ಬಿ.ಸಿ. ರೋಡ್‌: ಸರಗಳ್ಳರಿಬ್ಬರ ಬಂಧನ


Team Udayavani, Jan 14, 2017, 3:05 AM IST

Sarakalla-13-1.jpg

ಬಂಟ್ವಾಳ: ಬಿ.ಸಿ. ರೋಡ್‌ ಕೈಕುಂಜೆಯಲ್ಲಿ ಮಹಿಳೆಯೊಬ್ಬರ ಕತ್ತಿನಿಂದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರನ್ನು ಬಂಟ್ವಾಳ ನಗರ ಠಾಣೆ ಅಪರಾಧ ಪತ್ತೆ ವಿಭಾಗದ ಪೊಲೀಸರು ಶುಕ್ರವಾರ ಪಾಣೆಮಂಗಳೂರು ಮಾರ್ನಮಿ ಬೈಲ್‌ನಲ್ಲಿ ದ್ವಿಚಕ್ರ ವಾಹನ ಸಹಿತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇರಳ ರಾಜ್ಯ ಕಲ್ಲಿಕೋಟೆ ಜಿಲ್ಲೆ ಪರಂಬರ ತಾಲೂಕು ಚೆಂಬರಾ ನಿವಾಸಿ ಅಹಮ್ಮದ್‌ ಪಿ. ಕೆ. ಪುತ್ರ ಶಕೀರ್‌ ಯಾನೆ ನಿಜಾಮ್‌ (25) ಮತ್ತು ಕಾಸರಗೋಡು ಜಿಲ್ಲೆ  ಮಂಜೇಶ್ವರ ತಾಲೂಕು ಪೈವಳಿಕೆ ಮಂಜಲ್ಪಾಡಿ ನಿವಾಸಿ  ಜನಾರ್ದನ ಅವರ ಪುತ್ರ  ಕಿರಣ್‌( 25) ಆರೋಪಿಗಳು.

ಬಿ. ಮೂಡ ಗ್ರಾಮ ಕೈಕುಂಜೆ ನಿವಾಸಿ ಬಿಎಸ್‌ಎನ್‌ಎಲ್‌ ಉದ್ಯೋಗಿ ಕಮಲಾಕ್ಷಿ ಎಸ್‌.ಮಯ್ಯ ಜ. 5ರಂದು  ಕರ್ತವ್ಯ ಮುಗಿಸಿ ಸಂಜೆ 5. 45ರ ಸುಮಾರಿಗೆ ನಡೆದುಕೊಂಡು ಮನೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದಿದ್ದ ಆರೋಪಿಗಳು ಕತ್ತಿನಿಂದ ಸುಮಾರು 1. 40ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಕಿತ್ತು ಪರಾರಿಯಾಗಿದ್ದರು. ಬಳಿಕ ನಗರ ಠಾಣೆಗೆ ದೂರು ಸಲ್ಲಿಸಲಾಗಿತ್ತು. ದೂರಿನ ಬಳಿಕ ಬಿ.ಸಿ.ರೋಡ್‌ ಕೈಕುಂಜೆ ದಾರಿಯುದ್ದಕ್ಕೂ ಇದ್ದಂತಹ ಸಿಸಿ ಕೆಮರಾ ಪರಿಶೀಲನೆ ಮಾಡಿದ್ದ ಪೊಲೀಸರು ದ್ವಿಚಕ್ರದ ಹಿಂಬದಿ ಸಂಖ್ಯೆಯನ್ನು ನಮೂದಿಸಿ ತನಿಖೆ ನಡೆಸಿದ್ದರು. ಜ. 13ರಂದು ಅದೇ ದ್ವಿಚಕ್ರದಲ್ಲಿ ಆರೋಪಿಗಳು ಮಾರ್ನಬೈಲಿನಲ್ಲಿ ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರ ತಂಡ ವಾಹನ ತಡೆದಾಗ ಬೈಕ್‌ ತ್ಯಜಿಸಿ ತಪ್ಪಿಸಿ ಓಡಲು ಪ್ರಯತ್ನಿಸಿದ್ದು ಬಂಧನಕ್ಕೆ ಕಾರಣವಾಗಿತ್ತು.

ಮಂಗಳೂರು ನೀರುಮಾರ್ಗದಲ್ಲಿಯೂ ಜ. 5ರಂದು ಇದೇ ಆರೋಪಿಗಳು ಮಹಿಳೆಯೊಬ್ಬರ ಕರಿಮಣಿ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಇದಲ್ಲದೆ ಆರೋಪಿಗಳ ಮೇಲೆ ಇನ್ನೂ ಹಲವು ಪ್ರಕರಣಗಳು ಇರುವುದಾಗಿ ಶಂಕಿಸಿದ್ದು ತನಿಖೆಯ ಬಳಿಕ ವಿವರ ಲಭ್ಯವಾಗಬೇಕಷ್ಟೆ ಎಂದಿದ್ದಾರೆ. ಆರೋಪಿಗಳು ಸಂಚರಿಸುತ್ತಿದ್ದ ದ್ವಿಚಕ್ರ ವಶಪಡಿಸಿಕೊಂಡಿದ್ದು ಅದರ ಮೌಲ್ಯ 50 ಸಾವಿರ ರೂ. ಎಂದು ಆಂದಾಜಿಸಿದೆ.

ಎಸ್‌ಪಿ ಭೂಷಣ ಜಿ. ಬೊರಸೆ, ಹೆಚ್ಚುವರಿ ಅಧೀಕ್ಷಕ ಸಿ.ಬಿ. ವೇದಮೂರ್ತಿ ನಿರ್ದೇಶನದಂತೆ, ಬಂಟ್ವಾಳ ಉಪ ವಿಭಾಗ ಪೊಲೀಸ್‌ ಉಪ ಅಧೀಕ್ಷಕ ರವೀಶ್‌ ಸಿ. ಆರ್‌., ಬಂಟ್ಟಾಳ ವೃತ್ತ ನಿರೀಕ್ಷಕ ಬಿ. ಕೆ. ಮಂಜಯ್ಯ ನೇತೃತ್ವದ ತಂಡದ ಎಸ್‌ಐ ನಂದಕುಮಾರ್‌ ಎಂ.ಎಂ., ಅಪರಾಧ ಪತ್ತೆ ವಿಭಾಗದ ಎಸ್‌ಐ ಗಂಗಾಧರಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.   ಎಎಸ್‌ಐ ಸಂಜೀವ ಕೆ.ಎ., ರಘುರಾಮ ಹೆಗ್ಡೆ,  ಎಚ್‌ಸಿಗಳಾದ ಅಬ್ದುಲ್‌ ಕರೀಂ, ರಾಜು, ಸುಜು, ಕೃಷ್ಣ, ಸುರೇಶ, ಗಿರೀಶ, ಪಿಸಿಗಳಾದ ರಾಜೇಶ್‌, ಅದ್ರಾಮ, ಸುಬ್ರಹ್ಮಣ್ಯ, ಗಂಗಾಧರ,  ಸಂಪತ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಂಪ್ಯೂಟರ್‌ ವಿಭಾಗ ಸಿಬಂದಿ ದಿವಾಕರ ಮತ್ತು ಸಂಪತ್‌ ಸಹಕರಿಸಿದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.