ದಿಲ್ಲಿಯಲ್ಲಿ  ಕಡಬದ ಯುವಕ ಸೇರಿ ನಾಲ್ವರ ಒತ್ತೆಸೆರೆ: ಹಣಕ್ಕೆ ಬೇಡಿಕೆ


Team Udayavani, Jun 23, 2017, 3:31 PM IST

krishna-prasand-A.jpg

ಕಡಬ: ಪುತ್ತೂರು ತಾಲೂಕಿನ ಹಳೆ ನೇರೆಂಕಿ ಗ್ರಾಮದ ಆರಟಿಗೆ ಕೊರಗಪ್ಪ ಪೂಜಾರಿ ಅವರ ಪುತ್ರ ಕೃಷ್ಣ ಪ್ರಸಾದ್‌ ಎ. (26) ಸೇರಿದಂತೆ ರಾಜ್ಯದ ನಾಲ್ವರು ಯುವಕರು ದಿಲ್ಲಿಯಲ್ಲಿ ಅಪಹರಣಕ್ಕೊಳಗಾಗಿ ಅಪಹರಣಕಾರರು ಅವರನ್ನು ಒತ್ತೆಯಿರಿಸಿಕೊಂಡು ಹಣದ ಬೇಡಿಕೆ ಇರಿಸಿರುವ ಬಗ್ಗೆ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣ ಪ್ರಸಾದ್‌ ನಾಪತ್ತೆಯಾಗಿರುವ ಕುರಿತು ಆತನ ತಂದೆ ಕಡಬ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕೃಷ್ಣಪ್ರಸಾದ್‌ ಜತೆಗೆ ಆತನ ಗೆಳೆಯರಾದ ಕಲ್ಲಡ್ಕದ ಪ್ರಶಾಂತ್‌, ವಳಾಲಿನ ಅಭಿಲಾಷ್‌ ಕೂಡ ಇದ್ದರು ಎಂದು ಕೃಷ್ಣಪ್ರಸಾದನ ಹೆತ್ತವರು ತಿಳಿಸಿದ್ದಾರೆ. ಕೃಷ್ಣಪ್ರಸಾದ್‌ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಮಾಡಿದ ಬಳಿಕ  ಕಳೆದ 2 ವರ್ಷಗಳಿಂದ ಬೆಂಗಳೂರಿನ ವಿಪ್ರೋ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. 

ಹದಿನೈದು ದಿನಗಳ ಹಿಂದೆ ಊರಿಗೆ  ಬಂದಿದ್ದ ಕೃಷ್ಣಪ್ರಸಾದ್‌  ನಾನು ಜೂನ್‌ 18 ರಂದು ಬೆಂಗಳೂರಿನ ತನ್ನ ಮಿತ್ರರೊಡನೆ ಜಿಮ್‌ಗೆ ಸಂಬಂಧಪಟ್ಟ ಪರಿಕರಗಳನ್ನು ಖರೀದಿಸುವುದಕ್ಕಾಗಿ ದಿಲ್ಲಿಗೆ  ಹೋಗುತ್ತಿರುವುದಾಗಿ ಮನೆಯಲ್ಲಿ ಹೇಳಿ ಬೆಂಗಳೂರಿಗೆ ಹಿಂದಿರುಗಿದ್ದರು. ಜೂ. 20ರಂದು ಮನೆಗೆ ದೂರವಾಣಿ ಕರೆ ಮಾಡಿದ ಕೃಷ್ಣಪ್ರಸಾದ್‌  ದಿಲ್ಲಿಗೆ ತಲುಪಿದ ಬಗ್ಗೆ ಮಾಹಿತಿ ನೀಡಿದ್ದರು.  ಬಳಿಕ  ಮನೆಗೆ ದೂರವಾಣಿ ಕರೆ ಮಾಡಿದ ಕೃಷ್ಣಪ್ರಸಾದ್‌  ನಮ್ಮನ್ನು ಇಲ್ಲಿ ಯಾರೋ ಅಪಹರಣ ಮಾಡಿದ್ದಾರೆ.  ನಮ್ಮಲ್ಲಿದ್ದ ಎಟಿಎಂ ಕಾರ್ಡ್‌ ಸೇರಿದಂತೆ ಎಲ್ಲ ದಾಖಲೆಗಳನ್ನು ಕಸಿದುಕೊಂಡಿದ್ದಾರೆ.  ಮನೆಯವರಿಗೆ ಹೇಳಿ ಬ್ಯಾಂಕ್‌ ನಿಮ್ಮ ಖಾತೆಗೆ 3 ಲಕ್ಷ ರೂ.ಹಾಕುವಂತೆ ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನು ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದಾರೆ  ಎಂದು ಹೇಳಿದ್ದಾರೆ.  ಈ ವರೆಗೆ 3 ಬಾರಿ ಕರೆ ಮಾಡಿ ತನ್ನ  ಖಾತೆಗೆ 3 ಲಕ್ಷ ರೂ. ಜಮೆ ಮಾಡಿ. ಇಲ್ಲದಿದ್ದರೆ ನಾನು ಜೀವಂತವಾಗಿ ಉಳಿಯುವುದಿಲ್ಲ. ನನ್ನನ್ನು ಇಲ್ಲಿ ಕೊಲೆ ಮಾಡುತ್ತಾರೆ ಎಂದು ಕೃಷ್ಣಪ್ರಸಾದ್‌ ಗೋಗರೆದಿದ್ದಾನೆ ಎಂದು ಹೆತ್ತವರು ಹೇಳಿಕೊಂಡಿದ್ದಾರೆ. 

ಕೃಷ್ಣಪ್ರಸಾದ್‌ ಮಾತ್ರವಲ್ಲ ಉಳಿದ ಮೂವರು ಸ್ನೇಹಿತರಿಗೂ  ಇದೇ ರೀತಿಯ ಬ್ಲ್ಯಾಕ್‌ ಮೇಲ್‌ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಮಧ್ಯೆ ಕೃಷ್ಣಪ್ರಸಾದನ ಹೆತ್ತವರು ತಮ್ಮ ಮಕ್ಕಳನ್ನು ರಕ್ಷಿಸಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ ಮಾಡಿದ್ದಾರೆ. ಸಚಿವರು ಪೂರಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಯುವಕರು ದೂರವಾಣಿ ಕರೆ ಮಾಡುತ್ತಿರುವುದು ಹರಿಯಾಣ ಹಾಗೂ ದಿಲ್ಲಿ ಬಾರ್ಡರ್‌ ಲೋಕೇಷನ್‌ನಿಂದ ಎಂದು ಪತ್ತೆಯಾಗಿದ್ದು,  ಪೊಲೀಸರು ಈಗಾಗಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.