ಕನ್ನಡ ವಿಭಾಗ ಮುಂಬಯಿ ವಿವಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ


Team Udayavani, Feb 15, 2017, 3:00 PM IST

14-Mum03a.jpg

ಮುಂಬಯಿ: ಜನಪರ ಸಂವಿಧಾನಿಕವಾಗಿ ಜಾಗೃತಿಯಲ್ಲಿನ ಸುರಕ್ಷಾ ಜಾಗದಲ್ಲಿರುವ ಸಾರ್ವಜನಿಕ ಸಂಸ್ಥೆ ಆಕಾಶವಾಣಿಯಾಗಿದೆ. ಅಕ್ಷರ ಮಾಧ್ಯಮದಿಂದ ಧ್ವನಿ ಮಾಧ್ಯಮಕ್ಕೆ ಸೇತುವೆಯಾಗಿ ಸೇವಾನಿರತ ಆಕಾಶವಾಣಿಗಳಿಗೆ ತಲ್ಲಣಗಳಿಲ್ಲ ಎನ್ನುವುದು ನನ್ನ ಅಭಿಮತ. ಪ್ರಸ್ತುತ ಸಮಾಜಕ್ಕೆ  ಮಾಧ್ಯಮದ ಭಯ ಮತ್ತು ಮಾಧ್ಯಮಗಳಿಗೆ ಸಮಾಜದ ಭಯವಿದೆ. ಆದ್ದರಿಂದ ತುಂಬಾ ಸೂಕ್ಷ್ಮವಾಗಿರುವ ಇವತ್ತಿನ ಸಮಾಜ ಭಯದ ವಾತಾವರಣದಲ್ಲಿ ಮುನ್ನಡೆಯುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪತ್ರಕರ್ತರು ಕತ್ತಿಯ ನೆತ್ತಿಯ ಮೇಲಿದ್ದು, ಒತ್ತಡಕ್ಕೆ ಮಣಿದು ಧಾವಂತದ ಬದುಕು ಸಾಗಿಸುತ್ತಿರುವುದು ಶೋಚನೀಯ. ಆದರೆ ಮಾಧ್ಯಮದಿಂದಲೇ ವಿಶೇಷವಾಗಿ ಚಾನೆಲ್‌ಗ‌ಳು ತೀರ್ಪು ಕೊಡುವ ಕೆಲಸ ಮಾಡುವಂಥದ್ದು ಮಾಧ್ಯಮ ಕ್ಷೇತ್ರವನ್ನು ಮುಜುಗರಕ್ಕೀಡು ಮಾಡುತ್ತಿದೆ ಎಂದು ಆಕಾಶವಾಣಿ ಮಂಗಳೂರು ಇದರ ಕಾರ್ಯಕ್ರಮ ನಿರ್ವಾಹಕ, ಸಾಹಿತಿ ಡಾ| ಸದಾನಂದ ಪೆರ್ಲ ಅಭಿಪ್ರಾಯಿಸಿದರು.

ಫೆ. 13 ರಂದು ಸಾಂತಾಕ್ರೂಜ್‌ ಪೂರ್ವದ ಕಲೀನ ಕ್ಯಾಂಪಸ್‌ನ ರಾನಡೆ ಭವನದ ಕನ್ನಡ ವಿಭಾಗದಲ್ಲಿ ಮುಂಬಯಿ ವಿವಿ ಕನ್ನಡ ವಿಭಾಗ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಡಿಯೋ ದಿನಾಚರಣೆ ಪ್ರಯುಕ್ತ “ಸಮೂಹ ಮಾಧ್ಯಮ ವರ್ತಮಾನದ ತಲ್ಲಣಗಳು’ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಅವರು, ಮುಂಬಯಿ ವಿವಿ ಕನ್ನಡ ವಿಭಾಗದಲ್ಲಿ ಕನ್ನಡಾಂಬೆಯ ವಿಶೇಷ ಕೆಲಸಗಳು ನಡೆಯುತ್ತದೆ. ಆದುದರಿಂದ ಇಲ್ಲಿನ ಈ ವೇದಿಕೆ ನನ್ನ ಪಾಲಿನ ಗೌರವವಾಗಿದೆ. ಭಾವನಾತ್ಮಕ ಸಂಬಂಧಕ್ಕೆ ಇದು ಅವಕಾಶವಾಗಿದೆ. ಇಂದು ಕನ್ನಡದ ವಿಷಯ, ಕಾರ್ಯಕ್ರಮ ಇತ್ಯಾದಿಗಳ ದಾಖಲೀಕರಣದ ಕೊರತೆ ಇದೆ. ಜೀವನದ ಅವಿಭಾಜ್ಯ ಅಂಗಗಳಾಗಿರುವ ಚಾನೆಲ್‌ಗ‌ಳಾಗಲೀ ಇತರ ಮಾಧ್ಯಮಗಳಾಗಲೀ ನೀತಿತತ್ವ ಮೀರಿ ನಡೆಯಬಾರದು. ಮಾಧ್ಯಮಗಳು ವ್ಯಕ್ತಿಕ್ಕಿಂತ ಅಭಿವ್ಯಕ್ತಿ ಪೂರಕವಾಗಬೇಕು. ಪತ್ರಕರ್ತರು ಭಾವನೆಗಳನ್ನು ತಿಳಿಸಬೇಕೇ ಹೊರತು ತಲ್ಲಣ ಗಳಾಗಬಾರದು. ಇಂದು ವಿಶ್ವದಾದ್ಯಂತ ಪ್ರಜ್ಞಾವಂತ ವೀಕ್ಷಕರಿದ್ದ ಕಾರಣ ಸತ್ಯಾಸತ್ಯತೆ, ವಸ್ತುನಿಷ್ಠೆಗೆ ಮಾಧ್ಯಮಗಳು ಪ್ರಾಧಾನ್ಯ ನೀಡುವ ಪ್ರಯತ್ನ ನಡೆಯಬೇಕಾಗಿದೆ. ಅದರ ಬದಲು ಇಲ್ಲಿನ ಮಾಧ್ಯಮಗಳು ಬರೇ ರಾಜಕೀಯಕ್ಕೆ ಒತ್ತುನೀಡಿ ಕಾಲಹರಣ ಮಾಡುವುದು ಸರಿಯಲ್ಲ.  ಬದಲಾಗಿ ಪ್ರಗತಿಪರ ಚಿಂತನೆಗಳಿಗೆ ಮಾಧ್ಯಮ ಗಳು ಸ್ಪಂದಿಸಿದಾಗ ತಲ್ಲಣಗಳು ದೂರವಾಗಲಿದೆ. ಪತ್ರಕರ್ತರ‌ು ವಚನಬದ್ಧತೆ ಮೈಗೂಡಿಸಿ ಕೊಂಡಾಗ ತಲ್ಲಣಮುಕ್ತತೆ ಸಾಧ್ಯವಾಗಬಹುದು. ಇಂದಿನ ಪತ್ರಕರ್ತರಲ್ಲಿ ಅಧ್ಯಯನದ ಕೊರತೆ ಇದೆ. ಕನಿಷ್ಠ ಸಾಮಾನ್ಯ  ಜ್ಞಾನದ ಅರಿವು ಪತ್ರಕರ್ತರಲ್ಲಿದ್ದಾಗ ಫಲಪ್ರದ ವರದಿಗಳ ಮುಖೇನ ಸಮಾಜವನ್ನು ಕಟ್ಟಲು ಸಾಧ್ಯ. ಪರಿಶ್ರಮ ತಾಳ್ಮೆ, ಅಧ್ಯಯನ ಇಲ್ಲದ ಪತ್ರಕರ್ತರಿಂದ ಏನೂ ಅಪೇಕ್ಷೆಪಡುವಂತಿಲ್ಲ ಮಾಧ್ಯಮ ಗಳು ಕೆರಳಿಸುವ ಅಲ್ಲ, ಅರಳಿಸುವ ಕೆಲಸ ಮಾಡಿಬಲಿಷ್ಠ ರಾಷ್ಟ್ರ ನಿರ್ಮಾಣದ ಅಡಿಪಾಯ ಗಳಾಗಬೇಕು ಎಂದು ನುಡಿದರು.

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಲ್ಲಣವಿಲ್ಲದ ಜೀವನ ಅಸಾಧ್ಯ. ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ತಲ್ಲಣಗಳ ಅಗತ್ಯ ಅನಿವಾರ್ಯವಾಗಿದೆ. ಬೃಹತ್‌ ಮಾಧ್ಯಮಗಳು ವ್ಯಾಪಾರೀಕರಣದ ದೃಷ್ಟಿ ಯಿಂದ ವೈಭವೀಕರಿಸುತ್ತಲೇ ಇದ್ದರೂ ಸಣ್ಣಪತ್ರಿಕೆಗಳೇ ಇವತ್ತು ನಿಯತ್ತು ಉಳಿಸಿ ಸಮಾಜ ಬೆಳೆಸುತ್ತಿರುವುದಂತು ಸತ್ಯವಾಗಿದೆ ಎನ್ನುವ ಅಭಿಮಾನ ನನ್ನಲ್ಲಿದೆ.  ಪತ್ರಕರ್ತರು ಎಡಬಲ ಪಂಥೀಯ ವಿಚಾರಕ್ಕಿಂತ ಪಲಾಯನಾವಾದಿಗಳಾಗಬಾರದು. ನಾವೇ ಎನ್ನುವುದರಿಂದ ಮುಕ್ತರಾಗಬೇಕು. ಬದ್ಧತೆ ಕೂಡ ಇಂದಿನ ತಲ್ಲಣವಾಗಿವೆ. ಆದ್ದರಿಂದ ಬದಲಾವಣೆಯ ಘಟ್ಟದಲ್ಲಿ ಮಾಧ್ಯ ಮಗಳು ಶೂನ್ಯದತ್ತ ಸಂಚರಿಸುತ್ತಿವೆ ಎಂದರು.
ಡಾ| ಸದಾನಂದ ಪೆರ್ಲ ಅವರನ್ನು ಡಾ| ಜಿ. ಎನ್‌. ಉಪಾಧ್ಯ ಅವರು ಶಾಲು ಹೊದೆಸಿ, ಸ್ವರ್ಣ ಪದಕವನ್ನಿತ್ತು ಕನ್ನಡಿಗರ ಪರವಾಗಿ ಗೌರವಿಸಿ ಅಭಿವಂದಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಸಂಘಟಕ ಎಚ್‌. ಬಿ. ಎಲ್‌. ರಾವ್‌, ಪತ್ರಕರ್ತರ ಸಂಘದ ಸಲಹಾ ಸಮಿತಿ ಸದಸ್ಯೆ ಡಾ| ಸುನೀತಾ ಎಂ. ಶೆಟ್ಟಿ, ಅನಿತಾ ಪೂಜಾರಿ ತಾಕೋಡೆ, ಜಯರಾಮ ಎಚ್‌. ಪೂಜಾರಿ, ಕನ್ನಡ ವಿಭಾಗದ ರಮಾ ಉಡುಪ, ಮಧುಸೂದನ ರಾವ್‌, ಶಿವರಾಜ್‌ ಕೆ. ಎಸ್‌., ಸುರೇಖಾ ಸುಂದರೇಶ್‌ ದೇವಾಡಿಗ, ಯಜ್ಞನಾರಾಯಣ, ಕುಮುದಾ ಆಳ್ವ, ಗಣಪತಿ ಕೆ. ಮೊಗವೀರ, ಶೈಲಜಾ ಹೆಗಡೆ, ಹೇಮಾ ಸದಾನಂದ್‌ ಅಮೀನ್‌,  ಅನಿತಾ ಎಸ್‌. ಶೆಟ್ಟಿ, ಗೀತಾ ಆರ್‌. ಎಸ್‌. ಮತ್ತಿತರರು ಉಪಸ್ಥಿತರಿದ್ದು  ಸಂವಾದದಲ್ಲಿ ಪಾಲ್ಗೊಂಡರು.
ಮುಂಬಯಿ ಆಕಾಶವಾಣಿ ಕನ್ನಡ ವಿಭಾಗದ ಕಾರ್ಯಕ್ರಮ ನಿರ್ವಾಹಕಿ ಸುಶೀಲಾ ಎಸ್‌. ದೇವಾಡಿಗ ಸ್ವಾಗತಗೀತೆ ಹಾಡಿದರು. ಪತ್ರಕರ್ತರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ರೋನ್ಸ್‌ ಬಂಟ್ವಾಳ್‌ ಸ್ವಾಗತಿಸಿದರು. ಕನ್ನಡ ವಿಭಾಗದ ಸಹಾಯಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ಕಾರ್ಯಕ್ರಮ  ನಿರ್ವಹಿಸಿದರು. ಪತ್ರಕರ್ತರ ಭವನ ಸಮಿತಿಯ ಕಾರ್ಯಾಧ್ಯಕ್ಷ ಡಾ| ಶಿವ ಎಂ. ಮೂಡಿಗೆರೆ ವಂದಿಸಿದರು.

ಪ್ರಚಾರದಲ್ಲಿರುವ ಜನರೇ ಬಹಳ ತಲ್ಲಣದಲ್ಲಿ ಇದ್ದಾರೆ. ಇವತ್ತಿನ ಮಾನವ ಜೀವನವೇ ತಲ್ಲಣದಾಯಕವಾಗಿದ್ದು, ತಲ್ಲಣವಿಲ್ಲದ ಜನಜೀವನ ಶೂನ್ಯವಾಗಿರುತ್ತದೆ. ಸಂಶೋಧಕರು ಹುಡುಕಾಡಿ ಕಲೆ ಹಾಕುತ್ತಾ ಶೋಧನೆ ಮಾಡಬೇಕೇ ಹೊರತು ಮತ್ತೂಬ್ಬರನ್ನು ಅನುಕರಿಸಿ  ಸಂಶೋಧನೆ ಮಾಡಕೂಡದು. ಕಾಡಿನ ಮರದಂತಿದ್ದು ವಸ್ತುನಿಷ್ಠೆ, ಭಿನ್ನತೆಗಳ ಬಗ್ಗೆ ಅರಿವು ಹೊಂದುವ ಅಗತ್ಯ ಸಂಶೋಧಕರಿಗಿದೆ. ಆಳವಾದ ಶೋಧನೆಯಿಂದ ಸತ್ಯವೂ, ಸತ್ಯದಿಂದ ಸಂತೋಷವೂ, ಸಂತೋಷದಿಂದ ಸಂಶೋಧನಾ ಫಲಪ್ರದವಾದಾಗ ಆತ್ಮ ಸಂತೋಷವಾಗುವುದು. ಇಂತಹ ಸಂಶೋಧನೆಗಳೇ ಅಮೂಲ್ಯವಾಗಿರುತ್ತದೆ 
 – ಬಾಬು ಶಿವ ಪೂಜಾರಿ (ಸಂಪಾದಕರು: ಗುರುತು ಮಾಸಿಕ).

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಕನ್ನಡ ವಿಭಾಗದ ಶೈಕ್ಷಣಿಕ ಪಾಲುದಾರರು ಇದ್ದಂತೆ. ಬಹುಜನ ಹಿತಾಯ ಬಹುಜನ ಸುಖಾಯ ಎನ್ನುವ ಆಕಾಶವಾಣಿಯ ಧ್ಯೇಯವಾಕ್ಯದಂತೆ ನಿಜಾರ್ಥದ ಪತ್ರಕರ್ತರಾಗಿ ಶ್ರಮಿಸುವ ಡಾ| ಪೆರ್ಲರ ಸೇವೆ ಅನುಕರಣೀಯ. ಸದ್ಯ ಆತಂಕದ ಅರಿವು ಮೂಡಿಸುವ ಸಮೂಹ ಮಾಧ್ಯಮಗಳು ಎತ್ತ ಸಾಗುತ್ತಿವೆ ಎನ್ನುವುದೇ ಇಂದಿನ ಪ್ರಶ್ನೆಯಾಗಿ ಕಾಡುತ್ತಿದೆ. ಇದರ ಮಧ್ಯೆ ಇಂತಹ ಒಂದು ಕಾರ್ಯಕ್ರಮ ಪತ್ರಿಕೋದ್ಯಮ ಮತ್ತು ಸಮಾಜದ ಸೌಹಾರ್ದ ವಾತಾವರಣ ಬೆಳೆಸುವಲ್ಲಿ ಫಲದಾಯಕವಾಗ ಬಲ್ಲದು 
    – ಡಾ| ಜಿ. ಎನ್‌. ಉಪಾಧ್ಯ (ಮುಖ್ಯಸœರು: ಕನ್ನಡ ವಿಭಾಗ ಮುಂಬಯಿ ವಿವಿ).   

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.