ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬಯಿ:ತವರೂರಿನಲ್ಲಿ ಯಕ್ಷಗಾನ
Team Udayavani, May 19, 2017, 3:36 PM IST
ಮುಂಬಯಿ: ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬಯಿ ಕಲಾ ತಂಡದಿಂದ ತವರೂರಿನಲ್ಲಿ ಯಕ್ಷಗಾನ ಪ್ರದರ್ಶನವು ಇತ್ತೀಚೆಗೆ ನಡೆಯಿತು. ಕುಂದಾಪುರದ ಇಡೊರಿಯಲ್ಲಿ ಜಯರಾಮ್ ಶೆಟ್ಟಿ ಅವರ ಆಯೋಜನೆಯಲ್ಲಿ ಈ ಕಾರ್ಯಕ್ರಮವು ನಡೆಯಿತು.
ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬಯಿ ಇದರ ಯುವ ಕಲಾವಿದರು ಹಾಗೂ ತವರೂರಿನ ಪ್ರಸಿದ್ಧ ಹವ್ಯಾಸಿ ಕಲಾವಿದರ ಕೂಡುವಿಕೆಯಲ್ಲಿ ಇದೇ ಸಂದರ್ಭದಲ್ಲಿ ಶಶಿಪ್ರಭಾ ಪರಿಣಯ ಮತ್ತು ಸುದರ್ಶನ ವಿಜಯ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ವಿಶೇಷ ಆಮಂತ್ರಿತರಾಗಿ ಬಡಗುತಿಟ್ಟಿನ ಖ್ಯಾತ ಭಾಗವತ ಹಿಲ್ಲೂರು ರಾಮಕೃಷ್ಣ ಮತ್ತು ಚಂದ್ರಕಾಂತ್ ಮೂಡುಬೆಳ್ಳೆ ಅವರ ಭಾಗವತಿಕೆ ಮತ್ತು ಪ್ರತಿಷ್ಠಾನದ ಯುವ ಪ್ರತಿಭೆಗಳಾದ ತನ್ವಿ ರಾವ್, ಅಂಕಿತಾ, ಸೌಜನ್ಯಾ ಅವರ ಅಭಿನಯವು ಕಲಾಭಿಮಾನಿಗಳನ್ನು ರಂಜಿಸಿತು. ಹಾಸ್ಯಗಾರರಾಗಿ ಮಾರಣಕಟ್ಟೆ ಮೇಳದ ಶೇಖರ್ ಶೆಟ್ಟಿ ಅವರು ಪಾಲ್ಗೊಂಡಿದ್ದರು. ಸುಮಾರು 500 ಕ್ಕೂ ಅಧಿಕ ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಕೊನೆಯಲ್ಲಿ 20 ಕಲಾವಿದರುಗಳನ್ನು ಸಮ್ಮಾನಿಸಲಾಯಿತು. ಪ್ರತಿಷ್ಠಾನದ ಕಾರ್ಯದರ್ಶಿ ಮಹೇಂದ್ರ ಶೆಟ್ಟಿ ನಂದೊÅಳ್ಳಿ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ