ಕಡಬ ತಾಲೂಕು: ಅಭಿವೃದ್ಧಿಯ ತಂಗಾಳಿ ಬೀಸುವಂತಾಗಲಿ


Team Udayavani, Mar 25, 2017, 3:43 PM IST

1503kdb1-kadaba-map.jpg

ಒಂದು ವಾರ ಕಡಬ ತಾಲೂಕು ಕೇಂದ್ರ ಹೇಗಾದರೆ ಚೆಂದ ಎನ್ನುವುದರ ಬಗ್ಗೆ ಸರಣಿ ಲೇಖನ ಗಳಿಂದ ಬೆಳಕು ಚೆಲ್ಲಲಾಯಿತು. ಇನ್ನು ಜನಪ್ರತಿ ನಿಧಿಗಳು ಮತ್ತು ಸರಕಾರ ಅಭಿವೃದ್ಧಿಯತ್ತ ಮುಖ ಮಾಡಬೇಕಿದೆ. ಇಲ್ಲಿಗೆ ಈ ಸರಣಿ ಮುಕ್ತಾಯ.

ಕಡಬ ಕೊನೆಗೂ ತಾಲೂಕಾಗಿ ಘೋಷಿತವಾಗಿದೆ. ಅಭಿವೃದ್ಧಿಯ ದೃಷ್ಟಿಕೋನದಲ್ಲಿ ಹೇಳುವುದಾದರೆ, ಒಂದು ಪ್ರದೇಶ ತಾಲೂಕು ಕೇಂದ್ರವಾಗಿ ಮಾರ್ಪಡುವುದು ಒಳ್ಳೆಯ ಬೆಳವಣಿಗೆ. ಇದರಿಂದ ಸುತ್ತಲಿನ ಹಲವಾರು ಪ್ರದೇಶಗಳಿಗೆ ಅಭಿವೃದ್ಧಿಯ ಗಾಳಿ ಬೀಸುತ್ತದೆ. ಅದು ಜನರ ಪಾಲಿಗೆ ತಂಗಾಳಿಯಾಗಿಸಬೇಕೋ, ಬಿರುಗಾಳಿಯಾಗಿಸಬೇಕೋ ಎಂಬುದರಲ್ಲಿ ಸ್ಥಳೀಯ ಜನಪ್ರತಿನಿಧಿ ಹಾಗೂ ಸರಕಾರಗಳ ಪಾಲು ಹೆಚ್ಚಿದೆ.

ಕಡಬ ತಾಲೂಕಾಗಿ ಘೋಷಣೆಯಾಗಿರುವುದು ಹೊಸತಲ್ಲ. ಈ ಹಿಂದೆಯೂ ಘೋಷಿತವಾಗಿತ್ತಾದರೂ ಅನುದಾನ ಬಿಡುಗಡೆಯಾಗದೇ ಯಾವುದೇ ಅಭಿವೃದ್ಧಿ ಕೆಲಸ ಆಗಿರಲಿಲ್ಲ. ಬಳಿಕ ಒಂದಿಷ್ಟು ಒತ್ತಡ ಹೇರಿದ ಮೇಲೆ ವಿಶೇಷ ತಹಶೀಲ್ದಾರ್‌ ನೇಮಕವಾಗಿ ಕಚೇರಿಯೂ ಬಂದಿತು. ಅದೊಂದು ರೀತಿಯಲ್ಲಿ ತಾತ್ಕಾಲಿಕ ಸಮಾಧಾನ ಎಂಬಂತಿತ್ತು. ಈಗ ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆಯಾಗಿದೆ. 

ಒಂದು ತಾಲೂಕು ಕೇಂದ್ರವಾಗುವುದೆಂದರೆ ಬರೀ ಆಡಳಿತ ವ್ಯವಸ್ಥೆಯ ಕೇಂದ್ರವಾಗುವುದಲ್ಲ. ಇಡೀ ತಾಲೂಕಿನ ಗ್ರಾಮಗಳ ಆರೋಗ್ಯವನ್ನು ಕಾಪಾಡುವ, ಹೆಚ್ಚಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಂತೆ. ಅದನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ತಾಲೂಕು ಕೇಂದ್ರವಾಗಿದ್ದಕ್ಕೆ ಸಾರ್ಥಕ. ಹಲವು ಬಾರಿ ಸರಕಾರ ಯಾವುದ್ಯಾವುದೋ ಕಾರಣಗಳಿಗೆ ತಾಲೂಕು ಕೇಂದ್ರ ಘೋಷಣೆ ಮಾಡಿ, ಹಣ ಒದಗಿಸದೇ ನರಳಿದ ಪ್ರಸಂಗಗಳೂ ಬಹಳಷ್ಟಿವೆ.

ಎಲ್ಲವೂ ಅಂದುಕೊಂಡಂತಿಲ್ಲ
ಒಂದು ವಾರದಿಂದ ಕಡಬ ತಾಲೂಕಿನಲ್ಲಿ ಆಗಬೇಕಾದ ಕೆಲಸಗಳೇನು? ಅವುಗಳಲ್ಲಿ ತುರ್ತಾಗಿ ಆಗಬೇಕಾದದ್ದೇನು ಇತ್ಯಾದಿ ಬಗ್ಗೆ “ಉದಯವಾಣಿ’ ಸುದಿನ ಪಟ್ಟಿ ಮಾಡಿಕೊಟ್ಟಿದೆ. ಈ ಮೂಲಕ ಅಭಿವೃದ್ಧಿಗೊಂದು ದಿಸೆ ತೋರಿಸುವ ಕೆಲಸ ಮಾಡಿದೆ.  ಅಂದಹಾಗೆ ಕಡಬವೂ ಬೇರೆಲ್ಲಾ ತಾಲೂಕುಗಳಂತೆ ಕೆಲವು ಕೊರತೆಗಳನ್ನು ಹೊಂದಿವೆ. 

ಯಾವಾಗಲೂ ತಾಲೂಕು ಕೇಂದ್ರವಾದಾಗ ಜನರಿಗೆ ಹೆಚ್ಚು ನಿರೀಕ್ಷೆಗಳಿರುತ್ತವೆ. ಅವುಗಳು ಈಡೇರಬಹುದೆಂಬ ನಂಬಿಕೆಯೂ ಇರುತ್ತದೆ. ಹಾಗಾಗಿಯೇ ಸರಕಾರದ ಒಂದು ಪ್ರಕಟನೆ ಹರ್ಷವನ್ನು ತರುತ್ತದೆ. ಆದರೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳದೇ ಪ್ರದೇಶದ ಅಭಿವೃದ್ಧಿಗೆ ಅಡ್ಡಿಯಾದರೆ ಜನರು, ಸರಕಾರ ಮತ್ತು ಸ್ಥಳೀಯ ಪ್ರತಿನಿಧಿಗಳು ದೂರುವುದು ಸಹಜ. ಶೈಕ್ಷಣಿಕ ವ್ಯವಸ್ಥೆಯಿಂದ ಹಿಡಿದು ಆರೋಗ್ಯವಲಯದವರೆಗೂ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಗಮನಹರಿಸಬೇಕೆಂಬುದು ಸ್ಥಳೀಯರ ಆಗ್ರಹವೂ ಹೌದು. ಇದನ್ನು ಈಡೇರಿಸುವತ್ತ ಸರಕಾರ, ಜನಪ್ರತಿನಿಧಿಗಳು ಕ್ರಿಯಾಶೀಲರಾಗಬೇಕಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.