಾಗ,’ ಎಂದಿದ್ದಾರೆ. ಗುಜರಾತ್‌ ಚುನಾವಣೆಯಲ್ಲಿ ಸೋತರೆ ರಾಹುಲ್‌ ಗಾಂಧಿ ಅವ ರನ್ನು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಅಡ್ಡಿಯಾಗುತ್ತದೆ. ಹಾಗಾಗಿ, ರಾಹುಲ್‌ರನ್ನು ರಕ್ಷಿಸುವ ಉದ್ದೇಶದಿಂದ ಇಂಥ ಹೇಳಿಕೆ ನೀಡಲಾಗುತ್ತಿದೆ ಎಂದಿದ್ದಾರೆ. ಜತೆಗೆ, ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಜಿ.ವಿ.ಎಲ್‌. ರಾವ್‌, “ಯಾವುದೇ ರಾಜ್ಯದಲ್ಲಿ 45 ದಿನಗಳಿಗಿಂತ ಹೆಚ್ಚು ಅವಧಿಗೆ ನೀತಿ ಸಂಹಿತೆ ಜಾರಿಯಲ್ಲಿರಬಾರದು. ಹೀಗಾಗಿ, ಆಯೋಗ ಕೈಗೊಂಡ ನಿರ್ಧಾರ ಸರಿಯಿದೆ,’ ಎಂದಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.