ಅಪ್ಪಾ …ಐ ಲವ್‌ ಯೂ!


Team Udayavani, Sep 27, 2019, 5:00 AM IST

k-15

ನಾನು ನೋಡಿದ ಮೊದಲ ವೀರಾ, ಬಾಳು ಕಲಿಸಿದ ಸಲಹೆಗಾರ, ಬೆರಗು ಮೂಡಿಸೋ ಜಾದುಗಾರ ಅಪ್ಪ… ಈ ಹಾಡನ್ನು ಕೇಳಿದಾಗಲೆಲ್ಲ ನನಗೆ ಒಂದು ಕ್ಷಣ ರೋಮಾಂಚನವಾಗುತ್ತದೆ. ತಿಳಿದೋ ತಿಳಿಯದೆಯೋ ನಾನು ನನ್ನದೇ ಆದ ಪ್ರಪಂಚದಲ್ಲಿ ಮುಳುಗಿಬಿಡುತ್ತೇನೆ. ಅಲ್ಲಿ ನಾನು ಮತ್ತು ನನ್ನ ತಂದೆಯ ಹೊರತು ಬೇರೆ ಯಾರೂ ಇಲ್ಲ. ಜಗತ್ತಿನ ತುಂಬಾ ಅಪರಿಚಿತರೇ ತುಂಬಿರುವಾಗ ನನ್ನ ಸ್ವಂತದ್ದು ಎಂದು ಹೆಮ್ಮೆಯಿಂದ ಹೇಳಿಕೊಳ್ಳ ಬಹುದಾದ ಒಂದು ಜೀವ ಅಂದರೆ ಅಪ್ಪ. ಪ್ರತಿಯೊಬ್ಬ ತಂದೆಯೂ ಕೂಡ ಮಕ್ಕಳ ಭವಿಷ್ಯಕ್ಕಾಗಿ ತನ್ನನ್ನು ಎಷ್ಟರ ಮಟ್ಟಿಗೆ ಮಾರ್ಪಾಡು ಮಾಡಲು ಸಾಧ್ಯವೋ ಅಷ್ಟು ಪ್ರಯತ್ನಿಸುತ್ತಾರೆ. ಪ್ರೀತಿ ಎಂಬ ಎರಡಕ್ಷರಕ್ಕೆ ಇಂದು ಜಗತ್ತು ಬೇರೆ ಬೇರೆ ಹೆಸರನ್ನು ಕೊಟ್ಟಿರಬಹುದು. ಆದರೆ, ಪ್ರೀತಿ ಎಂದರೆ ನನ್ನ ಪ್ರಕಾರ ನನ್ನ ತಂದೆ. ಏಕೆಂದರೆ ನಾ ಕಂಡ ಪ್ರಕಾರ ನನ್ನ ತಂದೆಯ ಪ್ರೀತಿ ಕೇವಲ ತೋರಿಕೆಯದಾಗಿರಲಿಲ್ಲ. ಹಾಗೆಂದು ಅದನ್ನು ವರ್ಣಿಸಲೂ ಕೂಡ ಸಾಧ್ಯವಿಲ್ಲ. ಅಂಥ ಮಹತ್ವದ್ದು ತಂದೆ-ಮಗಳ ಬಾಂಧವ್ಯ.

ನಾನು ಒಬ್ಬಳು ಹೆಣ್ಣು ಮಗಳಾಗಿ ಹೆಮ್ಮೆಯಿಂದ ಹೇಳಬಲ್ಲೆ, ಮೈ ಡ್ಯಾಡ್‌ ಇಸ್‌ ಮೈ ಹೀರೋ. ಹೌದು, ನಾವು ಸಿನೆಮಾದಲ್ಲಿ ನೋಡುವ ಹೀರೋ ಸಿನಿಮಾಗೆ ಮಾತ್ರ ಮೀಸಲು. ಆದರೆ ವಾಸ್ತವ ಬೇರೆಯೇ ಆಗಿರುತ್ತದೆ. ಒಬ್ಬ ತಂದೆ ಜೀವನದಲ್ಲಿ ತನ್ನ ಮಕ್ಕಳಿಗೆ ಬರುವಂತಹ ಕಷ್ಟಗಳನ್ನೆಲ್ಲ ಅಡ್ಡಗಟ್ಟಿ ಬೆಳೆಸುತ್ತಾನೆ. ಸದಾ ಅವರ ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತಾನೆ.

ಇದೇ ಅಲ್ಲವೇ ಪ್ರೀತಿ ಎಂದರೆ. ಇದು ಕೇವಲ ನನ್ನೊಬ್ಬಳ ಅನುಭವವಲ್ಲ. ಪ್ರತಿ ಮನೆಯಲ್ಲೂ ಅಪ್ಪನ ಪಾತ್ರ ಮಹತ್ವದ್ದು. ಎಷ್ಟೇ ಸಮಸ್ಯೆಗಳಿದ್ದರೂ ತೋರ್ಪಡಿಸಿಕೊಳ್ಳದೆ, ತನ್ನ ಮಕ್ಕಳ ಮುಂದೆ ನಗುಮುಖದ ಪರಿಚಯವನ್ನು ಮಾತ್ರ ತೋರಿಸುತ್ತಾನೆ. ಹೌದು, ಇದೇ ಪ್ರೀತಿ. ತಂದೆಯ ಪ್ರೀತಿ ಎಂಬುದು ಬೆಲೆ ಕಟ್ಟಲಾಗದ ಮಾಣಿಕ್ಯ. ತನ್ನ ಇಷ್ಟಗಳನ್ನು, ಆಸೆಗಳನ್ನು ಬದಿಗೊತ್ತಿ ತನ್ನ ಮನೆ, ಮಕ್ಕಳು, ಕುಟುಂಬಕ್ಕಾಗಿ ದುಡಿಯುವ ಎಲ್ಲರ ತಂದೆ ಯಂದಿರೂ ಗ್ರೇಟ್‌ !
“ಅಪ್ಪಾ ಐ ಲವ್‌ ಯೂ!’.

ರಕ್ಷಿತಾ ರಮೇಶ
ಬಿಎಸ್‌ಸಿ ವಿದ್ಯಾರ್ಥಿನಿ,
ಭಂಡಾರ್‌ಕಾರ್ ಆರ್ಟ್ಸ್ ಆ್ಯಂಡ್‌ ಸೈನ್ಸ್‌ ಕಾಲೇಜು, ಕುಂದಾಪುರ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.