ಕ್ಲಾಸಿನಲ್ಲಿ ಮೊಬೈಲ್‌ ಹಿಡಿಯುತ್ತಿದ್ದವ SSLCಯಲ್ಲಿ 551 ಅಂಕ ತೆಗೆದ !


Team Udayavani, May 15, 2017, 7:22 PM IST

Blind-Boy-15-5.jpg

ಬೆಳ್ತಂಗಡಿ: ಈ ವಿದ್ಯಾರ್ಥಿಗೆ ದೃಷ್ಟಿದೋಷ. ಶಾಲೆಯಲ್ಲಿ ಅಧ್ಯಾಪಕರು ಪಾಠ ಮಾಡುತ್ತಿದ್ದರೆ ಈತ ಮೊಬೈಲ್‌ ಹಿಡಿದಿರುತ್ತಿದ್ದ. ಮೊಬೈಲ್‌ ಆಟವಾಡುತ್ತಾನೆಂದು ಭಾವಿಸಿದರೆ ಆತ ಮೊಬೈಲ್‌ನಲ್ಲಿ ಗೇಮ್ಸ್‌ ನೋಡುತ್ತಿರಲಿಲ್ಲ, ಆಡುತ್ತಿರಲಿಲ್ಲ. ಬದಲಾಗಿ, ಅಧ್ಯಾಪಕರು ಹೇಳುತ್ತಿದ್ದ ಪಾಠವನ್ನು ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದ!. ಹೀಗೆ ಪಾಠಗಳನ್ನು ಅಭ್ಯಾಸ ಮಾಡಿದ ಆ ಹುಡುಗ ಎಸೆಸೆಲ್ಸಿ ಪರೀಕ್ಷೆಯನ್ನು ಸಹೋದರಿಯ ಸಹಾಯದಿಂದ ಬರೆದ. ಮೊನ್ನೆ ಫಲಿತಾಂಶ ಬಂದಾಗ 551 ಅಂಕ ಗಳಿಸಿದ್ದ!. ಈ ರೀತಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆಮಾಡಿಕೊಂಡು ತನ್ನ ದೈಹಿಕ ದೌರ್ಬಲ್ಯವನ್ನು ಮೆಟ್ಟಿನಿಂತು ಗಟ್ಟಿಮನಸ್ಸಿನಿಂದ ಪರೀಕ್ಷೆಯನ್ನು ಎದುರಿಸಿ ಉನ್ನತ ಶ್ರೇಣಿಯಲ್ಲಿ ಪಾಸಾದ ಹುಡುಗನೇ ನೆರಿಯ ಗಂಡಿಬಾಗಿಲಿನ ಜಾರ್ಜ್‌ ಮತ್ತು ಆನ್ಸಿ ಅವರ ಪುತ್ರ ಸಿರಿಲ್‌ ಎನ್‌.ಜಿ.


ಸಿರಿಲ್‌ ಈ ಬಾರಿಯ ಎಸೆಸೆಲ್ಸಿಯಲ್ಲಿ ಶೇ.88.16ರಷ್ಟು ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆಯನ್ನು ಮೆರೆದಿದ್ದಾನೆ. ಜಾರ್ಜ್‌ ದಂಪತಿಗೆ ಇಬ್ಬರು ಪುತ್ರಿಯರು, ಹಾಗೂ ಓರ್ವ ಪುತ್ರ, ಆತನೇ ಸಿರಿಲ್‌. ಇವರದ್ದು ಕೃಷಿಕ ಕುಟುಂಬವಾಗಿದ್ದು ಸಿರಿಲ್‌ನ ವಿದ್ಯಾಭ್ಯಾಸದ ಸಲುವಾಗಿಯೇ ಲಾೖಲಕ್ಕೆ ಬಂದು ನೆಲೆಸಿದರು. ಸಿರಿಲ್‌ ಹುಟ್ಟಿನಿಂದಲೇ ಮಂದದೃಷ್ಟಿ  ಹೊಂದಿದ್ದು  ಶಾಲೆಯಲ್ಲಿ  ಕಲಿಕೆಯ ಕಡೆಗೆ ಅಪಾರ ಆಸಕ್ತಿ ಹೊಂದಿದ್ದ. ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಶಾಲೆಗೆ 5ನೇ ತರಗತಿಗೆ ಸೇರಿ 10ನೇ ತರಗತಿಯವರೆಗೆ ಸಾಮಾನ್ಯ ಮಕ್ಕಳೊಂದಿಗೆ ಕಲಿತು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಉತ್ತಮ ಸಾಧನೆಗೈದಿದ್ದ. ಎಲ್ಲರಿಗೂ ಪ್ರೀತಿ ಪಾತ್ರನಾಗಿದ್ದ.

ಸಿರಿಲ್‌ಗೆ ದೃಷ್ಟಿ ಸಮಸ್ಯೆ ಇದ್ದುದರಿಂದ ಶಾಲೆಯಲ್ಲಿ ಅಧ್ಯಾಪಕರು ಬೋರ್ಡಿನಲ್ಲಿ ಬರೆದದ್ದು ಕಾಣಿಸುತ್ತಿರಲಿಲ್ಲ ಮಾತ್ರವಲ್ಲ ಪಾಠಗಳನ್ನು ಪುಸ್ತಕದಲ್ಲಿ ಬರೆಯಲು ಸಾಧ್ಯವಾಗುತ್ತಿರಲಿಲ್ಲ. ಶಿಕ್ಷಕರು ಹೇಳಿದ್ದೂ ಪಕ್ಕನೆ ತಲೆಗೆ ಹೊಳೆಯುತ್ತಿರಲಿಲ್ಲ. ಹಾಗಿದ್ದರೂ, ತರಗತಿಯಲ್ಲಿ ಅಧ್ಯಾಪಕರು ಕಲಿಸುವ ಪಾಠವನ್ನು ಏಕಾಗ್ರತೆಯಿಂದ ಕೇಳಿ ಮೊಬೈಲ್‌ ಮೂಲಕ ರೆಕಾರ್ಡ್‌ ಮಾಡಿ ಮನೆಗೆ ಹೋಗಿ ಮತ್ತೆ ಕೇಳುತ್ತಿದ್ದ. ಅಂಧ‌ ವಿದ್ಯಾರ್ಥಿಗಳಿಗೆ ಎರಡು ವಿಷಯಗಳಲ್ಲಿ ರಿಯಾಯಿತಿ ಇದೆ. ಆದರೆ ಗಣಿತದಲ್ಲಿ ಆಸಕ್ತನಾದ ಸಿರಿಲ್‌ ಯಾವುದೇ ವಿಷಯವನ್ನು ಕಲಿಯದೇ ಇರುವುದು ಬೇಡ ಎಂದು ಗಣಿತವನ್ನೂ ಆರಿಸಿಕೊಂಡ. ಅನುಮಾನ ಬಂದುದನ್ನು ಶಿಕ್ಷಕರ ಬಳಿ, ಮನೆಯಲ್ಲಿ ಅಕ್ಕನ ಬಳಿ ಕೇಳಿ ತಿಳಿದುಕೊಳ್ಳುತ್ತಿದ್ದ. ಹೀಗೆ ಗಮನವಿಟ್ಟು ಅಭ್ಯಾಸವನ್ನು ಮಾಡಿದ್ದ ಸಿರಿಲ್‌ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯನ್ನು ತನ್ನ ಅಕ್ಕನ ಸಹಾಯದಿಂದ ಬರೆದ. ಮೊನ್ನೆ ಫಲಿತಾಂಶ ಬಂದಾಗ ಸಿರಿಲ್‌ಗೆ 551 ಅಂಕಗಳು ಎ ಶ್ರೇಣಿಯೂ ಬಂದಿತ್ತು.

ಈಗ ಪಿಯುಸಿಯಲ್ಲಿ ಕಾಮರ್ಸ್‌ ತೆಗೆದುಕೊಂಡು ಬಿಕಾಂ ಮಾಡುವ ಕನಸು ಹೊಂದಿದ್ದಾನೆ. ಶಾಲಾ ಶಿಕ್ಷಕರ ಹಾಗೂ ಮನೆಯವರ ಪ್ರೋತ್ಸಾಹವನ್ನು ಬಳಕೆಮಾಡಿ ಸಾಧಿಸಬೇಕೆಂಬ ಹಠ ಹಾಗೂ ಸಾಧನೆಯಿಂದ ಇದು ಸಾಧ್ಯವಾಯಿತು ಎನ್ನುತ್ತಾರೆ ಸಿರಿಲ್‌ನ ಸೈಂಟ್‌ ಮೆರೀಸ್‌ ಶಾಲಾ ಮುಖ್ಯ ಶಿಕ್ಷಕಿ ಸಿ| ಜಿನ್ಸಿ ದೇವಸ್ಯ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.