ಕುರ್ಲಾ ಪಶ್ಚಿಮದ ಶ್ರೀ ಜಾಗೃತಿ ವಿನಾಯಕ ಮಂದಿರ: ಪುಸ್ತಕ ವಿತರಣೆ
Team Udayavani, Jun 20, 2017, 11:54 AM IST
ಮುಂಬಯಿ: ಕುರ್ಲಾ ಪಶ್ಚಿಮದ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ಕನ್ನಡಿಗರ ಆಡಳಿತದ ಬಹುಪ್ರಸಿದ್ಧಿಯ ಶ್ರೀ ಜಾಗೃತಿ ವಿನಾಯಕ ಮಂದಿರದಲ್ಲಿ ವರ್ಷಂಪ್ರತಿಯಂತೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಕಾರ್ಯಕ್ರಮವು ಇತ್ತೀಚೆಗೆ ಮಂದಿರದ ಆವರಣದಲ್ಲಿ ಜರಗಿತು.
ಇದೇ ಸಂದರ್ಭದಲ್ಲಿ 15 ಸಾವಿರಕ್ಕೂ ಅಧಿಕ ನೋಟ್ಬುಕ್ಗಳನ್ನು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ವಿತರಿಸಲಾಯಿತು. ಶ್ರೀ ಜಾಗೃತಿ ವಿನಾಯಕ ಮಂದಿರದ ಅಧ್ಯಕ್ಷ ರತ್ನಾಕರ ಶೆಟ್ಟಿ, ಗೌರವ ಕಾರ್ಯದರ್ಶಿ ಸುಧಾಕರ ಪೂಜಾರಿ, ಕೋಶಾಧಿಕಾರಿ ದಿವಾಕರ ಬಿ. ಶೆಟ್ಟಿ ಕುರ್ಲಾ, ಮಂದಿರದ ಟ್ರಸ್ಟಿಗಳಾದ ಬಾಪು ಸೇರೆ ಕೋಟ್ಕರ್, ಸತೀಶ್ ಶೆಟ್ಟಿ, ಸುಭಾಷ್ ಗುಪ್ತಾ, ದಿಲೀಪ್ ಮೊಟ್ವಾನಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಪುರೋಹಿತರಾದ ಸುಬ್ರಹ್ಮಣ್ಯ ಉಡುಪ ಮತ್ತು ಶ್ರೀನಿವಾಸ ಭಟ್ ಅವರು ಶ್ರೀ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಗೈದರು. ಸ್ಥಳೀಯ ವಿದ್ಯಾರ್ಥಿಗಳು, ತುಳು-ಕನ್ನಡಿಗರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು