ಕಲ್ಲಡ್ಕದಲ್ಲಿ  ಚೂರಿ ಇರಿತ; ಉದ್ವಿಗ್ನ  ಸ್ಥಿತಿ


Team Udayavani, Jun 14, 2017, 12:21 PM IST

KALLADKA.jpg

ಬಂಟ್ವಾಳ: ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಮೇಲಿನ ಪೇಟೆಯಲ್ಲಿ ಮಂಗಳವಾರ ಸಂಜೆ ಗುಂಪೊಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಬಳಿಕ ಅಂಗಡಿಗಳಿಗೆ ಕಲ್ಲೆಸೆದು ಹಾನಿ ಮಾಡಿದ್ದು ಕೋಮು ಘರ್ಷಣೆಗೆ ಕಾರಣವಾಗಿದೆ.

ಘಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ ಶೆಟ್ಟಿ ಮತ್ತು ರವಿ ಭಂಡಾರಿ ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ ಖಲೀಲ್‌ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದುಷ್ಕರ್ಮಿಗಳ ಕಲ್ಲೆಸೆತದಿಂದ ಬಂಟ್ವಾಳ ನಗರ ಠಾಣೆ ಎಸ್‌ಐ ರಕ್ಷಿತ್‌ ತಲೆಗೆ ಗಂಭೀರ ಗಾಯವಾಗಿದೆ. ವೃತ್ತ ನಿರೀಕ್ಷಕ ಬಿ.ಕೆ. ಮಂಜಯ್ಯ ಸಹಿತ ಹಲವು ಮಂದಿ ಪೊಲೀಸ್‌ ಸಿಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಪೊಲೀಸರಿಗೆ ಪರಿಚಿತರಾಗಿರುವ ವ್ಯಕ್ತಿಗಳೇ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ವಾಹನಗಳಿಗೆ ಹಾನಿ: ಘಟನೆಯ ಸಂದರ್ಭ ಸ್ಥಳೀಯ ಅಂಗಡಿ ಮಾಲಕರು ನಿಲ್ಲಿಸಿ ಹೋಗಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಹಾನಿ ಮಾಡಿ ಕೆಡವಿ ಹಾಕಲಾಗಿದೆ. ಲಘು ವಾಹನಗಳನ್ನು ಪುಡಿ ಗೈಯಲಾಗಿದೆ. ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿಕೊಂಡಿವೆ. ಉದ್ರಿಕ್ತರ ಗುಂಪು ಅಂಗಡಿಗಳಿಗೆ ಕಲ್ಲೆಸೆದು ಹಾನಿ ಮಾಡಿದೆ. ರಾಮ ಮಂದಿರದ ಕಡೆಗೂ ಕಲ್ಲೆಸೆಯಲಾಗಿದೆ ಎನ್ನಲಾಗಿದೆ. ಹೆದ್ದಾರಿಯಲ್ಲಿ ದೊಣ್ಣೆ, ರಾಡ್‌ಗಳನ್ನು ಹಿಡಿದುಕೊಂಡು ಪುಂಡಾಟಿಕೆ ನಡೆಸಿದ ಗುಂಪು ಸಿಕ್ಕಸಿಕ್ಕವರಿಗೆ ಹಲ್ಲೆ ನಡೆಸಿದೆ. ಹಲವು ಮಂದಿ ಕಲ್ಲೆಸೆತದಿಂದ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು ಪೊಲೀಸರ ಎದುರಲ್ಲಿಯೇ ಗುಂಪು ಪುಂಡಾಟಿಕೆ ನಡೆಸುತ್ತಿದ್ದರೂ ನಿಯಂ ತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವ ಜನಿಕರು ದೂರಿದ್ದಾರೆ. ಸ್ಥಳಕ್ಕೆ ವಿಟ್ಲ, ಪುತ್ತೂರು, ಉಪ್ಪಿನಂಗಡಿಯಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಹೆದ್ದಾರಿ ಯಲ್ಲಿ ವಾಹನ ಸಂಚಾರ ಅಡಚಣೆ ಆಗದಂತೆ ಕ್ರಮ ಕೈಗೊಂಡರು.

ಪೂರ್ವಯೋಜಿತ ?
ರತ್ನಾಕರ ಶೆಟ್ಟಿ ಅವರು ಸ್ಥಳೀಯ ಆಸ್ಪತ್ರೆಗೆ ಪುತ್ರನನ್ನು ಕರೆತಂದು ಔಷಧ ಪಡೆದುಕೊಂಡು ಮರಳುತ್ತಿರುವಾಗ ಖಲೀಲ್‌ ಮೀಸೆ ತಿರುವಿಕೊಂಡು ಮಾತನಾಡಿದ್ದು, ಇದೇ ವೇಳೆ ಹಿಂದಿನಿಂದ ಬಂದ ಜುನೈಜ್‌ ಹಲ್ಲೆ ನಡೆಸಿ ಇರಿದಿದ್ದಾನೆ ಎಂದು  ಸಿಸಿ ಕೆಮರಾ ದೃಶ್ಯಗಳನ್ನು ಆಧರಿಸಿ ಹೇಳಲಾಗಿದೆ. ಪೂರ್ವಯೋಜಿತವಾಗಿ ಹಲ್ಲೆ, ಕಲ್ಲೆಸೆತ ನಡೆದಿದೆ ಎನ್ನಲಾಗಿದೆ

ನಿಷೇಧಾಜ್ಞೆ  ಇದ್ದರೂ…
ಕಲ್ಲಡ್ಕದಲ್ಲಿ ಮೇ 26ರಂದು ಚೂರಿ ಇರಿತದ ಘಟನೆಯ ಬಳಿಕ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದು  ಜೂ. 16ರ ತನಕ ಮುಂದುವರಿಸಲಾಗಿತ್ತು. ಇದನ್ನು  ಲೆಕ್ಕಿಸದ ಗುಂಪು ಪೊಲೀಸ್‌ ವಾಹನಕ್ಕೂ  ಕಲ್ಲೆಸೆದು ಹಾನಿ ಮಾಡಿದೆ. ಸೋಮವಾರ ಕನ್ಯಾನದಲ್ಲಿ  ಕೋಮು ಗಲಭೆಯ ಕಾರಣ ಬಹುತೇಕ ಪೊಲೀಸ್‌ ಬಲವನ್ನು  ಅಲ್ಲಿಗೆ ಕಳುಹಿಸಿದ್ದು  ಕಲ್ಲಡ್ಕದಲ್ಲಿ ಬೆರಳೆಣಿಕೆಯ ಪೊಲೀಸರು ಇದ್ದುದರಿಂದ ಪೂರ್ವಯೋಜಿತವಾಗಿ ಕೃತ್ಯ ನಡೆಸಿದ್ದಾಗಿ ಶಂಕೆ ವ್ಯಕ್ತವಾಗಿದೆ.

ಸುಗಮ ಸಂಚಾರಕ್ಕೆ  ಅನುವು
ಪೇಟೆಯಲ್ಲಿ ದಾಂಧಲೆ ನಡೆಸಿದ್ದರಿಂದ ಸಂಜೆ 5.30ರಿಂದ ಸುಮಾರು ಒಂದು ಗಂಟೆ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು. ಈ ಸಂದರ್ಭ ಕೆಲವೇ ಪೊಲೀಸರು ಸ್ಥಳದಲ್ಲಿದ್ದುದರಿಂದ ಇತರ ಠಾಣೆಗಳಿಗೆ ಮಾಹಿತಿ ನೀಡಿ ವಾಹನಗಳು ಬಿ.ಸಿ.ರೋಡ್‌ನ‌ಲ್ಲಿ ಬೆಳ್ತಂಗಡಿ ಮಾರ್ಗವಾಗಿ ಹೋಗುವಂತೆ ಮತ್ತು ಶಂಭೂರಿನಲ್ಲಿ ವಯಾ ಬಾಳ್ತಿಲವಾಗಿ ಹೋಗುವಂತೆ ಸೂಚಿಸಲಾಯಿತು. ಈ ಮೂಲಕ ರಾ.ಹೆ. 73ರಲ್ಲಿನ ವಾಹನ ಸಂಚಾರವನ್ನು ನಿಯಂತ್ರಿಸಲಾಯಿತು. ಕಲ್ಲಡ್ಕಕ್ಕಿಂತ ಸುಮಾರು 2 ಕಿ.ಮೀ. ದೂರದಲ್ಲಿಯೇ ವಾಹನಗಳನ್ನು ತಡೆ ಹಿಡಿಯಲಾಯಿತು. ಪೊಲೀಸ್‌ ತಂಡ ಸ್ಥಳಕ್ಕೆ ತಲುಪುತ್ತಿದ್ದಂತೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಯಿತು. ಪೊಲೀಸರು ರಸ್ತೆಯ ಎರಡೂ ಬದಿಯಲ್ಲಿ ನಿಂತು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು.

ಸಿಸಿ ಕೆಮರಾದಲ್ಲಿ  ದಾಖಲು?
ಮೇ 26ರ ಘಟನೆಯ ಬಳಿಕ ಪೊಲೀಸರು ನಗರದ 30 ಕಡೆಗಳಲ್ಲಿ ಸುಧಾರಿತ ಸಿಸಿ ಕೆಮರಾಗಳನ್ನು ಅಳವಡಿಸಿದ್ದಾರೆ. ಮಂಗಳ ವಾರ ನಡೆದ ಎಲ್ಲ ಘಟನೆಗಳು ಇದರಲ್ಲಿ ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಈ ವೀಡಿಯೊ ಗಳನ್ನು ಪರಿಶೀಲಿಸಿ ದುಷ್ಕರ್ಮಿಗಳನ್ನು ಬಂಧಿಸಲು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.