ನೆರೂಲ್‌ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರ: ಬ್ರಹ್ಮಕಲಶೋತ್ಸವ


Team Udayavani, Jan 17, 2017, 4:20 PM IST

16-Mum04b.jpg

ನವಿಮುಂಬಯಿ: ಶ್ರೀ  ಮಣಿಕಂಠ ಸೇವಾ ಸಂಘಂ ನೆರೂಲ್‌ ವತಿಯಿಂದ ನೆರೂಲ್‌ ಪೂರ್ವದ ಫೇಸ್‌ ನಂಬರ್‌-01, ನೆರೂಲ್‌ ಬಸ್‌ ಡಿಪ್ಪೋ ಸಮೀಪ, ನೆರೂಲ್‌ ರೈಲ್ವೇ ನಿಲ್ದಾಣ ರಸ್ತೆಯ, ಸೆಕ್ಟರ್‌-29, ಪ್ಲೋಟ್‌ ನಂಬರ್‌ 16ರಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಸಮಾರಂಭವು ಜ. 15ರಂದು ಪ್ರಾರಂಭಗೊಂಡಿದ್ದು, ಜ. 22ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಲಿದೆ.

ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಶ್ರೀ ಗುರುಪ್ರಸಾದ್‌ ಭಟ್‌ ಘನ್ಸೋಲಿ ಅವರ ಮಾರ್ಗದರ್ಶನದಲ್ಲಿ, ತಂತ್ರಿಗಳಾದ ವಿದ್ವಾನ್‌ ರಾಮಚಂದ್ರ ಬಾಯರಿ ಕಾರ್ಕಳ ಅವರ ನೇತೃತ್ವದಲ್ಲಿ ಕಳತ್ತೂರು ವೇದಮೂರ್ತಿ ಉದಯ ತಂತ್ರಿಗಳ ಉಪಸ್ಥಿತಿಯಲ್ಲಿ ವೇದಾಗಮ ತಜ್ಞರಾದ ಋತ್ವಿಜರ ಸಹಯೋಗದೊಂದಿಗೆ ನಿಗಮಾಗೋಮೋಕ್ತ ವಿಧಿ-ವಿಧಾನದಂತೆ ನಡೆಯಲಿದ್ದು, ಜ. 16ರಂದು ಬೆಳಗ್ಗೆ 9ರಿಂದ ಋತ್ವಿಜರ ಸ್ವಾಗತ, ಶಿಲ್ಪಿ ಮರ್ಯಾದೆ, ನೂತನ ಶಿಲಾಮಯ ದೇಗುಲದ ಪ್ರಾಸಾದ ಪರಿಗ್ರಹ, ಫಲಾನ್ಯಾಸ ಪೂರ್ವಕ ಸಾಮೂಹಿಕ ಶ್ರೀ ದೇವತಾ ಪ್ರಾರ್ಥನೆ, ಪುಣ್ಯಾಹ, ಪಂಚಗವ್ಯ, ದೇವನಾಂದಿ, ಮಹಾ ಸಂಕಲ್ಪ, ಕೃಚ್ಛಾ†ಚರಣೆ, ಆಚಾರ್ಯಾದಿ ಋತ್ವಿಕ ವರಣೆ, ಕಂಕಣಬಂಧ, ತೋರಣ ಸ್ಥಾಪನೆ, ಶ್ರೀ ದೇವರ ಉಗ್ರಾಣ ಮುಹೂರ್ತ, ಬ್ರಹ್ಮಕೂರ್ಚ ಹೋಮ, ಅಥರ್ವಶೀರ್ಷ ಮಹಾಗಣಪತಿ ಯಾಗ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ ನಡೆಯಿತು. ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಸಂಜೆ 5ರಿಂದ ಸಪ್ತಶುದ್ಧಿ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ಪ್ರಾಕಾರ ಬಲಿ, ಅಸ್ತ್ರಕಲಶ ಪ್ರತಿಷ್ಠೆ, ಅಂಕುರಾರ್ಪಣೆ, ಮಂಟಪ ಸಂಸ್ಕಾರ, ಕುಂಡ ಸಂಸ್ಕಾರ ಇತ್ಯಾದಿ ಪೂಜಾ ಕೈಂಕರ್ಯಗಳು ಜರಗಿದವು. ನೂತನ ಮಂದಿರದ ಕಾರ್ಯಾಧ್ಯಕ್ಷ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ, ಅಧ್ಯಕ್ಷ ಕಿಶೋರ್‌ ಕುಮಾರ್‌ ಎಂ. ಶೆಟ್ಟಿ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ಉಪಾಧ್ಯಕ್ಷ  ದಾಮೋದರ ಎಸ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುಂದರ ಯು. ಪೂಜಾರಿ, ಗೌರವ ಕೋಶಾಧಿಕಾರಿ ಸುರೇಶ್‌ ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ಹರಿ ಎಲ್‌. ಶೆಟ್ಟಿ, ಜತೆ ಕೋಶಾಧಿಕಾರಿ ರಾಜೇಂದ್ರ ಪ್ರಸಾದ್‌ ಮಾಡ, ವಿಶ್ವಸ್ತರಾದ ರವಿ ಆರ್‌. ಶೆಟ್ಟಿ, ರಿತೇಶ್‌ ಜಿ. ಕುರುಪು, ಡಾ| ಶಿವ ಮೂಡಿಗೆರೆ, ಪ್ರಕಾಶ್‌ ಮಹಾಡಿಕ್‌, ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಹರೀಶ್‌ ಎನ್‌. ಶೆಟ್ಟಿ, ಮಹೇಶ್‌ ಡಿ. ಪಟೇಲ್‌, ನರೇನ್‌ ಭಾç ಪಟೇಲ್‌ ಹಾಗೂ  ಸದಸ್ಯರಾದ  ರಾಮಕೃಷ್ಣ ಎಸ್‌. ಶೆಟ್ಟಿ, ಅಣ್ಣಪ್ಪ ಕೋಟೆಗಾರ್‌, ಸುರೇಂದ್ರ ಆರ್‌. ಶೆಟ್ಟಿ, ನಿತ್ಯಾನಂದ ವಿ. ಶೆಟ್ಟಿ, ಸದಾಶಿವ ಎನ್‌. ಶೆಟ್ಟಿ, ಮೋಹನ್‌ದಾಸ್‌ ಕೆ. ರೈ, ಮೇಘರಾಜ್‌ ಎಸ್‌. ಶೆಟ್ಟಿ, ಸುರೇಶ್‌ ಆರ್‌. ಶೆಟ್ಟಿ, ವಿಶ್ವನಾಥ ಡಿ. ಶೆಟ್ಟಿ, ಇಂದಿರಾ ಎಸ್‌. ಶೆಟ್ಟಿ, ರಘು ವಿ. ಶೆಟ್ಟಿ, ಹಾಗೂ ನೆರೂಲ್‌ ಶ್ರೀ ಮಣಿಕಂಠ ಸೇವಾ ಸಂಘ, ಧರ್ಮಶಾಸ್ತ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌ ನವಿಮುಂಬಯಿ ಸರ್ವ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೃಂದದವರು ಪಾಲ್ಗೊಂಡು ಸಹಕರಿಸಿದರು. ನಗರದ ವಿವಿಧ ಜಾತೀಯ ಹಾಗೂ ಕನ್ನಡ-ತುಳುಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜ ಸೇವಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಇಂದಿನ ಕಾರ್ಯಕ್ರಮ
ಜ. 17 ರಂದು ಬೆಳಗ್ಗೆ 8ರಿಂದ ಅರಣಿ ಮಥನ, ಭದ್ರದೀಪ ಪ್ರತಿಷ್ಠೆ, ಪೂರ್ಣ ನವಗ್ರಹಯಾಗ, ಸಂಜೀವಿನಿ ಮಹಾ ಮೃತ್ಯುಂಜಯ ಹೋಮ, ಬಿಂಬ ಶುದ್ಧಿ, ಸ್ನಪನ ಕಲಶ, ಬಿಂಬ ಶುದ್ಧಿ ಹೋಮ,  ಶಯ್ನಾಕಲ್ಪನಂ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ, ಸಂಜೆ 5ರಿಂದ ಶಿರ ತ್ತತ್ವ ಹೋಮ, ಭದ್ರಕ ಮಂಡಲ ಪೂಜೆ, ಅಧಿ ವಾಸ ಹೋಮಗಳು, ಶಯ್ನಾಧಿವಾಸ, ಅಷ್ಟ ಬಂಧಾಫಿವಾಸ, ನೂತನ ಪ್ರಸಾದಾಧಿವಾಸ ನಡೆಯಲಿದೆ.

  ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.