ಸೊಲ್ಲಾಪುರ ಕನ್ನಡ ಸಾಹಿತ್ಯ ಸಮ್ಮೇಳನ:ಅಧ್ಯಕ್ಷರಾಗಿ ಡಾ|ಬಿ.ಬಿ.ಪೂಜಾರಿ


Team Udayavani, Jun 25, 2017, 4:18 PM IST

1-s.jpg

ಸೊಲ್ಲಾಪುರ: ಸೊಲ್ಲಾಪುರದಲ್ಲಿ ಜು. 8 ಮತ್ತು 9ರಂದು ಬೃಹತ್‌ ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ  ಡಾ| ಬಿ. ಬಿ. ಪೂಜಾರಿ ಇವರನ್ನು ಆದರ್ಶ ಕನ್ನಡ ಬಳಗವು ಜೂ. 24ರಂದು ಗೌರವಿಸಿ ಅಭಿನಂದನೆ ಸಲ್ಲಿಸಿತು.

ಸುಮಾರು 67 ವರ್ಷಗಳ ಹಿಂದೆ 1950ರಲ್ಲಿ ಸೊಲ್ಲಾಪುರದಲ್ಲಿ ಎಂ. ಆರ್‌. ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಡಾ| ಜಯದೇವಿ ತಾಯಿಲಿಗಾಡೆ, ರಾಜಶೇಖರ ಮಡಕಿ ಅವರ ನೇತೃತ್ವದಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ಜರಗಿತ್ತು. 

ಡಾ| ಪೂಜಾರಿ ಅವರು ಸೊಲ್ಲಾಪುರದ ಸಂಗಮೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸುಮಾರು ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದು ಹಲವಾರು ಕೃತಿಗಳನ್ನು ರಚಿಸುವುದರ ಮೂಲಕ ಕನ್ನಡ ಸಾಹಿತ್ಯ ಸೇವೆ ಕೈಗೊಂಡಿದ್ದಾರೆ. ಅಪಾರವಾದ ಶಿಷ್ಯವೃಂದ ಹೊಂದಿರುವ ಪೂಜಾರಿಯವರು ಹೊರನಾಡಿನಲ್ಲಿ ಕನ್ನಡದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಅಪಾರವಾಗಿ ಶ್ರಮಿಸಿದ್ದಾರೆ.

ಜು. 8 ಮತ್ತು 9ರಂದು ಸೊಲ್ಲಾಪುರದ ಹುತಾತ್ಮ ಸ್ಮೃತಿಮಂದಿರದಲ್ಲಿ ಜರಗಲಿರುವ ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಡಾ| ಗುರುಲಿಂಗಪ್ಪ ಧಬಾಲೆ, ಡಾ| ಮಧುಮಾಲ ಲಿಗಾಡೆ, ಡಾ| ಗುರುಸಿದ್ದಯ್ಯ ಸ್ವಾಮಿ ಹಾಗೂ ಹಲವಾರು ಕನ್ನಡ ಪ್ರೇಮಿಗಳು ಶ್ರಮಿಸುತ್ತಿದ್ದಾರೆ. ಸಮ್ಮೇಳನಕ್ಕೆ ಶುಭಾಶಯ ಕೋರುತ್ತ ಆದರ್ಶ ಕನ್ನಡ ಬಳಗದ ಗೌರವಾಧ್ಯಕ್ಷ ಗಿರೀಶ ಜಕಾಪುರೆ ಹಾಗೂ ಅಧ್ಯಕ್ಷ ಮಲಿಕಜಾನ್‌ ಶೇಖ್‌ ಬಳಗದ ಪರ ಡಾ| ಬಿ. ಬಿ. ಪೂಜಾರಿಯವರಿಗೆ ಗೌರವ ಸಲ್ಲಿಸಿದರು.

ಸೊಲ್ಲಾಪುರ ಎಂದಿಗೂ ಕನ್ನಡದ ನೆಲ. ಇದಕ್ಕೆ ಕಾಯಕ ಯೋಗಿ ಸಿದ್ಧರಾಮನ ವಚನಗಳೇ ಸಾಕ್ಷಿ. ಈ ಪುಣ್ಯ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಯಾಗಿ ಆಯೋಜಿಸುವ ಮೂಲಕ ಹೊರನಾಡಿನಲ್ಲಿ ಕನ್ನಡದ ಕಹಳೆ ಬಾರಿಸಲು ಎಲ್ಲರೂ ಕೂಡಿ ಶ್ರಮಿಸಬೇಕು               
  – ಗಿರೀಶ ಜಕಾಪುರೆ   (ಯುವ ಸಾಹಿತಿ,ಮೈಂದರ್ಗಿ).

ಡಾ| ಪೂಜಾರಿ ಅವರು ಸೊಲ್ಲಾಪುರ ಭಾಗದಲ್ಲಿ ಮಾಡಿದ ಕನ್ನಡಪರ ಚಟುವಟಿಕೆಗಳು ಇಲ್ಲಿನ ಕನ್ನಡ ಹೋರಾಟಗಾರರಿಗೆ ಆದರ್ಶಪ್ರಾಯ. ಸಾಹಿತ್ಯ ಸಮ್ಮೇ ಳನದ ಅಧ್ಯಕ್ಷ ಸ್ಥಾನ ಅವರಿಗೆ ಸಂದಿದ್ದು, ಅವರಪ್ರಾಮಾಣಿಕ ಸೇವೆಗೆ ಸಿಕ್ಕಿರುವ ಫ‌ಲ. ಅವರ ಅಧ್ಯಕ್ಷ ಸ್ಥಾನದಲ್ಲಿ ಹೊರನಾಡಿನ ಕನ್ನಡಿಗರ ಸಮಸ್ಯೆಗಳು ಬಗೆಹರಿಯಲಿ                                           
-ಮಲಿಕಜಾನ್‌ ಶೇಖ್‌         

(ಅಧ್ಯಕ್ಷ: ಆದರ್ಶ ಕನ್ನಡ ಬಳಗ, ಮಹಾರಾಷ್ಟ್ರ).
 

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.