ಮರೋಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಮಹೋತ್ಸವ
Team Udayavani, Apr 22, 2017, 5:06 PM IST
ಮುಂಬಯಿ: ಅಂಧೇರಿ ಪೂರ್ವ ಮರೋಲ್ ಪೈಪ್ಲೈನ್ ರಾಮಲೀಲಾ ಮೈದಾನದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಮಹೋ ತ್ಸವವು ದೇವಾಲಯದ ಆಡಳಿತ ಮೊಕ್ತೇಸರ ಶ್ರೀಕಾಂತ್ ಸುವರ್ಣ ಹಾಗೂ ಸರ್ವ ಸದಸ್ಯರ ಮುಂದಾಳತ್ವದಲ್ಲಿ ವಿವಿಧಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎ. 14ರಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಎ. 14ರಂದು ಉಷಾ ಪೂಜೆ, ಬಲಿಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ತೋರಣ ಮುಹೂರ್ತ, ಗಣಪತಿ ಯಾಗ, ಪಂಚಾಮೃತ ಅಭಿಷೇಕ, ಶ್ರೀದೇವಿಗೆ 49 ಕಲಶಾಭಿಷೇಕ, ವಿಶೇಷ ಪೂಜೆ, ಆಶ್ಲೇಷ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.
ಎ. 17ರಂದು ಸಂಜೆ ರಂಗ ಪೂಜೆಯನ್ನು ಆಯೋಜಿ ಸಲಾಗಿತ್ತು. ಇದೇ ಸಂದರ್ಭದಲ್ಲಿ ದೇವರ ಬಲಿ ಉತ್ಸವದ ಮೆರವಣಿಗೆ ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಸಾರುವ ವಿವಿಧ ಪ್ರಾತ್ಯಕ್ಷಿಕೆಗಳು, ಹುಲಿವೇಷ, ಯಕ್ಷಗಾನ ವೇಷ, ಭಜನ ತಂಡ ಇತ್ಯಾದಿಗಳು ಮೆರವಣಿಗೆಗೆ ಮೆರುಗು ನೀಡಿತು. ದಿನೇಶ್ ಕೋಟ್ಯಾನ್ ಬಳಗದವರಿಂದ ಚೆಂಡೆ, ಬ್ಯಾಂಡು, ವಾದ್ಯ ಮೇಳ, ಚಿಣ್ಣರಿಂದ ಪೌರಾಣಿಕ ವೇಷಗಳು, ಅಶೋಕ್ ಕೊಡ್ಯಡ್ಕ ಬಳಗದವರಿಂದ ತವರೂರಿನ
ತಂಡದಿಂದ ಹುಲಿವೇಷ, ಮಹಿಳೆಯರ ಕಲಶ ಸ್ವಾಗತ ದೊಂದಿಗೆ ಶೋಭಾಯಾತ್ರೆಯು ನಡೆಯಿತು.
ಸಂಜೆ 7ರಿಂದ ದೇವಸ್ಥಾನದಿಂದ ಹೊರಟು ನಗರ ಪ್ರದಕ್ಷಿಣೆಗೈದು ರಾತ್ರಿ 11.30ರ ಸುಮಾರಿಗೆ ದೇವಸ್ಥಾನಕ್ಕೆ ಮರಳಿತು. ಕೊನೆಯಲ್ಲಿ ವಿಶೇಷ ಪೂಜೆ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.
ಸಾವಿರಾರು ಭಕ್ತಾದಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಸೇವಕರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ದೇವಾಲಯದ ಆಡಳಿತ ಮೊಕ್ತೇಸರ ಶ್ರೀಕಾಂತ್ ಸುವರ್ಣ ಮತ್ತು ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ