ಉದ್ಭವಲಿಂಗಕ್ಕೆ ಭಕ್ತರಿಂದ ಅಭಿಷೇಕ
Team Udayavani, Feb 25, 2017, 3:00 PM IST
ಉಪ್ಪಿನಂಗಡಿ : ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಶುಕ್ರವಾರ ಇಲ್ಲಿನ ನೇತ್ರಾವತಿ ನದಿ ಗರ್ಭದಲ್ಲಿರುವ ಉದ್ಭವಲಿಂಗಕ್ಕೆ ಭಕ್ತರು ಸ್ವಯಂ ಅಭಿಷೇಕ ನಡೆಸಿ ಪೂಜೆ ಸಲ್ಲಿಸಿದರು.
ನಸುಕಿನಿಂದಲೇ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಉದ್ಭವ ಲಿಂಗಕ್ಕೆ ಜಲಾಭಿಷೇಕ, ಸಿಯಾಳ ಅಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಸಹಿತ ವಿವಿಧ ಅಭಿಷೇಕಗಳನ್ನು ನೆರವೇರಿಸಿ ಸ್ವಯಂ ಪೂಜೆ ಸಲ್ಲಿಸಿದರು. ಇದೇ ವೇಳೆ ಶ್ರೀ ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳ ಅಭಿಷೇಕ, ಚಂಡಿಕಾ ಹೋಮ ಗಳು ವೇ| ಮೂ| ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ ಜರಗಿತು. ಮಧ್ಯಾಹ್ನ ನಡೆದ ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಜನರು ಅನ್ನಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ ರಘುನಾಥ ರೈ, ಸದಸ್ಯ ರಾದ ಬೆಳ್ಳಿಪ್ಪಾಡಿ ಪ್ರಕಾಶ್ ರೈ, ಕೃಷ್ಣ ರಾವ್, ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ, ಸಂಜೀವ ಗಾಣಿಗ, ಯು. ರಾಮ, ಕರುಣಾಕರ ಸುವರ್ಣ, ಸುಂದರ ಗೌಡ, ಸಚಿನ್ ಗೌಡ, ಜಗದೀಶ್ ಶೆಟ್ಟಿ , ಚಂದ್ರಕಲಾ ನಾಯಕ್, ಉಷಾ ಮುಳಿಯ, ಯು. ರಾಧಾ, ಸುಮನ್ ಲದ್ವಾ, ಸುಧಾಕರ ಶೆಟ್ಟಿ, ಚಿದಾನಂದ ನಾಯಕ್, ಕಂಗ್ವೆ ವಿಶ್ವನಾಥ ಶೆಟ್ಟಿ, ಕೈಲಾರ್ ರಾಜ್ ಗೋಪಾಲ ಭಟ್, ವೆಂಕಟೇಶ್ ರಾವ್, ಎನ್. ಗೋಪಾಲ ಹೆಗ್ಡೆ, ಹರಿರಾಮಚಂದ್ರ, ರಾಮಚಂದ್ರ ಮಣಿಯಾಣಿ ಮೊದಲಾದ ವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ