ಬಂಟರ ಸಂಘ ಜೋಗೇಶ್ವರಿ, ದಹಿಸರ್‌: 11ನೇ ವಾರ್ಷಿಕೋತ್ಸವ


Team Udayavani, Sep 20, 2017, 2:54 PM IST

17-Mum06a.jpg

 ಮುಂಬಯಿ: ಬಂಟರ ಸಂಘ ಮಾತೃಸಂಸ್ಥೆಯ ಮಾಜಿ ಹಾಗೂ ಪ್ರಸ್ತುತ ಅಧ್ಯಕ್ಷರ ವಿವಿಧ ದೂರದೃಷ್ಟಿಯ ಚಿಂತನೆ ಸಂಘವು ವಿಶ್ವದೆಲ್ಲೆಡೆ ಪ್ರಸಿದ್ಧಿ ಪಡೆಯುವಂತೆ ಮಾಡಿದೆ. ಹಿಂದಿನ ಪದಾಧಿ ಕಾರಿಗಳ ಸಾಧನೆ, ಸಂಶೋಧನೆ ಬಂಟರ ಸಂಘ ಶೈಕ್ಷಣಿಕ, ಸಾಮಾಜಿಕ, ವೈವಾಹಿಕ ಇನ್ನಿತರ ಹಲವಾರು ಯೋಜನೆಗಳು ನಿಂತ ನೀರಾಗದೆ ಹರಿಯುವ ನೀರಾಗಿದೆ. ಶೈಕ್ಷಣಿಕವಾಗಿ ನಾವು ಮಾಡಿದ ಸಾಧನೆ ಎಲ್ಲರಿಗೂ ಮಾದರಿ ಎಂದು ಪಯ್ಯಡೆ ಇಂಟರ್‌ನ್ಯಾಷನಲ್‌ ಇದರ ಡಾ| ಪಿ. ವಿ. ಶೆಟ್ಟಿ ಅವರು ಹೇಳಿದರು.

ಸೆ. 16ರಂದು ಕಾಂದಿವಲಿ ಠಾಕೂರ್‌ಕಾಂಪ್ಲೆಕ್ಸ್‌ ನ ಅವೆನ್ಯೂ ಹೊಟೇಲ್‌ ಸಭಾಂಗಣದಲ್ಲಿ ನಡೆದ ಬಂಟರ ಸಂಘ ಜೋಗೇ ಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ 11ನೇ ವಾರ್ಷಿಕೋತ್ಸವ ಸಂಭ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಸ್ತುತ ಪಶ್ಚಿಮ ವಿಭಾಗದಲ್ಲಿ  ನಮ್ಮ ಸಮಾಜದ ಶೈಕ್ಷಣಿಕ ಸಂಸ್ಥೆಯ ಕೊರತೆ ಕಾಣುತ್ತಿದ್ದು, ಈ ನಿಟ್ಟಿನಲ್ಲಿ ಸಂಘವು ಸಿದ್ಧತೆ ಮಾಡಬೇಕು. ಪ್ರಾದೇಶಿಕ ವಲಯಗಳ ಸ್ಥಾಪನೆಯ ಯೋಚನೆ ಇಂದು ಉತ್ತಮವಾಗಿ, ಫಲಪ್ರದವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಯೋಜನೆ ಗಳಿಗೆ ಸಹಕಾರಿಯಾಗಲಿದೆ. ಬಂಟರ ಮಾತೃ ಸಂಘದಲ್ಲಿ ಪ್ರಾರಂಭದ ದಿನಗಳಿಂದಲೂ ಪಯ್ಯಡೆ ಕುಟುಂಬದ ಅಪೂರ್ವ ಕೊಡುಗೆ, ಅವಿನಾಭಾವ ಸಂಬಂಧವಿದ್ದು, ಪದ್ಮನಾಭ ಪಯ್ಯಡೆ ಅವರಂತಹ ಪ್ರಾಂಜಲ ಮನಸ್ಸಿನ ವ್ಯಕ್ತಿ ಮುಂಬರುವ ದಿನಗಳಲ್ಲಿ ಸಂಘದಲ್ಲಿ ಪ್ರಮುಖ ಸ್ಥಾನದ ಕಲಶವಾಗಬೇಕು ಎಂದು ಹೇಳಿದರು.

ಗೌರವ ಅತಿಥಿಯಾಗಿ ತುಂಗಾ ಆಸ್ಪತ್ರೆ ಮಲಾಡ್‌ನ‌ ಡಾ| ಸತೀಶ್‌ ಶೆಟ್ಟಿ ಅವರು ಮಾತನಾಡಿ, ಎಲ್ಲರಿಗೂ ಸಹಾಯ ಮಾಡುವ ಉದ್ಧೇಶದಿಂದ ಸ್ಥಾಪನೆಗೊಂಡ ತುಂಗಾ ಆಸ್ಪತ್ರೆ ಇಂದು ಸುಮಾರು ಐದು ಸಾವಿರ ಜನರಿಗೆ ಉದ್ಯೋಗ ನೀಡುತ್ತಿದೆ. ಇಂದು ಜಗತ್ತಿನಲ್ಲಿ ಹಲವಾರು ಅಪಾಯಕಾರಿ ರೋಗಗಳಿಂದ ಬಳಲುತ್ತಿರುವ ಜನರಿಗೂ ಈ ಆಸ್ಪತ್ರೆಯಿಂದ ಗುಣಮಟ್ಟದ ಚಿಕಿತ್ಸೆ ಒದಗಿಸುವ ಧೈರ್ಯ ಹೊಂದಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಮದ್ದು ಸೂಕ್ತ ಪರಿಹಾರವಾಗಿದ್ದು, ಹಿಂದೆ ಹಿರಿಯರು ನೀಡುತ್ತಿದ್ದ ಮನೆಮದ್ದು ಸಲಹೆ ನಿಜವಾಗಲೂ ಉತ್ತಮ ಸಲಹೆಯಾಗಿದೆ ಎಂದರು.

ಗೌರವ ಅತಿಥಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮುಂಬಯಿ ಇದರ ಗೌರವ ಕಾರ್ಯದರ್ಶಿ ಸಿಎ ಸುರೇಂದ್ರ ಶೆಟ್ಟಿ ಅವರು ಮಾತನಾಡಿ, ಒಂಭತ್ತು ಪ್ರಾದೇಶಿಕ ಸಮಿತಿಗಳ ಮೂಲಕ ಮಾತ್ರ ಸಂಸ್ಥೆಗೆ ಉತ್ತಮ ಸಹಕಾರ ದೊರೆಯುತ್ತಿದ್ದು, ಇವುಗಳ ಸಾಧನೆ ಮೆಚ್ಚುವಂಥದ್ದಾಗಿದೆ. ಹೊಸ ಪೀಳಿಗೆಯ ಮಕ್ಕಳನ್ನು ಪ್ರತಿಭಾವಂತರನ್ನಾಗಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ನೀಡಿ ಸಮಾಜದ ಬಡತನ ನಿರ್ಮೂಲನೆ ಮಾಡಬೇಕು ಎಂದು ಹೇಳಿದರು.

ವಿಶ್ವ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ, ಮಕ್ಕಳು ಹಿರಿಯರ ಮಾತುಗಳನ್ನು ಆಲಿಸುವಂತಾಗಬೇಕು. ಒಂಭತ್ತು ಪ್ರಾದೇಶಿಕ ಸಮಿತಿಗಳನ್ನು ಸ್ಥಾಪಿಸುವಾಗ ಸಮಸ್ಯೆಯಾಗಿದ್ದರೂ ಕೂಡಾ ಇಂದು ಸುಲಲಿತವಾಗಿ ಕಾರ್ಯವೆಸಗು ತ್ತಿರುವುದು ಸಂತೋಷವಾಗುತ್ತಿದೆ. ನಮ್ಮಲ್ಲಿ ಒಗ್ಗಟ್ಟು ಮುಖ್ಯ. ಆವಾಗ ಹೋರಾಟಕ್ಕೆ ಜಯ ಸಿಗುತ್ತದೆ ಎಂದರು.

ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ ಅವರು ಮಾತನಾಡಿ, ಮಕ್ಕಳನ್ನು  ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಯತ್ತ ಕೊಂಡೊಯ್ಯವಲ್ಲಿ ಪಾಲಕರು ಸಹಕರಿಸಬೇಕು. ಪ್ರಾದೇಶಿಕ ಸಮಿತಿಗಳಲ್ಲಿ ಮಹಿಳೆಯರು ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಅಭಿನಂದನೀಯ ಮತ್ತು ಉತ್ತಮ ಸಂಕೇತವಾಗಿದೆ ಎಂದು ಹೇಳಿದರು.
ರಜನಿ ಆರ್‌. ಶೆಟ್ಟಿ ಪ್ರಾರ್ಥನೆಗೈದರು. ಬಂಟ ಗೀತೆಯೊಂದಿಗೆ ಗಣ್ಯರು  ಸಮಾರಂಭಕ್ಕೆ ಚಾಲನೆ ನೀಡಿದರು. ಗೌರವ ಕಾರ್ಯದರ್ಶಿ ನಿಟ್ಟೆ ಎಂ. ಜಿ. ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಮಹಿಳಾ ವಿಭಾಗದ ವರದಿ ವಾಚಿಸಿದರು. ಅತಿಥಿ-ಗಣ್ಯರನ್ನು ಸಮಿತಿಯ ಪದಾಧಿಕಾರಿಗಳು ಗೌರವಿಸಿದರು. ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ, ಸಂಚಾಲಕ ಮನೋಹರ ಎನ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಕೆ. ಪ್ರೇಮನಾಥ್‌ ಶೆಟ್ಟಿ, ಗೌರವ ಕಾರ್ಯದರ್ಶಿ ಎಂ. ಜಿ. ಶೆಟ್ಟಿ ಸಮ್ಮಾನಿತರನ್ನು ಪರಿಚಯಿಸಿದರು.
ವಿವಿಧ ಕ್ಷೇತ್ರಗಳ ಸಾಧಕರನ್ನು, ಸಮಿತಿಯ ಹಿತ ಚಿಂತಕರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. 

 ಬೆಳಗಾವಿ ರಾಮ್‌ದೇವ್‌ ಹೊಟೇಲ್‌ನ ರಘುರಾಮ ಶೆಟ್ಟಿ, ಹರೀಶ್‌ ಶೆಟ್ಟಿ ಗುರ್ಮೆ ಹೊಟೇಲ್‌ ಮಂಥನ್‌, ಆದಾಯತೆರಿಗೆ ಅಧಿಕಾರಿ ಜಯಶೀಲ ಶೆಟ್ಟಿ, ಬಂಟರ ಸಂಘದ ಪದಾಧಿಕಾರಿಗಳಾದ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಶೆಟ್ಟಿ ಉಪಸ್ಥಿತರಿದ್ದರು.
ಸ್ಥಳೀಯ ಸಮಿತಿಯ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷೆ ಸುಚರಿತಾ ಶೆಟ್ಟಿ ಅವರು ಕ್ರೀಡಾ ಸ್ಪರ್ಧೆಯ ವಿಜೇತರ ಯಾದಿಯನ್ನು ವಾಚಿಸಿದರು. ಸ್ಥಳೀಯ ಸಮಿತಿಯ ಜತೆ ಕಾರ್ಯದರ್ಶಿ ಗಂಗಾಧರ ಎ. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಕಾಶ್‌ ಎ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ವಿಜಯ ಎನ್‌. ಶೆಟ್ಟಿ, ವೈದ್ಯಕೀಯ ಸಮಿತಿಯ ವಿಕಾಸ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ವಿನೋದಾ ಎ. ಶೆಟ್ಟಿ, ಕಾರ್ಯದರ್ಶಿ ಶೈಲಜಾ ಎ. ಶೆಟ್ಟಿ, ಜತೆ ಕಾರ್ಯದರ್ಶಿ ಸುನಿತಾ ಎನ್‌. ಹೆಗ್ಡೆ, ಸಾಂಸ್ಕೃತಿಕ ವಿಭಾಗದ  ಸರಿತಾ ಎಂ. ಶೆಟ್ಟಿ, ಸಲಹೆಗಾರ್ತಿ ಪದ್ಮಾವತಿ ಬಿ. ಶೆಟ್ಟಿ, ಸಂಚಾಲಕಿ ಸವಿತಾ ಸಿ. ಶೆಟ್ಟಿ, ಕೋಶಾಧಿಕಾರಿ ರೇಖಾ ವೈ. ಶೆಟ್ಟಿ, ಜತೆ ಕೋಶಾಧಿಕಾರಿ ಜ್ಯೋತಿ ಪಿ. ಶೆಟ್ಟಿ, ಸದಸ್ಯತ್ವ ನೋಂದಾವಣೆ ಸಮಿತಿಯ ಸುಲತಾ ಎಸ್‌. ಶೆಟ್ಟಿ, ಸದಸ್ಯರು, ಸಲಹೆಗಾರರು, ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಘುನಾಥ ಎನ್‌. ಶೆಟ್ಟಿ, ಅಶೋಕ್‌ ವಿ. ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್‌ ಆರ್‌. ಶೆಟ್ಟಿ ವಂದಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸಮಾಜ ಬಾಂಧವರು ಸಮಾಜದ  ಒಳಿತಿಗಾಗಿ ಕಾರ್ಯನಿರ್ವಹಿಸಬೇಕು. ಅಡ್ಡದಾರಿ, ಕೆಡುಕು ಕೆಲಸಗಳು ನಮ್ಮ ಸಮಾಜಕ್ಕೆ ಮಾರಕ. ಮಾತಾಪಿತರ ಸೇವೆಯ ಮೂಲಕ ತೀರ್ಥಯಾತ್ರೆಯ ಫಲ ದೊರೆಯುತ್ತದೆ. ಮನುಷ್ಯನಿಗೆ ಸೌಂದರ್ಯ ಮುಖ್ಯವಲ್ಲ. ಗುಣ, ಬುದ್ಧಿ, ವಿದ್ಯಾಶಕ್ತಿ ನಮ್ಮನ್ನು ಪ್ರಜ್ಞಾವಂತರನ್ನಾಗಿಸುತ್ತದೆ.  ಸಮಾಜ ಬಾಂಧವರು ವಿವಾಹ ವಿಚ್ಛೇಧನದಂತಹ ಸಾಮಾಜಿಕ ಪಿಡುಗಿಗೆ ಬಲಿಯಾಗಬಾರದು. ಇದರಿಂದ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತದೆ. ಅನೀತಿ, ಅನ್ಯಾಯದ ಸಂಪಾದನೆಯಿಂದ ದೂರವಿದ್ದು, ಸನ್ಮಾರ್ಗದ ಸಂಪಾದನೆಯ ಮೂಲಕ ಸಮಾಜದ ಒಳಿತಿಗಾಗಿ ಸಹಕರಿಸಬೇಕು. ಇದರಿಂದ ಆತ್ಮತೃಪ್ತಿ ಲಭಿಸುತ್ತದೆ 
– ಮುಂಡಪ್ಪ ಎಸ್‌. ಪಯ್ಯಡೆ, ಸಮನ್ವಯಕರು  
ಪ್ರಾದೇಶಿಕ ಸಮಿತಿಗಳು ಪಶ್ಚಿಮ ವಿಭಾಗ.

ಇದೊಂದು ಬಂಟರ ಹಬ್ಬವಾಗಿದೆ. ಸಮಿತಿಯ ಪದಾಧಿಕಾರಿಗಳ ಕಾರ್ಯಕ್ರಮಗಳು ಮೆಚ್ಚುವಂಥದ್ದು. ಮಾತೃ ಸಂಸ್ಥೆಯಲ್ಲಿ ಬಂದ ಅಧ್ಯಕ್ಷರೆಲ್ಲರೂ ಸಂಘದ ರೂಪುರೇಷೆಗಳಿಗೆ ಬದಲಾವಣೆ ತಂದಿದ್ದಾರೆ. ಒಂಭತ್ತು ಪ್ರಾದೇಶಿಕ ಸಮಿತಿಗಳು ಬಂಟರ ಸಂಘಕ್ಕೆ ಆಧಾರಸ್ತಂಭಗಳಂತಿದ್ದು, ಪಯ್ಯಡೆ ಸಹೋದರರ ಮಾರ್ಗದರ್ಶನ ಉತ್ತಮ ಸಮಾಜ ಸೇವೆಗೆ ಅವಕಾಶ ನೀಡಿದಂತಾಗಿದೆ. ಮನಸ್ಸಿನಲ್ಲಿ ವೇದನೆ ಸಲ್ಲದು, ಭೇದ-ಭಾವ ತೊರೆದು ಒಗ್ಗಟ್ಟಿನಿಂದ ಸಮಾಜ ಸೇವೆಯಲ್ಲಿ ತೊಡಗೋಣ 
– ಪ್ರಭಾಕರ ಎಲ್‌. ಶೆಟ್ಟಿ  ಅಧ್ಯಕ್ಷರು,  ಬಂಟರ ಸಂಘ ಮುಂಬಯಿ.

ಹಿಂದಿನ ಕಾರ್ಯಾಧ್ಯಕ್ಷರುಗಳ ಉತ್ತಮ ಅಡಿಪಾಯ ನನ್ನ ಕಾರ್ಯಾವಧಿಯಲ್ಲಿ ಸಹಕಾರಿಯಾಯಿತು. ಮೂರು ವರ್ಷದ ಸಮಿತಿಯ ಸಮಾಜ ಸೇವೆ ಆತ್ಮತೃಪ್ತಿ ತಂದಿದೆ. ಸಮಿತಿಯ ಎಲ್ಲಾ ಹಿರಿ-ಕಿರಿಯ ಪದಾಧಿಕಾರಿಗಳ ಉತ್ತಮ ಸಹಕಾರ ನನಗೆ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ. ಮಹಿಳಾ ವಿಭಾಗ, ಯುವ ವಿಭಾಗ, ಉಪಸಮಿತಿಗಳ ಸಹಕಾರವನ್ನು ಮರೆಯುವಂತಿಲ್ಲ 
– ವಿಜಯ ಆರ್‌. ಭಂಡಾರಿ ಕಾರ್ಯಾಧ್ಯಕ್ಷರು,  ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಸಮಿತಿ.

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.