ಪೆಸ್ತಮ್‌ ಸಾಗರ್‌ ಕರ್ನಾಟಕ ಸಂಘ:ಮಹಿಷಮರ್ದಿನಿ ಯಕ್ಷಗಾನ


Team Udayavani, Sep 20, 2017, 12:33 PM IST

17-Mum09b.jpg

 ಮುಂಬಯಿ: ಚೆಂಬೂರು ತಿಲಕ್‌ ನಗರದ ಪೆಸ್ತಮ್‌ ಸಾಗರ್‌ ಕರ್ನಾಟಕ ಸಂಘದ ಸದಸ್ಯರಿಂದ ಹಾಗೂ ಮಕ್ಕಳಿಂದ ಮಹಿಷ ಮರ್ದಿನಿ ಯಕ್ಷಗಾನ ಪ್ರದರ್ಶನವು ಸೆ. 16 ರಂದು ಅಪರಾಹ್ನ ಚೆಂಬೂರು ಸಾಗರ್‌ ಸಿನೇಮಾ ಸಮೀಪದ ರಘುವಂಶಿ ಸಭಾಗೃಹದಲ್ಲಿ ಕಿಕ್ಕಿರಿದು ತುಂಬಿದ ಸಭಾಗೃಹದಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ನ್ಯಾಯವಾದಿ ನಿತ್ಯಾನಂದ ಕೆ. ಶೆಟ್ಟಿ ಅವರು, ಯಕ್ಷಗಾನ ಪ್ರದರ್ಶನ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು. ಸದಸ್ಯರ ಹಾಗೂ ಕಲಾವಿದರ ಪ್ರೋತ್ಸಾಹ ಹಾಗೂ ಯಕ್ಷಗಾನದ ಮೇಲಿನ ಪ್ರೀತಿಯು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಇಲ್ಲಿ ಸೇರಲು ಸಹಕಾರಿಯಾಗಿದೆ. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ವೈಯಕ್ತಿಕ ಹಾಗೂ ಸಂಘದ ಪರವಾಗಿ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ. ನಾಡಿನ ಕಲೆ, ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದ್ದು, ಯುವಪೀಳಿಗೆಗೆ ಇದರ ಮಹತ್ವದ ಅರಿವು ಮೂಡಿಸುವ ಇಂಥ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಅಗತ್ಯಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರದರ್ಶನದ ಯಶಸ್ಸಿಗೆ ಸಹಕರಿಸಿದ ಯಕ್ಷಗಾನ ನಿರ್ದೇಶಕ ಹಾಗೂ ಯಕ್ಷಗುರುಗಳಾದ ಟಿ. ಆರ್‌. ಶೆಟ್ಟಿ, ನಾರಾಯಣ ಶೆಟ್ಟಿ ಕುಂಬ್ಳೆ ಹಾಗೂ ಭಾಗವತರಾದ ಜಯಲಕ್ಷ್ಮೀ ದೇವಾಡಿಗ, ಮೋಹನ್‌ದಾಸ್‌ ಕೆ. ರೈ, ಚೆಂಡೆಯಲ್ಲಿ ಸಹಕರಿಸಿದ ಪ್ರವೀಣ್‌ ಶೆಟ್ಟಿ ಕಟೀಲು, ಮದ್ದಳೆವಾದಕ ಹರೀಶ್‌ ಸಾಲ್ಯಾನ್‌ ಅವರನ್ನು ಸಂಘದ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಗೌರವಿಸಿ ಸಮ್ಮಾನಿಸಿ ಶುಭ ಹಾರೈಸಿದರು.

ಸಮ್ಮಾನಕ್ಕೆ ಉತ್ತರಿಸಿದ ಟಿ. ಆರ್‌. ಶೆಟ್ಟಿ ಅವರು, ಸದಸ್ಯರಿಗೆ ಯಕ್ಷಗಾನದ ಮೇಲಿನ ಅಭಿರುಚಿಯೇ ಈ ಯಕ್ಷಗಾನ ಪ್ರದರ್ಶನವು ಉತ್ತಮ ರೀತಿಯಲ್ಲಿ ಯಶಸ್ವಿಯಾಗಲು ಕಾರಣವಾಯಿತು. ಭವಿಷ್ಯದಲ್ಲೂ ಅಭಿರುಚಿ ಇರುವವರಿಗೆ ಯಕ್ಷಗಾನ ಕಲಿಸಲು ನಾನು ಸಿದ್ಧನಿದ್ದೇನೆ ಎಂದರು.

ಸಂಘದ ಗೌರವ ಸಲಹೆಗಾರ ಜಯ ಎ. ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ರಾಮಣ್ಣ ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಎನ್‌. ಶೆಟ್ಟಿ, ಗೌರವ ಪ್ರಧಾನ ಕೋಶಾಧಿಕಾರಿ ಜಯಂತಿ  ಆರ್‌. ಮೊಲಿ, ಜತೆ ಕಾರ್ಯದರ್ಶಿ ಆನಂದ್‌ ಕೆ. ಶೆಟ್ಟಿ, ಜತೆ ಕೋಶಾಧಿಕಾರಿ ದಯಾನಂದ ಎಂ. ದೇವಾಡಿಗ ಹಾಗೂ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ನಾಗವೇಣಿ ಎಸ್‌. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಶಾಲಿನಿ ಎಸ್‌. ಶೆಟ್ಟಿ, ಕಾರ್ಯದರ್ಶಿ ಮಾಲತಿ ಜೆ. ಮೊಲಿ, ಕೋಶಾಧಿಕಾರಿ ಸಂಗೀತಾ ಸಿ. ಶೆಟ್ಟಿ, ಜತೆ ಕಾರ್ಯದರ್ಶಿ ಸುಧಾ ರಾವ್‌, ಜತೆ ಕೋಶಾಧಿಕಾರಿ ಸುಕಲತಾ ಸಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಭರತ್‌ ವಿ. ಶೆಟ್ಟಿ, ಗೌರವ ಸಲಹೆಗಾರರಾದ ಶೇಖರ್‌ ಶೆಟ್ಟಿ, ಸತೀಶ್‌ ಆರ್‌. ಶೆಟ್ಟಿ, ಶ್ರೀಧರ ಕೆ. ಶೆಟ್ಟಿ, ಜಯ ಎ. ಶೆಟ್ಟಿ, ಜೆ. ಕೆ. ಮೊಲಿ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಸಹಕರಿಸಿದರು. ಸಂಘದ ಸದಸ್ಯ ಬಾಂಧವರಿಂದ ಮಹಿಷ ಮರ್ದಿನಿ ಯಕ್ಷಗಾನ ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.