ಮೀರಾ-ಭಾಯಂದರ್‌ ದಕ್ಷಿಣ ಭಾರತೀಯ ಬಿಜೆಪಿ:ಸಾಂಸ್ಕೃತಿಕ ಕಾರ್ಯಕ್ರಮ


Team Udayavani, Aug 16, 2017, 12:14 PM IST

15-Mum05a.jpg

ಮುಂಬಯಿ: ನಿಸ್ವಾರ್ಥ ಕಾರ್ಯ ಕರ್ತರು ಪಕ್ಷ ಬೆಳವಣಿಗೆಯ ಭದ್ರತೆಯ ಹರಿಕಾರರು. ಇವರು ಅಧಿಕಾರ, ಅಂತಸ್ತುಗಳಿಂದ ಸದಾ ದೂರ ಉಳಿದು ಪಕ್ಷ ನಿಷ್ಠೆಯನ್ನು ಮೇಳೈಸಿಕೊಂಡವರು. ನಾಯಕತ್ವ ಗುಣ ಎಲ್ಲರಲ್ಲೂ ಇದೆ. ಆದರೆ ಎಲ್ಲರಿಗೂ ಟಿಕೆಟ್‌ ನೀಡುವುದು ಅಸಾಧ್ಯ. ಟಿಕೆಟ್‌ ಆಕಾಂಕ್ಷಿಗಳು ತನಗೆ ಸ್ಥಾನಮಾನ ನೀಡಲಿಲ್ಲ ಎಂದು ಬೇಸರಿಸದೆ ಪಕ್ಷದ ಒಳಿತಿಗಾಗಿ ನಿಷ್ಠೆ ಮತ್ತು  ಶ್ರದ್ಧೆಯಿಂದ ದುಡಿಯಬೇಕು. ಆ. 20 ರಂದು ನಡೆಯಲಿರುವ ಮೀರಾ-ಭಾಯಂದರ್‌ ನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿಯನ್ನು ಬಹುಮತದೊಂದಿಗೆ ಆಯ್ಕೆ ಮಾಡಬೇಕು ಎಂದು ಸಂಸದ ಗೋಪಾಲ್‌ ಶೆಟ್ಟಿ  ಹೇಳಿದರು.

ಆ. 14 ರಂದು ಸಂಜೆ ಮೀರಾರೋಡ್‌ ಸೆವೆನ್‌ ಸ್ಕ್ವೇರ್‌ ಶಾಲಾ ಮೈದಾನದಲ್ಲಿ ಮೀರಾ- ಭಾಯಂದರ್‌ ದಕ್ಷಿಣ ಭಾರತೀಯ ಬಿಜೆಪಿ ಘಟಕ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕನ್ನಡಿಗರಾದ ಭಾರತೀಯ ಜನತ ಪಕ್ಷದ ಅಭ್ಯರ್ಥಿಗಳಾದ ಅರವಿಂದ ಶೆಟ್ಟಿ, ರೈಮಾ ಜಯಶೀಲ ತಿಂಗಳಾಯ, ಉಷಾ ಕರ್ಕೇರ, ಗಣೇಶ್‌  ಶೆಟ್ಟಿ ಅವರನ್ನು ಅಭಿನಂದಿಸಿ, ಗೌರವಿಸಿ ಶುಭಹಾರೈಸಿದರು.

ದಕ್ಷಿಣ ಭಾರತೀಯ ಬಿಜೆಪಿ ಘಟಕದ ಅಧ್ಯಕ್ಷ ಉದಯ ಆರ್‌. ಹೆಗ್ಡೆ ಎಲಿಯಾಳ ಅವರು ಮಾತನಾಡಿ, ಪ್ರಥಮ ಬಾರಿ ಬಿಜೆಪಿಯು ದಕ್ಷಿಣ ಭಾರತೀಯರಿಗೆ ಮೀರಾ-ಭಾಯಂದರ್‌ ನಗರ ಪಾಲಿಕೆಯಲ್ಲಿ 4 ಸ್ಥಾನಗಳನ್ನು ಕಲ್ಪಿಸಿದೆ. ಪ್ರತಿಯೋರ್ವ ಅಭ್ಯರ್ಥಿಯು ಮನೆಮನೆಗೆ ಭೇಟಿನೀಡಿ ಚುನಾವಣೆ ಪ್ರಚಾರದೊಟ್ಟಿಗೆ ಕಾರ್ಯಸಾಧನೆಯನ್ನು ತಿಳಿಸಬೇಕು. ಕೇಂದ್ರ, ರಾಜ್ಯದಂತೆ ಮೀರಾ-ಭಾಯಂದರ್‌ ನಗರ ಪಾಲಿಕೆಯಲ್ಲಿ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಆಡಳಿತ ನಡೆಸುವಂತೆ ಮತದಾರರು ಸಹಕರಿಸಬೇಕು ಎಂದರು.

ಬಿಜೆಪಿ ಮೀರಾ-ಭಾಯಂದರ್‌ ಜಿಲ್ಲಾ ಕಾರ್ಯದರ್ಶಿ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು ಅವರು ಮಾತನಾಡಿ, ಶಾಸಕ ನರೇಂದ್ರ ಮೆಹ್ತಾರ ಶಿಫಾರಾಸಿನಂತೆ ದಕ್ಷಿಣ ಭಾರತೀಯರಿಗೆ ಬಂಪರ್‌ ಕೊಡುಗೆ ಲಭಿಸಿದೆ. ಬಹುಮತ ವಿಜಯದೊಂದಿಗೆ ಅವರ ಋಣ ತೀರಿಸುವುದು ಪ್ರತಿಯೋರ್ವ ಅಭ್ಯರ್ಥಿಯ ಕರ್ತವ್ಯವವಾಗಿದೆ ಎಂದು ನುಡಿದು ಎಲ್ಲಾ ಅಭ್ಯರ್ಥಿಗಳನ್ನು ಅಭಿನಂದಿಸಿ  ಶುಭಹಾರೈಸಿದರು.

ಶಾಸಕ ನರೇಂದ್ರ ಮೆಹ್ತಾ, ಅಭ್ಯರ್ಥಿ ಅರವಿಂದ ಶೆಟ್ಟಿ, ಮಹಿಳಾ ವಿಭಾಗದ ಉಪಾಧ್ಯಕ್ಷೆ ಲೀಲಾ ಡಿ. ಪೂಜಾರಿ ಅವರು ಮಾತನಾಡಿದರು. ಲೇಖಕ ಅರುಣ್‌ ಕುಮಾರ್‌ ಶೆಟ್ಟಿ ಎರ್ಮಾಳ್‌, ಚಿತ್ರನಟ ಜಿ. ಕೆ. ಕೆಂಚನಕೆರೆ ಅವರು ಷತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಿನಿ ಶೆಟ್ಟಿ, ಮಹಾಬಲ ಸಾಮಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಕೋಟಿ-ಚೆನ್ನಯ ಯಕ್ಷಗಾನ ಬಯಲಾಟ ನಡೆಯಿತು.

 ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.