ಮದ್ಯದಂಗಡಿ ವಿರುದ್ಧದ ಪ್ರತಿಭಟನೆ ಬೆಂಬಲಿಸಿ ನಿರ್ಣಯ


Team Udayavani, Jul 25, 2017, 12:23 PM IST

Madhya-24-7.jpg

ನೆಲ್ಯಾಡಿ ಗ್ರಾ.ಪಂ. ಮಹಿಳಾ ಗ್ರಾಮಸಭೆ

ನೆಲ್ಯಾಡಿ: ನೆಲ್ಯಾಡಿ ಗ್ರಾ.ಪಂ. ಮಹಿಳಾ ಗ್ರಾಮಸಭೆಯು ಗ್ರಾ.ಪಂ. ಉಪಾಧ್ಯಕ್ಷೆ  ಉಮಾವತಿ ಅವರ ಅಧ್ಯಕ್ಷತೆಯಲ್ಲಿ  ನೆಲ್ಯಾಡಿ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ  ನಡೆಯಿತು. ಸಭೆಯಲ್ಲಿ  ವಿಷಯ ಪ್ರಸ್ತಾಪಿಸಿದ ಗ್ರಾಮಸ್ಥೆಯೋರ್ವರು, ಸುಪ್ರೀಂಕೋರ್ಟ್‌ ಆದೇಶದಂತೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಮದ್ಯದಂಗಡಿಗಳು ಬಂದ್‌ ಆಗಿವೆ. ಆದರೆ ನೆಲ್ಯಾಡಿಯಲ್ಲಿನ ಮದ್ಯದಂಗಡಿಯೊಂದು ಅಡ್ಡದಾರಿ ಮಾಡಿಕೊಂಡು ಹಿಂಬಾಗಿಲ ಮೂಲಕ ಕಾರ್ಯಾಚರಿಸುತ್ತಿದೆ. ಇದರ ವಿರುದ್ಧ  ಇಲಾಖೆಗಳಿಗೆ ಮನವಿ ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮದ್ಯದಂಗಡಿಗೆ ಬರುವ ಕೆಲವರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಇದನ್ನು ವಿರೋಧಿಸುತ್ತಿರುವ ನಮಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಗ್ರಾಮಸ್ಥರೂ ಧ್ವನಿಗೂಡಿಸಿ ಮದ್ಯದಂಗಡಿ ಬಂದ್‌ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆ. 2ರಂದು ನಡೆಯುವ ಪ್ರತಿಭಟನೆಗೆ ಬೆಂಬಲ ಸೂಚಿಸಲು ನಿರ್ಣಯ ಕೈಗೊಳ್ಳಲಾಯಿತು. ಗ್ರಾ.ಪಂ. ಸದಸ್ಯ ಗಂಗಾಧರ ಶೆಟ್ಟಿ ಹೊಸಮನೆ ಅವರು ಮಾತನಾಡಿ, ಮದ್ಯದಂಗಡಿಯಿಂದ ಮಹಿಳೆಯರಿಗೆ ತೊಂದರೆಯಾದಲ್ಲಿ  ರಕ್ಷಣೆಗೆ ಜನಜಾಗೃತಿ ವೇದಿಕೆ ಹೋರಾಟಕ್ಕೆ ಸಿದ್ಧವಿದೆ. ಈಗಾಗಲೇ ಪ್ರತಿಭಟನೆಗೆ ದಿನ ನಿಗದಿಯಾಗಿದೆ ಎಂದರು.

ಹಂದಿ ಸಾಕಾಣಿಕೆಯಿಂದ ತೊಂದರೆ
ಪಡ್ಡಡ್ಕದಲ್ಲಿ ಹಂದಿ ಸಾಕಾಣಿಕೆಯಿಂದ ಮಕ್ಕಳಿಗೆ ರೋಗ ಹರಡುವ ಭೀತಿ ಇದೆ ಎಂದು ಮಹಿಳೆಯರು ಸಭೆಯ ಗಮನಕ್ಕೆ ತಂದರು. ನೆಲ್ಯಾಡಿ ಪೇಟೆ ಅಂಗನವಾಡಿ ಪಕ್ಕದಲ್ಲಿರುವ ಸರಕಾರಿ ಜಾಗವನ್ನು ಸ್ತ್ರೀಶಕ್ತಿ ಭವನ ನಿರ್ಮಾಣಕ್ಕೆ ಮಂಜೂರುಗೊಳಿಸಬೇಕೆಂದು ಅಂಗನವಾಡಿ ಕಾರ್ಯಕರ್ತೆ ಆಗ್ರಹಿಸಿದರು. ಅಂಗನವಾಡಿ ವಲಯ ಮೇಲ್ವಿಚಾರಕಿ ಉಮಾವತಿ, ಗ್ರಾ.ಪಂ. ಸದಸ್ಯರಾದ ಅಬ್ರಹಾಂ ಕೆ.ಪಿ., ಅಬ್ದುಲ್‌ ಹಮೀದ್‌, ಚಿತ್ರಾ ರಾಮನಗರ, ಫ್ಲೋರಿನಾ ಡಿ’ಸೋಜಾ ಉಷಾ ಜೋಯಿ, ಉಮಾವತಿ ದರ್ಖಾಸು, ಲೈಲಾಥೋಮಸ್‌, ತೀರ್ಥೇಶ್ವರ ಯು. ಉಪಸ್ಥಿತರಿದ್ದರು. ಪಿ.ಡಿ.ಒ. ದೇವರಾಜ್‌ ಸ್ವಾಗತಿಸಿ ನಿರೂಪಿಸಿದರು. ಉಷಾ ವಂದಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.