ಜಿಎಸ್‌ಬಿ ಸಾರಸ್ವತ ಕಲ್ಚರಲ್‌:ದಹಿಸರ್‌ ದಸರಾ- ದಾಂಡಿಯಾ ರಾಸ್‌


Team Udayavani, Sep 22, 2017, 12:24 PM IST

21-Mum02a.jpg

ಮುಂಬಯಿ: ದಶಮಾನೋತ್ಸವ ಸಂಭ್ರಮದಲ್ಲಿರುವ ಗೌಡ ಸಾರಸ್ವತ್‌ ಬ್ರಾಹ್ಮಣ್‌ ಸಭಾ ದಹಿಸರ್‌ ಬೊರಿವಲಿ ಸಂಸ್ಥೆಯ ವಾರ್ಷಿಕ ದಸರಾ ಮಹೋತ್ಸವವು ಗುರುವಾರ  ಆರಂಭಗೊಂಡಿತು.

ಕುಲಗುರು ದೈವಕ್ಯ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಗಳ ಕೃಪೆ ಮತ್ತು  ಶ್ರೀ ಸಂಸ್ಥಾನ ಕಾಶೀ ಮಠ ವಾರಣಾಸಿ ಕಾಶೀ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರ ಅನುಗ್ರಹದೊಂದಿಗೆ ದಹಿಸರ್‌ ಪೂರ್ವದ ಎನ್‌.ಎಲ್‌. ಕಾಂಪ್ಲೆಕ್ಸ್‌ ನ ಸಾರಸ್ವತ ಕಲ್ಚರಲ್‌ ಆ್ಯಂಡ್‌ ರಿಕ್ರಿಯೇಷನ್‌ ಸೆಂಟರ್‌ ಮೈದಾನದಲ್ಲಿ ಸಜ್ಜುಗೊಳಿಸಲಾಗಿರುವ ಮಾಧವೇಂದ್ರ ಸಭಾಗೃಹದಲ್ಲಿನ ಭವ್ಯ ಅಲಂಕೃತ ಮಂಟಪದಲ್ಲಿ ಪುಷ್ಪಾಲಂಕೃತ,   ರಜತ ಪ್ರಭಾವಳಿ, ಸ್ವರ್ಣ ಮುಕುಟ, ವಜ್ರ, ಚಿನ್ನಾಭರಣದಿಂದ ಕಂಗೊಳಿಸುವ ಶ್ರೀ ಸರಸ್ವತಿ ದೇವಿಯನ್ನು ಬೆಳಗ್ಗೆ ಪ್ರತಿಷ್ಠಾನಗೊಳಿಸಿ ಅನಂತರ ಕನ್ಯಾಲಗ್ನದಲ್ಲಿ  ಪ್ರಾಣಪ್ರತಿಷ್ಠೆ ನಡೆಸುವ ಮುಖೇನ ದಶ ವಾರ್ಷಿಕ “ದಹಿಸರ್‌ ದಸರಾ’ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ವೇ| ಮೂ| ಲಕ್ಷ್ಮೀನಾರಾಯಣ ಭಟ್‌ ಇವರ ಪ್ರಧಾನ ಪೌರೋಹಿತ್ಯದಲ್ಲಿ ವೇ| ಮೂ| ಉಲ್ಲಾಸ್‌ ಭಟ್‌, ವೇದ ಮೂರ್ತಿ  ಮಂಜು ನಾಥ್‌ ಪುರಾಣಿಕ್‌, ವೇ| ಮೂ|   ಪ್ರಶಾಂತ್‌ ಪುರಾಣಿಕ್‌, ವೇ|ಮೂ| ವಿನಾಯಕ ಪುರಾಣಿಕ್‌ ಮತ್ತಿತರ ವಿದ್ವಾನರು ವಿವಿಧ ಪೂಜಾದಿಗಳನ್ನು ನೆರವೇರಿಸಿ ನೆರೆದ ಸದ್ಭಕ್ತರನ್ನು ಹರಸಿದರು. ವಿವಿಧ ಭಜನ ಮಂಡಳಿಗಳು ಭಜನೆ ನಡೆಸಿದ್ದು, ಸಂಜೆ ಸುಧೀಂದ್ರ ನಗರ ಭಜನ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿತು.

ಈ ಸಂದರ್ಭದಲ್ಲಿ ಗೌಡ ಸಾರಸ್ವತ್‌ ಬ್ರಾಹ್ಮಣ್‌ ಸಭಾ ದಹಿಸರ್‌ ಬೊರಿವಲಿ ಸಂಸ್ಥೆಯ ಸಂಚಾಲಕರಾದ ಕುಂದಾಪುರ ಶ್ರೀನಿವಾಸ ಪ್ರಭು, ಜಿ. ಡಿ. ರಾವ್‌, ಸಿ. ಎಂ. ಎಸ್‌ ರಾವ್‌, ಶೋಭಾ ವಿ. ಕುಲ್ಕರ್ಣಿ, ಸುಗುಣಾ ಕೆ. ಕಾಮತ್‌, ಅಧ್ಯಕ್ಷ ಕೆ. ಆರ್‌. ಮಲ್ಯ, ಗೌರವ ಪ್ರಧಾನ  ಕಾರ್ಯದರ್ಶಿ ಎಂ.ಉದಯ ಪಡಿಯಾರ್‌, ಗೌರವ ಕೋಶಾಧಿಕಾರಿ ಮೋಹನ್‌ ಎ. ಕಾಮತ್‌,  ಜತೆ ಕಾರ್ಯದರ್ಶಿ ವಿನೋದ್‌ ಕೆ. ಪ್ರಭು ಹಾಗೂ  ಸೇವಾಕರ್ತರು  ಉಪಸ್ಥಿತರಿದ್ದರು.

ಸೆ. 22ರಂದು ಶುಕ್ರವಾರ ಅನ್ನಪೂರ್ಣೇಶ್ವರಿ ದೇವಿಗೆ ಬೆಳಗ್ಗೆ ಬಂಟ್ಸ್‌ ಸಂಘ ಜೋಗೇಶ್ವರಿ ದಹಿಸರ್‌ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನ ಸೇವೆ ನಡೆಯಲಿದೆ. ಸಂಜೆ ದಹಿಸರ್‌ನ ವಿಟಮಿನ್‌ ಆರ್ಟ್‌ ಸಂಸ್ಥೆಯ ಅಕ್ಷಯ್‌ ಹೈರೆ ಮತ್ತು ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ. ದಶವಾರ್ಷಿಕವಾಗಿ ನಡೆಸ ಲ್ಪಡುವ ಈ ಶರನ್ನವರಾತ್ರಿ ಮಹೋತ್ಸವದಲ್ಲಿ ನಾಡಿನ ಸಮಸ್ತ ಭಕ್ತರು ಆಗಮಿಸಿ ಶ್ರೀಗಂಧ ಪ್ರಸಾದ ಸ್ವೀಕರಿಸಿ ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ಉತ್ಸವದ ಪ್ರಧಾನ ಸಂಘಟಕ, ಜತೆ ಕಾರ್ಯದರ್ಶಿ ಸಾಣೂರು ಮನೋಹರ್‌ ವಿ. ಕಾಮತ್‌ ಅವರು  ತಿಳಿಸಿದರು.

ನವರಾತ್ರಿ ದಿನಂಪ್ರತಿ ರಾತ್ರಿ 7ರಿಂದ 10ರಿಂದ ಗರ್ಭ, ದಾಂಡಿಯಾ ರಾಸ್‌ ನಡೆಯಲಿದೆ. ದಿನಂಪ್ರತಿ ಸುಮಾರು ನಾಲ್ಕೈದು ಸಾವಿರ ಭಕ್ತರಿಗೆ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಲಿದೆ. ಸೆ. 28ರಂದು ಮಹಾಕಾಳಿ ದೇವಿಯ ಆರಾಧನೆಯ ದಿನ ಸಂಜೆ 6ರಿಂದ  ದೀಪೋತ್ಸವ ನಡೆಯಲಿದೆ. ದಶವಾರ್ಷಿಕ ದಹಿಸರ್‌ ದಸರೋತ್ಸವ ಆಚರಣೆಯಲ್ಲಿ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಇತರ ಮಂತ್ರಿಗಳು, ನಟನಟಿಯರು, ಶಿವಸೇನಾ ವರಿಷ್ಠ ಉದ್ಧಾವ್‌ ಠಾಕ್ರೆ, ಸಂಸದರು, ಗಣ್ಯಾಥಿ-ಗಣ್ಯರು ಆಗಮಿಸುವ ನಿರೀಕ್ಷೆಯಿದ್ದು, ಜತೆಗೆ ಲಕ್ಷಾಂತರ ಭಕ್ತರನ್ನು ಸೆಳೆಯಲಿದೆ.

ಸೆ. 30ರಂದು ವಿಜಯದಶಮಿಯ ಶಾರದಾ ದೇವಿಗೆ ಪೂಜೆ ನೆರವೇರಿಸಿ   ಬೆಳಗ್ಗೆ  9ರಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ನಂತರ ಭಜನೆ. ಸಂಜೆ  4ರಿಂದ ಭಕ್ತರಿಂದ ಶ್ರೀ ದೇವಿಗೆ ಬಂದ ಸೀರೆಗಳ ಲಕ್ಕಿಡ್ರಾ  ಕಾರ್ಯಕ್ರಮ ನಡೆಯಲಿದೆ.  ಸಂಜೆ 5ರಿಂದ ವಿಸರ್ಜನ ಮೆರವಣಿಗೆ ನೆರವೇರಲಿದೆ ಎಂದು ನವರಾತ್ರಿ ಉತ್ಸವದ ಪ್ರಧಾನ ಸಂಘಟಕ, ಜಿ. ಎಸ್‌. ಬಿ. ಸಭಾದ ಜತೆ ಕಾರ್ಯದರ್ಶಿ ಸಾಣೂರು ಮನೋಹರ್‌ ಕಾಮತ್‌  ನುಡಿದರು.

 ಚಿತ್ರ- ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.