ಎಸೆಸೆಲ್ಸಿ ತುಳುಪಠ್ಯ: ಶೇ. 100 ಫಲಿತಾಂಶ


Team Udayavani, May 22, 2017, 3:34 PM IST

sslc-exam-2017-22.jpg

ಪುತ್ತೂರು: ಎಸೆಸೆಲ್ಸಿಯಲ್ಲಿ ತುಳು ಪಠ್ಯವನ್ನು ತೃತೀಯ ಭಾಷೆಯನ್ನಾಗಿ ಕಲಿತು ಪರೀಕ್ಷೆ ಬರೆದ ದ.ಕ. ಜಿಲ್ಲೆಯ 12 ಶಾಲೆಗಳ ಎಲ್ಲ 283 ವಿದ್ಯಾರ್ಥಿಗಳು ಉತೀರ್ಣಗೊಂಡು ಶೇ. 100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆ ಬರೆದವರಲ್ಲಿ 158 ಬಾಲಕರು ಮತ್ತು 125 ಬಾಲಕಿಯರಿದ್ದರು. ಇವರಲ್ಲಿ 134 ವಿದ್ಯಾರ್ಥಿಗಳು  ಎ ಪ್ಲಸ್‌, 40 ಮಂದಿ ಎ, 42 ಮಂದಿ ಬಿ ಪ್ಲಸ್‌, 40 ಮಂದಿ ಬಿ, 12 ಮಂದಿ ಸಿ ಪ್ಲಸ್‌ 15 ಮಂದಿ ಸಿ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಾಲಾವಾರು ಫಲಿತಾಂಶ
ಪುತ್ತೂರು ತಾಲೂಕಿನ ಕೊಂಬೆಟ್ಟು ಸರಕಾರಿ ಪ್ರೌಢಶಾಲೆ – 30, ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆ – 61, ಸುಳ್ಯಪದವು ಸರ್ವೋದಯ ಪ್ರೌಢಶಾಲೆ – 36, ಕಬಕ ಸರಕಾರಿ ಪ್ರೌಢಶಾಲೆ – 15, ಸವಣೂರು ಸರಕಾರಿ ಪ್ರೌಢಶಾಲೆ – 25, ಪಾಪೆಮಜಲು ಸರಕಾರಿ ಪ್ರೌಢಶಾಲೆ – 5, ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆ – 20, ಕಾಣಿಯೂರು ಪ್ರಗತಿ ಕನ್ನಡ ಮಾಧ್ಯಮ ಶಾಲೆ – 23, ರಾಮಕುಂಜ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ – 14, ಬಂಟ್ವಾಳ ತಾಲೂಕಿನ ವಿಟ್ಲ ವಿಠಲ ಪ್ರೌಢಶಾಲೆ – 29, ಸರಪಾಡಿ ಸರಕಾರಿ ಪ್ರೌಢಶಾಲೆ – 17, ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಸರಕಾರಿ ಪ್ರೌಢಶಾಲೆ – 8 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ಎಲ್ಲರೂ ಉತ್ತೀರ್ಣರಾಗಿದ್ದಾರೆ.

25ರಿಂದ 283ಕ್ಕೆ ಏರಿಕೆ: 2015-16ರಲ್ಲಿ ತುಳು ಪಠ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ-25. ಪುತ್ತೂರು ತಾಲೂಕಿನ 3 ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿದ್ದರು. ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಉತೀರ್ಣರಾಗಿ ಶೇ. 100 ಫಲಿತಾಂಶ ಬಂದಿತ್ತು. ಓರ್ವ ವಿದ್ಯಾರ್ಥಿನಿ 100ಕ್ಕೆ 100 ಅಂಕ ಪಡೆದಿದ್ದರೆ,4 ಮಂದಿ ವಿದ್ಯಾರ್ಥಿಗಳು 95 ಶೇ. ಅಧಿಕ ಅಂಕ ಗಳಿಸಿದ್ದರು. 2016-17ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ 283ಕ್ಕೆ ಏರಿತ್ತು. 3 ಶಾಲೆಗಳಿಂದ 12 ಶಾಲೆಗೆ ವಿಸ್ತರಣೆಗೊಂಡಿತ್ತು.

ಪುತ್ತೂರು ಗರಿಷ್ಠ
ದ.ಕ. ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪುತ್ತೂರು ತಾಲೂಕಿನ 9 ಶಾಲೆಗಳಿಂದ 229, ಬೆಳ್ತಂಗಡಿ ತಾಲೂಕಿನ 1 ಶಾಲೆಯಿಂದ 8, ಬಂಟ್ವಾಳ ತಾಲೂಕಿನ 2 ಶಾಲೆಯಿಂದ 46 ವಿದ್ಯಾರ್ಥಿಗಳಿದ್ದರು. ಉಪ್ಪಿನಂಗಡಿ ಸ.ಪ.ಪೂ. ಪ್ರೌಢ ಶಾಲೆಯ 63 ವಿದ್ಯಾರ್ಥಿ ಸಂಖ್ಯೆ ಶಾಲಾವಾರು ಮಟ್ಟದ ಗರಿಷ್ಠ ಸಂಖ್ಯೆ. ತಾಲೂಕುವಾರು ಮಟ್ಟದಲ್ಲಿ ಪುತ್ತೂರು ತಾಲೂಕಿನಿಂದ ಗರಿಷ್ಠ ವಿದ್ಯಾರ್ಥಿಗಳು ತುಳು ಪಠ್ಯ ಆಯ್ದುಕೊಂಡಿದ್ದರು.

ಈ ಬಾರಿ ಪರೀಕ್ಷೆ ಬರೆದ 283 ವಿದ್ಯಾರ್ಥಿಗಳು ಉತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. ಇದರಲ್ಲಿ 38 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ. 138 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇನ್ನಷ್ಟು ಏರಲಿದೆ.                        
 – ಚಂದ್ರಹಾಸ ರೈ, 
ರಿಜಿಸ್ಟ್ರಾರ್‌, ತುಳು ಅಕಾಡೆಮಿ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.