ಕುರ್ಲಾ ಬಂಟರ ಭವನದ ಸಂಕುಲದಲ್ಲಿ ಬಂಟಥಾನ್-2017ಕ್ಕೆ ಚಾಲನೆ
Team Udayavani, Mar 28, 2017, 4:52 PM IST
ಮುಂಬಯಿ: ಬಂಟರ ಸಂಘ ಮುಂಬಯಿ ವತಿಯಿಂದ ಬಂಟಥಾನ್-2017 ಸ್ಪರ್ಧೆಯು ಮಾ. 26ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಸಂಕೀರ್ಣದಲ್ಲಿ ಬಂಟ ಸಮಾಜ ಬಾಂಧವರಿಗಾಗಿ ಈ ವರ್ಷ ಬಂಟಥಾನ್ನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಯನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರು ರಿಬ್ಬನ್ ಬಿಡಿಸಿ ಉದ್ಘಾಟಿಸಿ ಚಾಲನೆ ನೀಡಿದರು. ಬಂಟರ ಸಂಘ ಯುವ ವಿಭಾಗವು ಸಂಘದ ಸಿಟಿ ಪ್ರಾದೇಶಿಕ ಸಮಿತಿಯ ಸಹಕಾರದೊಂದಿಗೆ ಯುವ ರನ್ ಬಂಟಥಾನ್-2017 ನಡೆದಿದ್ದು, ಸುಮಾರು 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.
ಉದ್ಘಾಟನಾ ಸಂಭ್ರಮದಲ್ಲಿ ಬಂಟರ ಸಂಘ ಮುಂಬಯಿ ಗೌರವ ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್ ವಿ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಭುಜಂಗ ಎಂ. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಲತಾ ಪಿ. ಶೆಟ್ಟಿ, ಬಾಲಿವುಡ್ ನಟ ಹರೀಶ್ ವಾಸು ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಪ್ರತೀಕ್ ಶೆಟ್ಟಿ, ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಐಕಳ ಗುಣಪಾಲ್ ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಸಮನ್ವಯಕ ಕೃಷ್ಣ ವಿ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕಲ್ಪನಾ ಕೆ. ಶೆಟ್ಟಿ, ಯುವ ವಿಭಾಗದ ಉಪ ಕಾರ್ಯಾಧ್ಯಕ್ಷ ನವೀನ್ ವಿ. ಶೆಟ್ಟಿ ಮಿಜಾರ್, ಯುವ ವಿಭಾಗದ ಕಾರ್ಯದರ್ಶಿ ಶ್ರೀಮಾ ಶೆಟ್ಟಿ, ಕೋಶಾಧಿಕಾರಿ ಸುಶಾಂತ್ ಶೆಟ್ಟಿ, ಜತೆ ಕಾರ್ಯದರ್ಶಿ ಧೀರಜ್ ಶೆಟ್ಟಿ, ಜತೆ ಕೋಶಾಧಿಕಾರಿ
ಶರತ್ ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಉಪ ಕಾರ್ಯಾಧ್ಯಕ್ಷ ಸುರೇಶ್ ಎಸ್. ಶೆಟ್ಟಿ, ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಬಂಟರ ಸಂಘದ ಪದಾಧಿಕಾರಿಗಳು, ಸದಸ್ಯರು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ