ಉಪ್ಪಿನಂಗಡಿಯ ವಿಜಯ-ವಿಕ್ರಮ ಕಂಬಳ: ಕರೆ ಮುಹೂರ್ತ


Team Udayavani, Feb 25, 2017, 3:15 PM IST

24upg1.jpg

ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಬಳಿಯ ನೇತ್ರಾವತಿ ನದಿ ಕಿನಾರೆಯ ವಿಜಯ-ವಿಕ್ರಮ ಕಂಬಳ ಕರೆಯಲ್ಲಿ ಶುಕ್ರವಾರ ಕರೆ ಮುಹೂರ್ತ ನಡೆಯಿತು. ಸುಬ್ರಹ್ಮಣ್ಯ ಭಟ್‌ ಧಾರ್ಮಿಕ ವಿಧಿ-ವಿಧಾನ ಗಳನ್ನು ನೆರವೇರಿಸಿದರು.

ಕರೆ ಮುಹೂರ್ತದ ಬಳಿಕ ಶ್ರಮದಾನ ನಡೆಸಿದ ಕಂಬಳಾಭಿಮಾನಿಗಳು ಕರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಕೊಂಡರು. ಈ ಸಂದರ್ಭ ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್‌ ಶೆಣೈ ನಂದಾವರ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ ಬೆಳ್ಳಿಪ್ಪಾಡಿ, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಉಪಾಧ್ಯಕ್ಷ ವಿಟuಲ ಶೆಟ್ಟಿ ಕುಲ್ಲೊಟ್ಟು, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸುನೀಲ್‌ ಕುಮಾರ್‌ ದಡ್ಡು,  ನ್ಯಾಯವಾದಿ ಅನಿಲ್‌ ಕುಮಾರ್‌ ದಡ್ಡು, ಸಿಎ ಬ್ಯಾಂಕ್‌ ನಿರ್ದೇಶಕ ರಾಮಚಂದ್ರ ಮಣಿಯಾಣಿ, ಜೇಸಿಐ ಅಧ್ಯಕ್ಷ ಕೇಶವ ರಂಗಾಜೆ, ಕಾರ್ಯದರ್ಶಿ ಶೇಖರ ಗೌಂಡತ್ತಿಗೆ, ಪ್ರಮುಖರಾದ ಸತೀಶ್‌ ಪಿಲಿಗೂಡು, ಆದರ್ಶ ಶೆಟ್ಟಿ ಕಜೆಕ್ಕಾರು, ಯೊಗೀಶ್‌ ಸಾಮಾನಿ ಸಂಪಿಗೆದಡಿ, ದಿಲೀಪ್‌ ಶೆಟ್ಟಿ ಕರಾಯ, ಹರಿಪ್ರಸಾದ್‌ ಶೆಟ್ಟಿ ಬೊಳ್ಳಾವು, ವಿಶ್ವನಾಥ ಶೆಟ್ಟಿ ಕಂಗ್ವೆ, ಹರಿಶ್ಚಂದ್ರ ಆಚಾರ್ಯ, ಸದಾಶಿವ ಸಾಮಾನಿ, ಮೋಹನ್‌ ಪಕಳ ಕುಂಡಾಪು ಮತ್ತಿತರರು ಉಪಸ್ಥಿತರಿದ್ದರು.

ಅಂಗೀಕಾರ ದೊರೆತರೆ ಕಂಬಳ 
ಮಾಧ್ಯಮದೊಂದಿಗೆ ಮಾತನಾಡಿದ ಕಂಬಳದ ಪರ ಕಾನೂನು ಹೋರಾಟಗಾರ, ಉಪ್ಪಿನಂಗಡಿ ವಿಜಯ- ವಿಕ್ರಮ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ, ಪ್ರಾಣಿ ಹಿಂಸೆ ತಡೆ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಇದಕ್ಕಿನ್ನು ರಾಷ್ಟ್ರಪತಿಯವರು ಅಂಗೀಕಾರ ನೀಡ ಬೇಕಾಗಿದೆ. ಆದ್ದರಿಂದ ನಾನು ಸೇರಿದಂತೆ ಕಂಬಳ ಸಮಿತಿಯ ನಿಯೋಗವೊಂದು ಮಂಗಳವಾರ ದಿಲ್ಲಿಗೆ ತೆರಳಲಿದ್ದು, ಸಂಸದರನ್ನು ಭೇಟಿಯಾಗಿ ಶೀಘ್ರ ಈ ಮಸೂದೆಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದೇವೆ. ಮಾ. 18ರ ಮೊದಲು ಈ ಮಸೂದೆಗೆ ರಾಷ್ಟ್ರಪತಿ ಯವರಿಂದ ಅಂಗೀಕಾರ ದೊರೆತರೆ, ಮಾ. 18ರಂದು ಉಪ್ಪಿನಂಗಡಿಯ ವಿಜಯ-ವಿಕ್ರಮ ಕಂಬಳ ನಡೆಯಲಿದೆ. ಇಲ್ಲದಿದ್ದರೆ ಇಲ್ಲ. ಮಾ. 18ರ ಬಳಿಕ ಅಂಗೀಕಾರ ದೊರೆತರೆ ಅದು ಕಂಬಳ ನಡೆಸುವ ಸಮಯ ವಾಗಿದ್ದರೆ, ಈ ವರ್ಷದ ಪ್ರಥಮ ಕಂಬಳವನ್ನು ಉಪ್ಪಿ ನಂಗಡಿಯಿಂದಲೇ ಆರಂಭಿಸಲು ತೀರ್ಮಾ ನಿಸಿದ್ದೇವೆ. ಅದಕ್ಕಾಗಿ ಈಗಾಗಲೇ ಕರೆ ಮುಹೂರ್ತ ನಡೆಸಿ, ಕರೆಯನ್ನು ಸಿದ್ಧಪಡಿಸಿ ಇಡಲಿದ್ದೇವೆ. ಕುದಿ ಓಡಿಸುವವರಿಗೂ ಅವಕಾಶ ಕಲ್ಪಿಸಿಕೊಡಲಿದ್ದೇವೆ. 

ಈ ಹಿಂದೆ ಹೇಳಿದಂತೆ ಮಾ. 18ರಂದು ವಿಜಯೋತ್ಸವ ಅಥವಾ ಪ್ರತಿಭಟನಾರ್ಥ ಕಂಬಳ ನಡೆಸುವ ತೀರ್ಮಾನವನ್ನು ಈ ಮಸೂದೆ ರಾಷ್ಟ್ರಪತಿಯವರ ಅಂಗಳದಲ್ಲಿರುವುದರಿಂದ ಕೈಬಿಡಲಾಗಿದೆ. ರಾಷ್ಟ್ರ ಪತಿಯವರು ಅಂಕಿತ ಹಾಕಲಿದ್ದಾರೆ ಎಂಬ ಭರವಸೆ ಇದೆ ಎಂದರು.

ಶ್ರಮದಾನ 
ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿರುವ ವಿಜಯ- ವಿಕ್ರಮ ಕಂಬಳ ಕರೆಯ ಬಳಿ ಫೆ. 26ರಂದು ಸ್ವತ್ಛತೆಗಾಗಿ ಶ್ರಮದಾನ ನಡೆಯಲಿದ್ದು, ಕಂಬಳಾಭಿಮಾ ನಿಗಳು, ಸಂಘಟನೆಗಳು ಹೀಗೆ ಪ್ರತಿಯೋರ್ವರು ಶ್ರಮದಾನ ದಲ್ಲಿ ಭಾಗವಹಿಸಿ, ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.