ರಂಜಿಸಿದ ಭಂಡಾರಿ ಸೇವಾ ಸಮಿತಿಯ ಸಾಂಸ್ಕೃತಿಕ ವೈಭವ


Team Udayavani, Jan 3, 2017, 4:49 PM IST

02-Mum07b.jpg

ನಗರದ  ಪ್ರತಿಷ್ಠಿತ ಜಾತಿಯ  ಸಂಘಟನೆಗಳಲ್ಲಿ  ಭಂಡಾರಿ  ಸೇವಾ ಸಮಿತಿಯೂ ಒಂದು. ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ವಾರ್ಷಿಕ ಭಂಡಾರಿ ಸ್ನೇಹ ಸಮ್ಮಿಲನವು ಡಿ. 25ರಂದು ದಿನಪೂರ್ತಿ ಥಾಣೆ ವಾಗ್ಲೆà ಎಸ್ಟೇಟ್‌ನ ಡಿ’ಸೋಜಾವಾಡಿಯ ಸೈಂಟ್‌ ಲಾರೆನ್ಸ್‌ ಶಾಲಾ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದು ನಾಡಿನ ಸಂಸ್ಕೃತಿ-ಸಂಸ್ಕಾರಗಳನ್ನು ಮೇಳೈಸಿತು.  ಕಚ್ಚಾರು ನಾಗೇಶ್ವರ ಕುಲದೇವರ‌‌ನ್ನು ಸ್ತುತಿಸಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಾಂಸ್ಕೃತಿಕ ವೈಭವವು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಶೇಖರ್‌ ಎಸ್‌. ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಂಬಯಿ ಮಹಾನಗರ ಸೇರಿದಂತೆ ಇನ್ನಿತರ ಉಪನಗರಗಳಲ್ಲಿ ನೆಲೆಯಾಗಿರುವ ಭಂಡಾರಿ ಸಮಾಜ ಬಾಂಧವರು ಒಮ್ಮತದಿಂದ ಒಂದೇ ವೇದಿಕೆಯ ಅಡಿಯಲ್ಲಿ ನೆರೆದು ದಿನವಿಡೀ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಸಮಾಜದ ಪ್ರತಿಭಾವಂತ ಮಕ್ಕಳಿಂದ, ಮಹಿಳೆಯರಿಂದ ಹಾಗೂ ಸದಸ್ಯರಿಂದ ಜಾನಪದ, ಶಾಸ್ತ್ರೀಯ ನೃತ್ಯಗಳು ಪ್ರದರ್ಶನಗೊಂಡು ಸಮಾರಂಭಕ್ಕೆ ಮೆರುಗು ನೀಡಿತು. ಎಳವೆಯ ಮಕ್ಕಳಿಂದ ಹಿಡಿದು ಹಿರಿಯವರೆಗೆ ವೇದಿಕೆಯನ್ನು ಹಂಚಿಕೊಂಡಿರುವುದು ವಿಶೇಷತೆಯಾಗಿತ್ತು. ಉಡುಪಿಯ ಜಯಶೀಲ ಭಂಡಾರಿ ಮತ್ತು ಬಳಗದಿಂದ  “ಮಾಯದ ದೈವ’ ಹಾಸ್ಯ ಪ್ರಹಸನ ಕಾರ್ಯಕ್ರಮವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಯುವಪೀಳಿಗೆಗೆ ದೈವಾರಾಧನೆಯ ಬಗ್ಗೆ ಈ ಪ್ರಹಸನವು ತಿಳಿಹೇಳುವ ಪ್ರಯತ್ನವನ್ನು ಮಾಡಿತು.

ಮುಂಬಯಿಯಲ್ಲಿ ನೆಲೆಯಾಗಿರುವ ಭಂಡಾರಿ ಸಮಾಜ ಬಾಂಧವರಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಭರತನಾಟ್ಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ರಂಗಗಳಲ್ಲಿ ಇಲ್ಲಿನ ಸಮಾಜ ಬಾಂಧವರು ಸಾಧನೆ ಅಪಾರವಾಗಿದೆ. ರಂಗಭೂಮಿಯ ಕಡೆಗೂ ವಿಶೇಷ ಒಲವನ್ನು ಹೊಂದಿರುವ ಭಂಡಾರಿ ಸಮಾಜವು ಹಲವಾರು ಪ್ರತಿಭಾವಂತ ಕಲಾವಿದರನ್ನು ಹೊಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೇ ಸಂದರ್ಭದಲ್ಲಿ  ಸಂಸ್ಥೆಯ ಸದಸ್ಯರು “ಮಾಲ್ತಿನಕ್ಲು ತಿನೆ³àರ್‌’ ತುಳು ನಾಟಕ ಪ್ರದರ್ಶಿಸಿ ಮೆರುಗು ನೀಡಿದರು.

ಸಮಿತಿಯ ಉಪಾಧ್ಯಕ್ಷರಾದ ನ್ಯಾಯವಾದಿ ರಾಮಣ್ಣ ಎಂ. ಭಂಡಾರಿ ಮತ್ತು ಪ್ರಭಾಕರ್‌ ಪಿ. ಭಂಡಾರಿ ಥಾಣೆ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ ಆರ್‌.ಭಂಡಾರಿ, ಗೌರವ ಕೋಶಾಧಿಕಾರಿ ಕರುಣಾಕರ ಜಿ. ಭಂಡಾರಿ, ಜತೆ ಕಾರ್ಯದರ್ಶಿಗಳಾದ ಶಶಿಧರ್‌ ಡಿ. ಭಂಡಾರಿ ಮತ್ತು ಪುರುಷೋತ್ತಮ ಜಿ. ಭಂಡಾರಿ, ಜತೆ ಕೋಶಾಧಿಕಾರಿ ಪ್ರಕಾಶ್‌ ಭಂಡಾರಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಸುಂದರ್‌ ಜಿ. ಭಂಡಾರಿ, ಮಹಿಳಾ ವಿಭಾಗಾಧ್ಯಕ್ಷೆ ಶೋಭಾ ಸುರೇಶ್‌ ಭಂಡಾರಿ ಕಡಂದಲೆ, ಉಪ ಕಾರ್ಯಾಧ್ಯಕ್ಷೆಯರಾದ ಪಲ್ಲವಿ ರಂಜಿತ್‌ ಭಂಡಾರಿ ಮತ್ತು ಅನುಶ್ರೀ ಶಿವರಾಮ ಭಂಡಾರಿ, ಕಾರ್ಯದರ್ಶಿ ರೇಖಾ ಎ.ಭಂಡಾರಿ, ಕೋಶಾಧಿಕಾರಿ ಕು| ಕ್ಷಮಾ ಆರ್‌. ಭಂಡಾರಿ, ಜತೆ ಕಾರ್ಯದರ್ಶಿ ಸರಿತಾ ಬಂಗೇರ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಿದರು. ಒಟ್ಟಿನಲ್ಲಿ ಭಂಡಾರಿ ಸಮಾಜ ಬಾಂಧವರು ಆಯೋಜಿಸಿದ್ದ ಈ ಸಾಂಸ್ಕೃತಿಕ ವೈವಿಧ್ಯವು ಹಲವಾರು ವಿಶೇಷತೆಗಳಿಗೆ ಸಾಕ್ಷಿಯಾಯಿತು.

  ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.