ಡಿಸೆಂಬರ್ನಿಂದ ಹೊಸ ಶಿಕ್ಷಣ ನೀತಿ ಜಾರಿ: ಕೇಂದ್ರ
Team Udayavani, Oct 24, 2017, 7:25 AM IST
ತಿರುವನಂತಪುರಂ: ಭಾರತದಲ್ಲಿ ಸದ್ಯಕ್ಕಿರುವ ಶಿಕ್ಷಣ ಪದ್ಧತಿಯು ಬ್ರಿಟಿಷರ ಸಾಮ್ರಾಜ್ಯಶಾಹಿಯ ಪ್ರತೀಕದಂತಿದ್ದು, ಇದರಲ್ಲಿನ ಲೋಪಗಳನ್ನು ತಿದ್ದುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೊಸ ಶಿಕ್ಷಣ ನೀತಿಯನ್ನು ಡಿಸೆಂಬರ್ನಲ್ಲೇ ಜಾರಿಗೊಳಿಸಲಿದೆ ಎಂದು ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.
ಹೊಸ ಶಿಕ್ಷಣ ನೀತಿಯ ಬಗ್ಗೆ ಸೋಮವಾರ ಏರ್ಪಡಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ. “”ಎನ್ಡಿಎ ಸರಕಾರದ ಮಹತ್ವಾಕಾಂಕ್ಷೆಯ ಈ ಹೊಸ ಶಿಕ್ಷಣ ನೀತಿಯ ರೂಪುರೇಷೆಗಳು ಅಂತಿಮ ಹಂತದಲ್ಲಿದ್ದು, ಇದೇ ವರ್ಷ ಡಿಸೆಂಬರ್ನಲ್ಲಿ ಹೊಸ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗುವುದು. ಬ್ರಿಟಿಷರು ಭಾರತ ತೊರೆದ ಬೆನ್ನಲ್ಲೇ ನಮ್ಮದೇ ಶೈಲಿಯ ಶಿಕ್ಷಣ ಪದ್ಧತಿಯೊಂದನ್ನು ಜಾರಿಗೆ ತರಬೇಕಿತ್ತು. ಆದರೆ, ವಿಪರ್ಯಾಸವೆಂಬಂತೆ, ಆಗ ಭಾರತದಲ್ಲಿದ್ದ ಶಿಕ್ಷಣ ತಜ್ಞರು, ಈ ವಿಚಾರದಲ್ಲಿ ಬ್ರಿಟಿಷರನ್ನೇ ಅನುಕರಿಸಿದರು. ಹಾಗಾಗಿ, ಹೊಸತೊಂದು ಶಿಕ್ಷಣ ಪದ್ಧತಿ ಜಾರಿಗೆ ತರುವ ಮೂಲಕ ಭಾರತೀಯರಲ್ಲಿ ಬೇರೂರಿರುವ ಸಾಮ್ರಾಜ್ಯಶಾಹಿ ಮನಸ್ಥಿತಿಗಳನ್ನು ಬದಲಾಯಿಸಬೇಕಿದೆ” ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಾಥಮಿಕ ಹಂತದಲ್ಲೇ ಶಿಕ್ಷಣದ ಗುಣಮಟ್ಟ ಸುಧಾರಣೆ, ಅಗ್ಗದ ದರದಲ್ಲಿ ಉನ್ನತ ಶಿಕ್ಷಣದ ಲಭ್ಯತೆ, ಹೆಚ್ಚಿನ ಸಂಖ್ಯೆಯ ಜನರು ಶಿಕ್ಷಣ ಪಡೆಯುವಂತೆ ಮಾಡುವುದು, ಕೌಶಲಾಭಿವೃದ್ಧಿ ಸಹಿತ ಅನೇಕ ಅಂಶಗಳು ಹೊಸ ನೀತಿಯಲ್ಲಿ ಸೇರಿವೆ ಎಂದೂ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ