ರಾಕೇಶ್ಕೃಷ್ಣಗೆ ರಾಷ್ಟ್ರಪತಿ ಅಭಿನಂದನೆ
Team Udayavani, Mar 26, 2017, 12:29 PM IST
ಪುತ್ತೂರು: ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ರಾಕೇಶ್ಕೃಷ್ಣ ಅವರನ್ನು ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಭಿನಂದಿಸಿದ್ದಾರೆ.
ನ್ಯಾಶನಲ್ ಫೌಂಡೇಶನ್ ಆಫ್ ಇಂಡಿಯಾ ಹಾಗೂ ಭಾರತ ಸರಕಾರದ ವಿಜ್ಞಾನ ಹಾಗೂ ತಂತ್ರಜ್ಞಾನ ಮಂತ್ರಾಲಯ ಹೊಸದಿಲ್ಲಿಯಲ್ಲಿ ಜಂಟಿಯಾಗಿ ಆಯೋಜಿಸಿದ್ದ ಫೆಸ್ಟಿವಲ್ ಆಫ್ ಇನ್ನೋವೇಶನ್ ಕಾರ್ಯಕ್ರಮದಲ್ಲಿ ರಾಕೇಶ್ ಕೃಷ್ಣ ತನ್ನ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ರಾಷ್ಟ್ರಪತಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆರನೇ ರಾಷ್ಟ್ರಮಟ್ಟದ ಇನ್ಸ್ಪಯರ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ತಿರುವನಂತಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಯನ್ಸ್ ಎಜುಕೇಶನ್ ಆ್ಯಂಡ್ ರಿಸರ್ಚ್ನಲ್ಲಿ ಎಂ.ಎಸ್. ವಿಭಾಗದ ವಿದ್ಯಾರ್ಥಿನಿ
ತನ್ನ ಸಹೋದರಿ ರಶ್ಮಿಪಾರ್ವತಿ ಮಾರ್ಗದರ್ಶನದಲ್ಲಿ ಸೀಡೋಗ್ರಾಫರ್: ಎ ನಾವೆಲ್ ಸೀಡರ್ ಫಾರ್ ಸಿಸ್ಟಮ್ಯಾಟಿಕ್ ಕಲ್ಟಿವೇಶನ್ ಎಂಬ ವಿಜ್ಞಾನ ಮಾದರಿಯನ್ನು ರಾಕೇಶ್ ಕೃಷ್ಣ ರೂಪುಗೊಳಿಸಿದ್ದರು.
ಈ ಸಂಶೋಧಿತ ಯಂತ್ರ ಬೀಜ ಬಿತ್ತನೆಗೆ ಬಳಸುವಂಥದ್ದು, ಎಲ್ಲ ತರದ ಪ್ರದೇಶಗಳಲ್ಲೂ ಇದನ್ನು ಬಳಸಬಹುದಾಗಿದೆ. ಯಂತ್ರದಲ್ಲಿ ಬೀಜದ ಗಾತ್ರಕ್ಕೆ ತಕ್ಕಂತೆ ತೂತುಗಳನ್ನು ಬದಲಾಯಿಸಲು ಅವಕಾಶವಿದೆ. ಹಲವು ಪ್ರಯೋಗಗಳಲ್ಲಿ ವೈಜ್ಞಾನಿಕವಾಗಿ ಈ ಯಂತ್ರ ಕಾರ್ಯಸಾಧು ವೆನಿಸಿದೆ. ಇವರು ವಿವೇಕಾನಂದ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥೆ ಡಾ| ದುರ್ಗಾರತ್ನ ಹಾಗೂ ರವಿಶಂಕರ ನೆಕ್ಕಿಲ ದಂಪತಿ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ