ಪ್ರೇಕ್ಷಕರಿಗೆ ಹೊಸತನದ ಅನುಭವ ನೀಡಿದ ಸೀತಾಂತರಾಳ


Team Udayavani, Mar 30, 2017, 3:00 PM IST

27-Mum01a.jpg

ಧಾರ್ಮಿಕ ಮಹಾ ಕಾವ್ಯಗಳಾದ ರಾಮಾಯಣ  ಹಾಗೂ ಮಹಾಭಾರತ ಇವುಗಳನ್ನು ಮನನ ಮಾಡಿದಷ್ಟೂ  ಅಡಕವಾಗಿರುವ ಗಹನ ವಿಚಾರಗಳನ್ನು ಅರ್ಥೈಸುವಲ್ಲಿ ಸಾಧ್ಯವಾಗುತ್ತದೆ. ಆದರೆ ಇವುಗಳಲ್ಲಿ ಬರುವ ವಿಭಿನ್ನ ಪಾತ್ರಗಳ ಬಗ್ಗೆ ವೈಚಾರಿಕ ವಿಶ್ಲೇಷಣೆಗಳನ್ನು ನಡೆಸುತ್ತಾ ಹೋದಂತೆ ಪ್ರತಿಯೊಬ್ಬರೂ ಅವರವರಿಗೆ ಕಂಡಂತೆ ವಿಭಿನ್ನ ದೃಷ್ಟಿಕೋನದೊಂದಿಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ರುವುದನ್ನು  ಕಾಣಬಹುದಾಗಿದೆ. ಇದೇ ರೀತಿ ಕನ್ನಡ ಸಂಘ ಪುಣೆಯ ಕೇತ್ಕರ್‌ ರಸ್ತೆಯಲ್ಲಿರುವ ಕನ್ನಡ ಮಾಧ್ಯಮ ಹೈಸ್ಕೂಲ್‌  ಸಭಾಗೃಹದಲ್ಲಿ ಮಾ. 15 ರಂದು ಪ್ರಸ್ತುತಗೊಂಡ ಜಾಗತಿಕ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ  ಕರ್ನಾಟಕದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದ ಕಲಾವಿದೆ ಮಂಜುಳಾ ಬಾದಾಮಿಯವರಿಂದ ಪ್ರದರ್ಶನಗೊಂಡ ಏಕಪಾತ್ರಿ ನಾಟಕ ಸೀತಾಂತರಾಳ  ವಿಭಿನ್ನ ವಿಶ್ಲೇಷಣೆಯನ್ನು ಪ್ರಸ್ತುತಪಡಿಸಿದ್ದು ಪ್ರೇಕ್ಷಕರನ್ನು ಹೊಸತೊಂದು ಚಿಂತನೆಗೆ ಹಚ್ಚಿದೆ.

ರಾಮಾಯಣದಲ್ಲಿ ತುಂಬು ಬಸುರಿ ಸೀತೆಯನ್ನು ರಾಮ ವನವಾಸಕ್ಕೆ ಕಳುಹಿಸುವ ಮತ್ತು ಆಕೆ  ಕಾನನದಲ್ಲಿ ಅನುಭವಿಸುವ ಯಾತನೆಯನ್ನು ಧೈರ್ಯದಿಂದ  ಮನಮುಟ್ಟುವಂತೆ ಪ್ರತಿಬಿಂಬಿಸುವ ಈ ನಾಟಕ ಅಂದಿನ ಕಾಲದಲ್ಲೂ ಮಹಿಳಾ ಸಬಲೀಕರಣಕ್ಕಾಗಿ ಸೀತೆಯ ಆದರ್ಶವನ್ನು ಸಾರುವ ಮಾರ್ಮಿಕ ನಾಟಕವೆಂಬುದು ಲೇಖಕರ ಅಭಿಪ್ರಾಯವಾದರೂ ರಾಮನನ್ನು ಅತಿಯಾಗಿ ವೈಭವೀಕರಿಸುವ ಜನರಿಗೆ ಅಥವಾ ಶ್ರೀ ರಾಮಚಂದ್ರನನ್ನು  ಸರ್ವೋತ್ತಮ ದಾರ್ಶನಿಕ ವ್ಯಕ್ತಿತ್ವವೆಂದು ನಂಬಿರುವ ಜನರಿಗೆ ಇದು ಮನಸ್ಸಿಗೆ ಹಿತ ನೀಡಿಲ್ಲ ಎಂಬುದನ್ನು ನಾಟಕದ ನಂತರ ಕೆಲವೊಂದು ಪ್ರೇಕ್ಷಕರ ಮಾತಿನಿಂದ ಕೇಳಿಬಂತು.

ಇಲ್ಲಿ ಸೀತೆ ರಾಮನ ಬಗ್ಗೆ ಅತಿಯೆನಿಸುವ ಹಾಗೆ ದ್ವೇಷಿಸುವ ಹಂತಕ್ಕೆ ತನ್ನ ಮನೋವೇದನೆಯನ್ನು ಪರಿಪರಿಯಾಗಿ ತೆರೆದಿಟ್ಟಿರುವುದೇ  ಕಾರಣವೆನ್ನಬಹುದಾಗಿದೆ. ವಸ್ತುಸ್ಥಿತಿಯ ಅಭಿನಯಕ್ಕೆ ಬರುವುದಾದರೆ ಮಂಜುಳಾ ಬಾದಾಮಿಯವರ ಮನೋಜ್ಞ ಅಭಿನಯಕ್ಕೆ ಮಾರುಹೋಗಬೇಕಾಗಿದೆ.  ಅರ್ಥಗರ್ಭೀತವಾಗಿ ಪಾತ್ರವನ್ನು ನಿರೂಪಿಸಿದ ರೀತಿ, ಮಾತುಗಳ ಸ್ಪಷ್ಟತೆ  ಅದ್ಭುತವಾಗಿತ್ತು.

ಈ ನಾಟಕದ ಲೇಖಕ ಪ್ರಸಿದ್ಧ ಪತ್ರಕರ್ತ, ಲೇಖಕ  ಶಶಿಕಾಂತ ಯಡಹಳ್ಳಿಯವರು ಕನ್ನಡ ರಂಗಭೂಮಿಯ ಒಬ್ಬ ಕ್ರಿಯಾಶೀಲ ನಿರ್ದೇಶಕ  ವೈ. ಡಿ. ಬಾದಾಮಿಯವರ ನಿರ್ದೇಶನ ಹಾಗೂ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾರ್ಗದರ್ಶನದಲ್ಲಿ ಪ್ರದರ್ಶನಗೊಂಡಿತು. ನಾಟಕದ ಕೊನೆಗೆ ಕನ್ನಡ ಸಂಘದ ಉಪಾಧ್ಯಕ್ಷೆ  ಇಂದಿರಾ ಸಾಲ್ಯಾನ್‌ ಸಂಘದ ವತಿಯಿಂದ ಮಂಜುಳಾ ಬಾದಾಮಿಯವರನ್ನು ಗೌರವಿಸಿದರು.

ಈ ಸಂದರ್ಭ ಸಂಘದ ಕೋಶಾಧಿಕಾರಿ ಬಾಬು  ರಾವ್‌, ಜನಸಂಪರ್ಕಾಧಿಕಾರಿ ರಾಮದಾಸ ಆಚಾರ್ಯ, ಕನ್ನಡ ಮಾಧ್ಯಮ ಹೈಸ್ಕೂಲ್‌  ಪ್ರಾಚಾರ್ಯ ಚಂದ್ರಕಾಂತ ಹರ್ಕುಡೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು, ಶಿಕ್ಷಕ  ವೃಂದ ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ವಿಶೇಷ ಪ್ರಯೋಗವು ಕಲಾಭಿಮಾನಿಗಳಿಗೆ ಹೊಸತೊಂದು ಅನುಭವವನ್ನು ನೀಡಿರುವುದಂತು ಅಕ್ಷರಶಃ ನಿಜ.

ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.