ಮಸ್ಕತ್: ನಟ,ನಿರ್ದೇಶಕ ಡಾ| ರಾಜಶೇಖರ್ ಕೋಟ್ಯಾನ್ ಗೆ ಸನ್ಮಾನ
Team Udayavani, May 6, 2017, 9:31 AM IST
ಮಸ್ಕತ್: ಮಸ್ಕತ್ನ ಅಲ್ ಫಲಾಜ್ ಹೋಟೆಲ್ನ ಗ್ರಾಂಡ್ ಹಾಲ್ನಲ್ಲಿ ಒಮಾನ್ ಬಿಲ್ಲವಾಸ್ ಸಂಘಟನೆಯ ವತಿಯಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಎಸ್. ಕೆ. ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಒಮಾನ್ ಬಿಲ್ಲವಾಸ್ ಸಂಘಟನೆಯು ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಸಂಸ್ಥೆಯ ಸಹಯೋಗದಲ್ಲಿ ಪ್ರತೀ ವರ್ಷವೂ ನೂರಾರು ಬಡ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಕಾರಣಿಕ ಪುರುಷರಾದ ಕೋಟಿ ಚೆನ್ನಯರು, ಮಾತೆ ದೇಯಿ ಬೈದ್ಯೆತಿ ಹಾಗೂ ಗುರು ಸಾಯನ ಬೈದ್ಯರ ವಂಶಸ್ಥರು ಸಾವಿರಾರು ವರ್ಷಗಳಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ನಲ್ಲಿ ಆರಾಧಿಸಿಕೊಂಡು ಬಂದಂತಹ ಆದಿ ಧರ್ಮದೈವ ಧೂಮಾವತಿಯ ದೇವಸ್ಥಾನದ ಜೀರ್ಣೋದ್ಧಾರದ ಸಂಪೂರ್ಣ ವೆಚ್ಚವನ್ನು ಒಮಾನ್ ಬಿಲ್ಲವಾಸ್ ಸಂಸ್ಥೆ ಆರಂಭದ ಹಂತದಲ್ಲಿಯೇ ವಹಿಸಿಕೊಂಡಿದೆ. ಈ ಸಂದರ್ಭ ಡಾ| ರಾಜಶೇಖರ್ ಕೋಟ್ಯಾನ್ ಅವರನ್ನು ಸಮ್ಮಾನಿಸಲಾಯಿತು. ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪುನರುತ್ಥಾನದ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕೊಲ್ಲಿ ರಾಷ್ಟ್ರಗಳ ಬಿಲ್ಲವ ಮುಖಂಡರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಟ, ನಿರ್ದೇಶಕ ಡಾ| ರಾಜಶೇಖರ್ ಕೋಟ್ಯಾನ್, ಮುಂಬಯಿ, ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ್ ಕೋಟ್ಯಾನ್, ಉದ್ಯಮಿ ಹರೀಶ್ ಸಾಲ್ಯಾನ್ ಮುಂಬಯಿ, ಒಮಾನ್ ಬಿಲ್ಲವಾಸ್ ಸಂಘಟನೆಯ ಗೌರವ ಅಧ್ಯಕ್ಷ ಅಶೋಕ್ ಸುವರ್ಣ, ಉಮೇಶ್ ಬಂಟ್ವಾಳ್, ಒಮಾನ್ ಬಿಲ್ಲವಾಸ್ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ಸುಜಿತ್ ಅಂಚನ್ ಭಾಗವಹಿಸಿದ್ದರು. ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕಂಕನಾಡಿ ಅವರ ಸಂದೇಶವನ್ನು ಸಭೆಯಲ್ಲಿ ವಾಚಿಸಲಾಯಿತು.
ಒಮಾನ್ ಬಿಲ್ಲವಾಸ್ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ, ನೃತ್ಯ, ನಾಟಕ ನಡೆಯಿತು. ಉಪಾಧ್ಯಕ್ಷ ಡಾ| ಸಿ.ಕೆ. ಅಂಚನ್ ಸ್ವಾಗತಿಸಿ, ಸುಚೇತನಾ ಅಂಚನ್ ಹಾಗೂ ಉಮೇಶ್ ಜಪ್ಪು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?