ಬಹ್ರೈನ್‌ ಬಿಲ್ಲವಾಸ್‌ ಗುರು ಸೇವಾ ಸಮಿತಿಯ ವಾರ್ಷಿಕ ವರ್ಧಂತ್ಯುತ್ಸವ


Team Udayavani, May 17, 2017, 4:27 PM IST

14-Mum02a.jpg

ಮುಂಬಯಿ: ಬಹ್ರೈನ್‌ ಬಿಲ್ಲವಾಸ್‌ ಇದರ ಗುರು ಸೇವಾ ಸಮಿತಿಯ 15 ನೇ ವಾರ್ಷಿಕ ವರ್ಧಂತ್ಯುತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮನಾಮದ ಶ್ರೀ ಕೃಷ್ಣ  ದೇವಾಲಯದ ಸಭಾಗೃಹದಲ್ಲಿ ಮೇ 5 ರಂದು ಹಮ್ಮಿಕೊಳ್ಳಲಾಗಿತ್ತು. ಧಾರ್ಮಿಕ ಕಾರ್ಯಕ್ರಮವಾಗಿ ಪ್ರಾರಂಭದಲ್ಲಿ ಸಾಮೂಹಿಕ ಶ್ರೀ  ಸತ್ಯನಾರಾಯಣ ಮಹಾಪೂಜೆ ಹಾಗೂ   ಬಹ್ರೈನ್‌  ಬಿಲ್ಲವಾಸ್‌ ಇದರ ಗುರು ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.

ಶ್ರೀ ಸತ್ಯನಾರಾಯಣ ಕಥಾ ಪಾರಾಯಣ ಮತ್ತು ಪೂಜೆಯ ವಿಧಿ – ವಿಧಾನಗಳನ್ನು ವಿಶೇಷವಾಗಿ ಆಮಂತ್ರಿತರಾದ ಪುರೋಹಿತರಾದ ಗುರುರಾಜ್‌ ಉಡುಪ ನಿಡ್ಡೋಡಿ, ಮಂಗಳೂರು ಹಾಗು ಜಯಪ್ರಕಾಶ ಬೆಂಗ್ರೆಯವರು ನಡೆಸಿ ಕೊಟ್ಟರು. ಅಜಿತ್‌ ಬಂಗೇರ ಅವರ ಅಧ್ಯಕ್ಷತೆ ಯಲ್ಲಿ ನಡೆದ ಈ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮದ ಯಶಸ್ಸಿಗೆ ಸಂಘದ ಇತರ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಿತಿಯ ಆಡಳಿತ ಮಂಡಳಿಯ ಸದಸ್ಯರ ಸಂಪೂರ್ಣವಾಗಿ ಸಹಕರಿಸಿದರು. ಈ ಸಂದರ್ಭ  ಭಜನ ಕಾರ್ಯಕ್ರಮವು ನೆರವೇರಿತು. 

ಪೂಜಾ ಕಾರ್ಯಕ್ರಮದ ಬಳಿಕ 2017-2018 ನೇ ಸಾಲಿನ ನೂತ ಆಡಳಿತ ಮಂಡಳಿ ಸದಸ್ಯರ ಪದಗ್ರಹಣ ಸಮಾರಂಭವು ನಡೆಯಿತು. ಸಮಾರಂಭದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ರಾಜ್‌ಕುಮಾರ್‌, ರಾಘು ಪೂಜಾರಿ ಮತ್ತು  ಕೃಷ್ಣ ಸುವರ್ಣ, ಹಾಲಿ ಅಧ್ಯಕÏರಾದ ಅಜಿತ್‌  ಬಂಗೇರ ಮತ್ತು ಆಡಳಿತ ಮಂಡಳಿ ಸದಸ್ಯರು,  ಶ್ರೀ  ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಈಗಾಗಲೇ ಪ್ರಾರಂಭವಾಗಿರುವ ದೇಯಿ ಬೈದೆತಿ, ಕೋಟಿ-ಚೆನ್ನಯ ಮೂಲಸ್ಥಾನಗಳ ನಿರ್ಮಾಣ ಕಾರ್ಯಕ್ಕೆ  ಕೈ ಜೋಡಿಸಲು ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದರು.

ಇಸ್ಕಾನ್‌ ಬಹ್ರೈನ್‌ ನ ದಯಾಲ್‌ ಚಂದ್ರ ಪ್ರಭು ಅವರು ಹರಿ ನಾಮದ  ಪ್ರಾಮುಖ್ಯತೆಯ ಬಗ್ಗೆ ಪ್ರವಚನ ನೀಡಿದರು. ಪೂಜಾ ಕಾರ್ಯಕ್ರಮವು ಮಹಾ ಮಂಗಳಾರತಿ ಮತ್ತು ತೀರ್ಥಪ್ರಸಾದ ವಿತರಣೆಯೊಂದಿಗೆ ಮುಕ್ತಾಯವಾಯಿತು. ಸ್ಥಳೀಯ ವಿವಿಧ ಜಾತೀಯ ಬಾಂಧವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಸಾಧಕರು, ಅನ್ಯಭಾಷಿಕ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರ ಮಹಾಪ್ರಸಾದ  ರೂಪದಲ್ಲಿ ಅನ್ನ ಸಂತರ್ಪಣೆ ನಡೆಯಿತು. ವಿವಿಧ ಕಾರ್ಯಕ್ರಮಗಳನ್ನು ಸಾಂಸ್ಕೃತಿಕ ಸಮಿತಿಯ  ಕಾರ್ಯದರ್ಶಿ ಪ್ರದೀಪ್‌ ಸುದೇಕರ್‌ ಹಾಗೂ ಖುಶಿ ಅಶೋಕ್‌ ಇವರು ನಿರೂಪಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.