ಇಂಡೋ-ರಷ್ಯಾ ಸಮರಾಭ್ಯಾಸ


Team Udayavani, Oct 21, 2017, 6:00 AM IST

Ban21101701Medn.jpg

ನವದೆಹಲಿ: ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರದ ಪ್ರತೀಕವಾಗಿ ಭಾರತ ಹಾಗೂ ರಷ್ಯಾ ದೇಶಗಳು ಇದೇ ಮೊದಲ ಬಾರಿಗೆ 10 ದಿನಗಳ ಜಂಟಿ ಸಮರಾಭ್ಯಾಸವನ್ನು ಶುಕ್ರವಾರದಿಂದ ಆರಂಭಿಸಿವೆ. ರಷ್ಯಾದ ವ್ಲಾದಿವೊಸ್ಟೋಕ್‌ನಲ್ಲಿ ಈ ಸಮರಾಭ್ಯಾಸ ಶುರುವಾಗಿದ್ದು, ಇದರಲ್ಲಿ ಉಭಯ ದೇಶಗಳ ಭೂ ಸೇನೆ, ವಾಯು ಸೇನೆ, ನೌಕಾಪಡೆಯ ಸೈನಿಕರು ಪಾಲ್ಗೊಂಡಿದ್ದಾರೆ.

ಭಾರತೀಯ ಸೇನೆಯಿಂದ 450 ಸಿಬ್ಬಂದಿ ಹಾಗೂ ರಷ್ಯಾದ ಕಡೆಯಿಂದ 1000ಕ್ಕೂ ಹೆಚ್ಚು ಸೇನಾ ತುಕಡಿಗಳು ಪಾಲ್ಗೊಂಡಿವೆ. ಉಭಯ ದೇಶಗಳ ಗಡಿಗಳಲ್ಲಿ ಆಗುತ್ತಿರುವ ಅಕ್ರಮ ಒಳನುಸುಳುವಿಕೆಯಂಥ ಪ್ರಯತ್ನಗಳನ್ನು ನಿಗ್ರಹಿಸುವ ಬಗ್ಗೆ ಈ ಸಮರಾಭ್ಯಾಸದಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಶುಕ್ರವಾರ ಬೆಳಗ್ಗೆ ವ್ಲಾದಿವೊಸ್ಟೋಕ್‌ನಲ್ಲಿ ಸಮರಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ, ಎರಡೂ ರಾಷ್ಟ್ರಗಳ ಭೂ ಸೇನೆ, ವಾಯು ಸೇನೆ ಹಾಗೂ ನೌಕಾಪಡೆಗಳ ಸೈನಿಕರು ಅಕ್ಕಪಕ್ಕದ ಗುಂಪುಗಳಾಗಿ ನಿಂತು ಆಕರ್ಷಕ ಪಥಸಂಚಲನ ನಡೆಸಿದರು. ಬಳಿಕ ಭಾರತೀಯ ಯೋಧರಿಂದ ಸಾಂಪ್ರದಾಯಿಕ ಮಾರ್ಷಲ್‌ ಆರ್ಟ್ಸ್ ಪ್ರದರ್ಶನ ನಡೆಯಿತು.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಕ್ಷಣಾ ಸಚಿವಾಲಯ, “ಭಾರತ ಹಾಗೂ ರಷ್ಯಾಗಳು ತಮ್ಮ ಗಡಿ ಭಾಗಗಳಲ್ಲಿ ಒಂದೇ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಮರಾಭ್ಯಾಸ ನಡೆಸಲಾಗುತ್ತಿದೆ. ಇದು ಎರಡೂ ರಾಷ್ಟ್ರಗಳ ಸೈನಿಕರು ಈ ಸಮಸ್ಯೆಗಳನ್ನು ಎದುರಿಸುವಲ್ಲಿ ಪಡೆದಿರುವ ಅನುಭವ, ಜ್ಞಾನವನ್ನು ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ಗಡಿಯಲ್ಲಿನ ಸವಾಲುಗಳನ್ನು ಎದುರಿಸಲು ಎರಡೂ ದೇಶಗಳ ಸೈನಿಕರಿಗೆ ಹೆಚ್ಚಿನ ಆತ್ಮವಿಶ್ವಾಸ ಸಿಗಲಿದೆ’ ಎಂದು ಆಶಿಸಿದೆ.

ಸಮರಾಭ್ಯಾಸದ ಮಹತ್ವ
ಗಡಿ ಪ್ರದೇಶಗಳಲ್ಲಿ ನೆರೆಯ ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನ ರಾಷ್ಟ್ರಗಳು ರಗಳೆ ತಗೆಯುತ್ತಿರುವ ಹಿನ್ನೆಲೆಯಲ್ಲಿ ಭಾರತ, ತನ್ನ ಮಿತ್ರ ರಾಷ್ಟ್ರಗಳೊಂದಿಗೆ ಇಂಥ ಜಂಟಿ ಸಮರಾಭ್ಯಾಸಕ್ಕೆ ಇತ್ತೀಚೆಗೆ ಭಾರಿ ಮಹತ್ವ ನೀಡುತ್ತಿದೆ. ಇದು ತನ್ನ ಸೇನಾ ತಾಕತ್ತು ಹಾಗೂ ಮಿತ್ರ ರಾಷ್ಟ್ರಗಳ ಕಡೆಯಿಂದ ತನಗಿರುವ ಸೇನಾ ಬೆಂಬಲವನ್ನು ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನವೂ ಆಗಿದೆ. ಕೆಲವು ತಿಂಗಳು ಹಿಂದೆ, ಡೋಕ್ಲಾಂನಲ್ಲಿ ಚೀನಾದ ಸೈನಿಕರು ಭಾರತಕ್ಕೆ ಸಡ್ಡು ಹೊಡೆದು ನಿಂತಾಗಲೂ ಭಾರತ, ಅಮೆರಿಕದ ಸೈನ್ಯದೊಂದಿಗೆ ಕೇರಳದ ಮಲಬಾರ್‌ನಲ್ಲಿ ಜಂಟಿ ಸಮರಾಭ್ಯಾಸ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಂಕಿ-ಅಂಶ:
10 : ಹತ್ತು ದಿನಗಳ ಕಾಲ ನಡೆಯಲಿರುವ ಭಾರತ, ರಷ್ಯಾ ಸಮರಾಭ್ಯಾಸ
450 : ಸಮರಾಭ್ಯಾಸದಲ್ಲಿ ಭಾರತದ ಕಡೆಯಿಂದ ಪಾಲ್ಗೊಳ್ಳುತ್ತಿರುವ ಸೈನಿಕರು
1,000 ಪ್ಲಸ್‌ : ರಷ್ಯಾದಿಂದ ಪಾಲ್ಗೊಳ್ಳುತ್ತಿರುವ ತುಕಡಿಗಳ ಸಂಖ್ಯೆ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.