“ಮಕ್ಕಳಿಗೆ ಎಳವೆಯಲ್ಲೇ ಮೌಲ್ಯಗಳನ್ನು ಕಲಿಸಿ’


Team Udayavani, Mar 28, 2017, 11:24 AM IST

28-SUDINA-10.jpg

ನಗರ: ಇಂದು ಹಣದ ಲಾಲಸೆ ಮಾನವೀಯ ಸಂಬಂಧಗಳಿಗೆ ಅಡ್ಡಿಯಾಗುತ್ತಿದೆ. ಎಳವೆಯಿಂದಲೇ ಮಕ್ಕಳನ್ನು ಆರ್ಥಿಕ ಸಂಪಾದನೆಯ ಕುರಿತಾಗಿ ಚಿಂತನೆಗೆ ಹಚ್ಚುವ ಬದಲು ಮೌಲ್ಯಗಳ ಬಗೆಗೆ ಕಲಿಸಿಕೊಡಬೇಕಿದೆ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ್‌ ಕುಮಾರ್‌ ಕಮ್ಮಜೆ ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ನಗರದ ನಿವೇದಿತಾ ಶಿಶುಮಂದಿರದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಆಧುನಿಕ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಜೀವನ ನಡೆಸಬಹುದಾದಷ್ಟು ಆದಾಯವನ್ನು ಕಾಣಬಹುದಾಗಿದೆ. ಹೆತ್ತ ತಂದೆ-ತಾಯಿ ಹಾಗೂ ಜನ್ಮಭೂಮಿಯನ್ನು ದೂರ ಮಾಡಿ ನಗರಗಳೆಡೆಗೆ ವಲಸೆ ಹೋಗುವುದು ಅಕ್ಷಮ್ಯ ಎಂದು ಹೇಳಿದರು.

ಕೋಶಾಧಿಕಾರಿ ರಾಧೇಶ್ಯಾಂ ವಾರ್ಷಿಕ ವರದಿ ವಾಚಿಸಿದರು. ಶಿಶುಮಂದಿರದ ಆಡಳಿತ ಮಂಡಳಿಯ ಸಮಿತಿಯ ಸದಸ್ಯೆ ಲಕ್ಷ್ಮೀ ವಿ.ಜಿ. ಭಟ್‌ ವಿಜ್ಞಾಪನ ಪತ್ರ ಮಂಡಿಸಿದರು. ಹಿರಿಯ ವಿದ್ಯಾರ್ಥಿ ಚಿರಂತನ್‌ ಚೆಂಡೆ ನುಡಿಸಿದರು. ಶಿಶುಮಂದಿರದ ಅಧ್ಯಕ್ಷ ರಘುನಾಥ ಬಿ. ಅತಿಥಿಗಳನ್ನು ಸ್ವಾಗತಿ ಸಿದರು. ಕಾರ್ಯದರ್ಶಿ ಶ್ರೀಧರ ಕುಂಜಾರು ವಂದಿಸಿದರು. ಶಿಶುಮಂದಿರದ ಮಾತೃ ಮಂಡಳಿಯ ಸದಸ್ಯೆ ಸೌಮ್ಯಾ ಡಿ. ಕಾರ್ಯಕ್ರಮ ನಿರ್ವಹಿಸಿದರು.

ಸಭೆಯ ಬಳಿಕ ಶಿಶುಮಂದಿರದ ಪುಟಾಣಿಗಳು, ಬಾಲ ಗೋಕುಲದ ವಿದ್ಯಾರ್ಥಿಗಳು, ಮಾತೃಮಂಡಳಿಯ ಮಾತೆಯ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.  ಪ್ರಾರ್ಥನೆ, ಪಂಚಾಂಗ, ಅಮೃತಬಿಂದು, ಅಮೃತವಚನ, ಗಾದೆಮಾತುಗಳು, ಕಬೀರದೋಹೆ, ಸರ್ವಜ್ಞನ ವಚನ ಹಾಗೂ ಭಗವದ್ಗೀತಾ ಪಠಣ ವನ್ನು ಶಿಶುಮಂದಿರದ ಪುಟಾಣಿಗಳು ನಡೆಸಿಕೊಟ್ಟರು.

ಸದ್ವಿಚಾರ ಕಲಿಸಿ
ಅಧ್ಯಕ್ಷತೆ ವಹಿಸಿದ ವಿವೇಕಾನಂದ ಅದ್ಯಯನ ಕೇಂದ್ರ ಯಶಸ್‌ನ ಆಡಳಿತ ಸಮಿತಿಯ ಸದಸ್ಯೆ ವಿದ್ಯಾ ಆರ್‌. ಗೌರಿ ಮಾತ ನಾಡಿ, ಎಳವೆಯಲ್ಲಿ ಮಕ್ಕಳಿಗೆ ಸದ್ವಿಚಾರಗಳನ್ನು ಕಲಿಸಬೇಕು. ಮಕ್ಕಳಲ್ಲಿರುವ ಕುತೂಹಲ ಭರಿತ ವಿಷಯಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಆಗ ಮಕ್ಕಳ ಸರ್ವ ತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ನಿವೇದಿತಾ ಶಿಶು ಮಂದಿರ ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ,  ಭಾರತೀಯ ಶಿಕ್ಷಣವನ್ನು  ಒದಗಿಸಿಕೊಡುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.