ಕೆಎಸ್ಎ: ಕ್ರೀಡಾ ಸಚಿವ ವಿನೋದ್ ತಾಬ್ಡೆ ಅವರಿಗೆ ಗೌರವಾರ್ಪಣೆ
Team Udayavani, Sep 19, 2017, 4:22 PM IST
ಮುಂಬಯಿ: ಮಹಾರಾಷ್ಟ್ರ ಮಿಷನ್ 1 ಮಿಲಿಯನ್ ಅಭಿಯಾನಕ್ಕೆ ಸೆ. 15ರಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಚಾಲನೆ ನೀಡಿದ್ದು, ಇದೇ ಸಂದರ್ಭದಲ್ಲಿ ಕ್ರೀಡಾ ಸಚಿವ ವಿನೋದ್ ತಾಬ್ಡೆ ಅವರು ಚರ್ಚ್ಗೇಟ್ ಪರಿಸರದ ಕರ್ನಾಟಕ ಸ್ಫೋರ್ಟಿಂಗ್ ಅಸೋಸಿಯೇಶನ್ಗೆ ಭೇಟಿ ನೀಡಿ ಸಂಸ್ಥೆಯ ಸಿದ್ದಿ-ಸಾಧನೆಗಳನ್ನು ಕಂಡು ಹರ್ಷ ವ್ಯಕ್ತಪಡಿಸಿದರು.
ಕರ್ನಾಟಕ ನ್ಪೋರ್ಟಿಂಗ್ ಕಳೆದ ಹಲವಾರು ವರ್ಷಗಳಿಂದ ಫುಟ್ಬಾಲ್ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ವಿಶೇಷ ಸಾಧನೆಗಳನ್ನು ಸಚಿವ ವಿನೋದ್ ತಾಬ್ಡೆ ಅವರು ಮುಕ್ತ ಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ನ್ಪೋರ್ಟಿಂಗ್ ಅಸೋಸಿಯೇಶನ್ನ ಗೌರವ ಪ್ರಧಾನ ಜತೆ ಕಾರ್ಯದರ್ಶಿ ಜಯ ಎ. ಶೆಟ್ಟಿ, ಎಂ. ಪಿ. ಶೆಟ್ಟಿ ಅವರು ತಾಬ್ಡೆ ಅವರನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಿ ಅಭಿನಂದಿಸಿ ಮಹಾರಾಷ್ಟ್ರ ಮಿಷನ್ 1 ಮಿಲಿಯನ್ ಅಭಿಯಾನಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ್ರೀಡಾ ವಿಭಾಗದ ಕಾರ್ಯದರ್ಶಿ ಪವಾರ್, ನಿರ್ದೇಶಕ ಎನ್. ಬಿ. ಮೋತೆ ಅವರು ಉಪಸ್ಥಿತರಿದ್ದರು.
ಫಿಫಾ ಅಂಡರ್-17 ವಿಶ್ವಕಪ್ ದೇಶದಲ್ಲಿ ಹಾಗೂ ಮುಖ್ಯವಾಗಿ ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದ್ದು, ಇದರ ಬೆಂಬಲಕ್ಕಾಗಿ ತಾಬ್ಡೆ ಅವರು ಮಹಾಮಿಶನ್ 1 ಮಿಲಿಯನ್ ಅಭಿಯಾನವನ್ನು ಆರಂಭಿಸಲು ನಿರ್ಧರಿಸಿದ್ದು, ಇದರಡಿಯಲ್ಲಿ 10 ಲಕ್ಷ ವಿದ್ಯಾರ್ಥಿಗಳು ಫುಟ್ಬಾಲ್ ಆಡಲಿದ್ದಾರೆ. ಫಿಫಾ ಅಂಡರ್-17 ವಿಶ್ವಕಪ್ ಮುಂದಿನ ತಿಂಗಳಿನಿಂದ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?