ಪಜಿರಡ್ಕ ಟೆಂಟ್‌ ಮನೆಗೆ ಅಧಿಕಾರಿಗಳ ದಂಡು


Team Udayavani, Jul 25, 2017, 12:15 PM IST

Vasathi-24-7.jpg

ಉದಯವಾಣಿ ವರದಿಗೆ ಸ್ಪಂದನೆ; ಅಗತ್ಯ ಕ್ರಮದ ಭರವಸೆ 

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕದ ಕಾಡಿನಲ್ಲಿ ಟೆಂಟ್‌ ಹಾಕಿ ವಾಸಿಸುತ್ತಿದ್ದ ಮನೆಗಳಿಗೆ ಅಧಿಕಾರಿಗಳ ದಂಡು ಭೇಟಿ ನೀಡತೊಡಗಿದೆ. ರವಿವಾರ ರಜಾದಿನವಾದರೂ ಶಾಸಕರ ಹಾಗೂ ತಹಶೀಲ್ದಾರ್‌ ಸೂಚನೆಯಂತೆ ಕಂದಾಯ ನಿರೀಕ್ಷಕ ರವಿ ಹಾಗೂ ಕಲ್ಮಂಜ ಗ್ರಾಮ ಕರಣಿಕ ರಾಘವೇಂದ್ರ ಅವರು ಭೇಟಿ ನೀಡಿದ್ದಾರೆ. ಎರಡು ದಿನಗಳ ಒಳಗೆ ಈ ಐದೂ ಮನೆಯವರಿಗೆ ನಿವೇಶನ ಮಂಜೂರು ಮಾಡಲು ಅವರು ಕ್ರಮ ಕೈಗೊಂಡಿದ್ದಾರೆ. ಸೋಮವಾರ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಮೋಹನ್‌ ಕುಮಾರ್‌ ಭೇಟಿ ನೀಡಿದರು.

ಶೀಘ್ರ ಮಂಜೂರಾತಿ ಪತ್ರ
ಸೋಮವಾರ ಶಾಸಕ ಕೆ. ವಸಂತ ಬಂಗೇರ ಅವರನ್ನು ಸಂತ್ರಸ್ತರು ಭೇಟಿ ಮಾಡಿದರು. ಮಂಜೂರಾತಿ ಪತ್ರ ಸಿದ್ಧಗೊಳ್ಳುತ್ತಿದ್ದು ಎರಡು ದಿನಗಳ ಒಳಗಾಗಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. 1 ವಾರದ ಒಳಗೆ ತಲಾ 2 ಲಕ್ಷ ರೂ.ಗಳಂತೆ ಮಂಜೂರು ಮಾಡಿಸುತ್ತೇನೆ. ಅದರಲ್ಲಿ ಮನೆ ಕಟ್ಟಿಸಬೇಕು ಎಂದು ಹೇಳಿದರು. ನಗರ ಪಂಚಾಯತ್‌ ಅಧ್ಯಕ್ಷ ಮುಗುಳಿ ನಾರಾಯಣ ರಾವ್‌, ಜಿ.ಪಂ. ಸದಸ್ಯೆ ನಮಿತಾ, ದಲಿತ ಹಕ್ಕುಗಳ ಹೋರಾಟಗಾರ ಶೇಖರ್‌ ಎಲ್‌., ಕಾಂಗ್ರೆಸ್‌ ಮುಖಂಡ ಸುಬ್ಬಯ್ಯ  ಶೆಟ್ಟಿ ಉಪಸ್ಥಿತರಿದ್ದರು.

ಉಜಿರೆ – ಧರ್ಮಸ್ಥಳ ರಸ್ತೆ ಅಥವಾ ಉಜಿರೆ ಚಾರ್ಮಾಡಿ ರಸ್ತೆಯಿಂದ ಸಮಾನವಾಗಿ 3 ಕಿಮೀ. ದೂರದಲ್ಲಿ ಕಲ್ಮಂಜ ಗ್ರಾಮ ಪಂಚಾಯತ್‌ ಸರಹದ್ದಿನ ಪಜಿರಡ್ಕ ಎಂಬಲ್ಲಿ ಸರಕಾರಿ ಕಾಡಿನಲ್ಲಿ ಸೂರಿನ ಆಸರೆಯ ನಿರೀಕ್ಷೆಯಲ್ಲಿ ಕೊರಗುತ್ತಿದ್ದ ಕುಟುಂಬಗಳ ಕುರಿತು ಉದಯವಾಣಿ ವರದಿ ಮಾಡಿತ್ತು. ಇವರಿಗೆ ಸರಕಾರದ ಮನೆ, ನಿವೇಶನ, ಶೌಚಾಲಯ, ಪಡಿತರ ಚೀಟಿ, ಚುನಾವಣ ಗುರುತುಪತ್ರ ಸಿಕ್ಕಿಲ್ಲ. ಆಧಾರ್‌ ಕಾರ್ಡು  ಬಿಟ್ಟರೆ ಬೇರೇನಿಲ್ಲ.  ಸುಶೀಲಾ, ದೇವಕಿ, ಥಾಮಸ್‌, ಲಕ್ಷ್ಮೀ ಮಲೆಕುಡಿಯ, ಕಮಲಾ ಮೊಗೇರ ಅವರ ಮನೆಗಳಿವೆ. ‘ಉದಯವಾಣಿ‘ಯಲ್ಲಿ ಈ ಬಗ್ಗೆ ವರದಿ ಪ್ರಕಟವಾದುದನ್ನು ಗಮನಿಸಿ ತತ್‌ಕ್ಷಣ ಸಂಬಂಧಪಟ್ಟವರನ್ನು ಕರೆಸಿ ಕ್ರಮಕ್ಕೆ ಸೂಚಿಸಿದ್ದಾರೆ.


ಟೆಂಟ್‌ ಮನೆಗೆ ಅಧಿಕಾರಿಗಳು ಭೇಟಿ ನೀಡಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.