ಗುಜರಾತ್ಗೆ ಮುನ್ನ ಹಿ.ಪ್ರ. ಚುನಾವಣೆ: ಕಾರಣ ತಿಳಿಸಿದ CEC
Team Udayavani, Oct 23, 2017, 3:56 PM IST
ಹೊಸದಿಲ್ಲಿ : ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನವೇ ಹಿಮಾಚಲ ಪ್ರದೇಶ ಚುನಾವಣೆಯನ್ನು ನಡೆಸಲು ಏಕೆ ತೀರ್ಮಾನಿಸಲಾಯಿತು ಎಂಬುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರು ಇದೀಗ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹವಾಮಾನವೇ ಮುಂತಾಗಿ ಹಲವಾರು ವಿಷಯಗಳು ಈ ರೀತಿಯ ನಿರ್ಧಾರಕ್ಕೆ ಕಾರಣವಾದವು ಎಂದವರು ಹೇಳಿದ್ದಾರೆ.
ಹಿಮಾಚಲ ರಾಜ್ಯದ ಕಿನೋರ್, ಲಾಹೂಲ್ ಸ್ಪಿತಿ ಮತ್ತು ಚಂಬಾ – ಈಮೂರು ಜಿಲ್ಲೆಗಳಲ್ಲಿ ನವೆಂಬರ್ ಅಂತ್ಯದ ವೇಳೆಗೆ ಹಿಮಪಾತ ಆಗುವ ಸಾಧ್ಯತೆ ಇರುವುದರಿಂದ ಮಧ್ಯ ನವೆಂಬರ್ಗೆ ಮುನ್ನವೇ ಚುನಾವಣೆ ನಡೆಸುವುದು ಲೇಸೆಂದು ರಾಜಕೀಯ ಪಕ್ಷಗಳು ಹಾಗೂ ರಾಜ್ಯಾಡಳಿತೆ ಕೋರಿಕೊಂಡಿತ್ತು. ಅಂತೆಯೇ ಆ ಕೋರಿಕೆಯನ್ನು ಮನ್ನಿಸಿ ಗುಜರಾತ್ ಚುನಾವಣೆಗೆ ಮುನ್ನವೇ ಹಿಮಾಚಲ ಪ್ರದೇಶ ಚುನಾವಣೆಯನ್ನು ನಡೆಸಲು ತೀರ್ಮಾನಿಸಲಾಯಿತು ಎಂದವರು ಹೇಳಿದರು.
ಹಿಮಾಚಲ ಪ್ರದೇಶ ಚುನಾವಣೆಯ ಫಲಿತಾಂಶ ಗುಜರಾತ್ ಚುನಾವಣೆಯ ಮೇಲೆ ಯಾವ ರೀತಿಯಲ್ಲೂ ಉಂಟಾಗದಂತೆ ಗುಜರಾತ್ ಚುನಾವಣೆಗಳನ್ನು ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು.
ಗುಜರಾತ್ನಲ್ಲಿ ಈಚೆಗೆ ಉಂಟಾದ ಭೀಕರ ಪ್ರವಾಹದಿಂದಾಗಿ ಅಲ್ಲಿನ ಮೂಲ ಸೌಕರ್ಯಗಳಿಗೆ ವ್ಯಾಪಕ ಹಾನಿ ಉಂಟಾಗಿದ್ದು ಅವುಗಳನ್ನು ಚುನಾವಣೆಗೆ ಮುನ್ನ ಸರಿಪಡಿಸುವ ಅಗತ್ಯವಿದೆ; ಹಾಗಾಗಿ ಗುಜರಾತ್ ಚುನಾವಣೆಗೆ ಕಾಲಾವಕಾಶ ಕಲ್ಪಿಸಲಾಗಿದೆ ಎಂದು ಸಿಇಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ