ಜಿಎಸ್ಬಿ ಕಿಂಗ್ಸರ್ಕಲ್ ಗಣೇಶೋತ್ಸವ: ಪೂರ್ವಭಾವಿ ಸಭೆ
Team Udayavani, Aug 18, 2017, 4:35 PM IST
ಮುಂಬಯಿ: ಜಿಎಸ್ಬಿ ಸೇವಾ ಮಂಡಳ ಕಿಂಗ್ಸರ್ಕಲ್ ಗಣೇಶೋತ್ಸವವು ಆ. 25ರಂದು ಸುಕೃತೀಂದ್ರ ನಗರದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಆ. 12ರಂದು ಸಂಜೆ ಸಯಾನ್ನ ಮಂಡಳದ ಶ್ರೀ ಗುರುಗಣೇಶ ಪ್ರಸಾದ ಸಭಾಗೃಹದಲ್ಲಿ ನಡೆಯಿತು. ಪ್ರಾರಂಭದಲ್ಲಿ ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್ ಅವರಿಂದ ದೇವತಾ ಪ್ರಾರ್ಥನೆ ನಡೆಯಿತು.
ಪ್ರಧಾನ ಸಂಚಾಲಕ ಡಾ| ಭುಜಂಗ ಪೈ ಅವರು ಸ್ವಾಗತಿಸಿ ಕಳೆದ ಬಾರಿಯ ಸಭೆಯ ವರದಿ ಮಂಡಿಸಿ, ಪ್ರಸಕ್ತ ಧನ ಸಂಗ್ರಹದ ವಿವರ ನೀಡಿದರು. ಸಹ ಸಂಚಾಲಕ ಜಿ. ಡಿ. ರಾವ್ ಅವರು ಮಾತನಾಡಿ, ಸ್ವಯಂ ಸೇವಕರು ಬಹಳ ಉತ್ಸಾಹದಿಂದ ಧನ ಸಂಗ್ರಹ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಹ ಸಂಚಾಲಕ ಎಂ. ವಿ. ಕಿಣಿ ಅವರು ಮಾತನಾಡಿ, ನಮ್ಮ ಪೂರ್ವಜರು ಗಣೇಶೋತ್ಸವ ಪ್ರಾರಂಭಿಸುವ ಮೂಲಕ ಭದ್ರ ತಳಪಾಯ ಹಾಕಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನುಡಿದರು.
ಪೆಂಡಾಲ್ ಸಮಿತಿಯ ದಿಲೀಪ್ ಪೈ ಅವರು ಮಾತನಾಡಿ, ನಮ್ಮ ಗಣೇಶೋತ್ಸವಕ್ಕೆ ಬೇಕಾಗಿರುವ ಸರ್ವ ಪರವಾನಿಗೆ ಕ್ಲಪ್ತ ಸಮಯದಲ್ಲಿ ಸಿಗಲಿದೆ ಎಂದರು. ಮಾಜಿ ಸಂಚಾಲಕ ಜಿ. ಜಿ. ಪ್ರಭು ಅವರು ಮಾತನಾಡಿ, ನಮ್ಮ ಗುರುವರ್ಯರಾದ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀನಮದ್ ಸಮ್ಯಮೀಂದ್ರ ತೀರ್ಥ ಸ್ವಾಮೀಜಿ ಅವರ ಸಾಧನೆಗಳನ್ನು ವಿವರಿಸಿ, ಸೇವಾ ಮಂಡಳದ ಗಣೇಶೋತ್ಸವವು ವಿಶ್ವಖ್ಯಾತಿ ಪಡೆದಿರುವ ಬಗ್ಗೆ ವಿವರವಾಗಿ ತಿಳಿಸಿ ಎಲ್ಲರ ಸಹಕಾರ ಬಯಸಿದರು.
ಸೇವಾ ಮಂಡಳದ ಮಾಜಿ ಅಧ್ಯಕ್ಷ ಆರ್. ಜಿ. ಭಟ್ ಮಾತನಾಡಿ, ಕಳೆದ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ 66 ಸಾವಿರ ಪೂಜೆ ಹಾಗೂ ಸೇವೆಗಳು ನೆರವೇರಿದೆ. ಈ ವರ್ಷ ಇದಕ್ಕಿಂತಲೂ ಹೆಚ್ಚು ಪೂಜೆ ಹಾಗೂ ಸೇವೆಗಳು ಸಂದಾಯ ವಾಗುವ ವಿಶ್ವಾಸ ವ್ಯಕ್ತಪಡಿಸಿದರು.
ಸೇವಾ ಮಂಡಳದ ಪ್ರಧಾನ ಅರ್ಚಕ ಸ್ವಯಂ ಸೇವಕರ ಮುಖಂಡ ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್ ಮಾತನಾಡಿ, ಭಕ್ತರು ನಮ್ಮ ಗಣಪತಿಯಲ್ಲಿ ಪ್ರಾರ್ಥಿಸಿದ ಬಳಿಕ ಪ್ರತಿಫಲ ಸಿಕ್ಕಿದ ಕಾರಣ ಹೆಚ್ಚು ಪೂಜೆ ಸಲ್ಲಿಸಿದ ಬಗ್ಗೆ ಹೇಳಿದರು. ಮಂಡಳದ ಕಾರ್ಯಕಾರಿ ಸಮಿತಿಯ ಸದಸ್ಯ ಪ್ರಶಾಂತ ಮಲ್ಯ ಅವರು ಮಾತನಾಡಿ, ಸ್ವಯಂ ಸೇವಕರು ಆ. 23 ರ ಒಳಗೆ ಪರಿಚಯ ಪತ್ರವನ್ನು ಪಡೆಯುವಂತೆ ವಿನಂತಿಸಿದರು.
ಸೇವಾ ಮಂಡಳದ ಕಾರ್ಯದರ್ಶಿ ರಾಮನಾಥ ಕಿಣಿ ಅವರು ವಂದಿಸಿದರು. ಮುಂದಿನ ಪೂರ್ವಭಾವಿ ಸಭೆಯು ಆ. 19 ರಂದು ಸಂಜೆ 7.35 ರಿಂದ ಸುಕೃತೀಂದ್ರ ನಗರ ಗಣೇಶೋತ್ಸವ ಮಂಟಪ, ಕಿಂಗ್ಸರ್ಕಲ್ ಇಲ್ಲಿ ಜರಗಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ