1ಎಕ್ರೆಯಲ್ಲಿ ತಲೆ ಎತ್ತಲಿದೆ ಉದ್ಯಾನ; ಸಾಮೆತ್ತಡ್ಕವಿನ್ನು ಸ್ಮಾರ್ಟ್‌


Team Udayavani, Sep 19, 2017, 1:58 PM IST

1-ptr-1.jpg

ನಗರ : ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಮೂರು ಪಾರ್ಕ್‌ಗಳಿದ್ದು, ಹೊಸದೊಂದು ಸೇರ್ಪಡೆ ಆಗಲಿದೆ. ಸಾಮೆತ್ತಡ್ಕ ಜಂಕ್ಷನ್‌ನಲ್ಲಿ ಸುಮಾರು 1 ಎಕ್ರೆ ವಿಸ್ತಾರದಲ್ಲಿ ಈ ಪಾರ್ಕ್‌ ತಲೆ ಎತ್ತಲಿದೆ.

ನಗರ ಬಸ್‌ ನಿಲ್ದಾಣದಿಂದ ಕೇವಲ ಎರಡು ಕಿ.ಮೀ. ದೂರದಲ್ಲಿದೆ ಸಾಮೆತ್ತಡ್ಕ. ಪುತ್ತೂರು ಪೇಟೆಗೆ ತಾಗಿಕೊಂಡೇ ಇದ್ದರೂ, ಅಷ್ಟೇನೂ ದೊಡ್ಡ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಹಾಗೆಂದು ಅತಿ ಹೆಚ್ಚು ಮನೆಗಳಿರುವ ಸ್ಥಳವಿದು. ಈ ನಿಟ್ಟಿನಲ್ಲಿ ಪಾರ್ಕ್‌ ನಿರ್ಮಿಸುವುದು ಹೆಚ್ಚು ಸೂಕ್ತ ಎನ್ನುವ ಧೋರಣೆಯಲ್ಲಿದೆ ನಗರಸಭೆ.

ಮೂಲತಃ ಇದು ಕರ್ನಾಟಕ ಹೌಸಿಂಗ್‌ ಬೋರ್ಡ್‌ಗೆ (ಕೆಎಚ್‌ಬಿ) ಸೇರಿದ ಜಾಗ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿವೇಶನ ನೀಡಿ, ಇನ್ನೊಂದಷ್ಟು ಜಾಗವನ್ನು  ಇತರ ಉದ್ದೇಶಗಳಿಗೆ ಬಳಸಿಕೊಳ್ಳಲಾಗಿದೆ. ಉಳಿದ ಸುಮಾರು 1 ಎಕ್ರೆ ಜಾಗವನ್ನು ಪಾರ್ಕ್‌ ನಿರ್ಮಾಣಕ್ಕೆಂದು ಮೀಸಲಿರಿಸಿತ್ತು. ಬಳಿಕ ಇದನ್ನು ನಗರಸಭೆಗೆ ಹಸ್ತಾಂತರಿಸಿದ್ದು, ಇದೀಗ ನಗರಸಭೆ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿದೆ. ನಗರೋತ್ಥಾನದ 3ನೇ ಹಂತದಡಿ 1 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಇದರಲ್ಲಿ ಕಿಲ್ಲೆ ಮೈದಾನ ಅಭಿವೃದ್ಧಿ ಪಡಿಸಿ, ಉಳಿಕೆ ಹಣವನ್ನು ಸಾಮೆತ್ತಡ್ಕ ಪಾರ್ಕ್‌ಗೆ ವಿನಿಯೋಗಿಸಲಾಗುವುದು.

ಇತ್ತೀಚೆಗಷ್ಟೇ ಮಳೆನೀರಿನ ಜತೆ ಕೊಚ್ಚಿಕೊಂಡು ಹೋದ ಮಣ್ಣು ಪಕ್ಕದ ಮನೆಗಳಿಗೆ ನುಗ್ಗಿ ರಾದ್ಧಾಂತ ಸೃಷ್ಟಿಯಾಗಿತ್ತು. ಇದರಿಂದಾಗಿ ಮೊದಲಿಗೆ ಚರಂಡಿ ವ್ಯವಸ್ಥೆ ಸರಿಪಡಿಸಲು ತೀರ್ಮಾನಿಸಲಾಗಿದೆ. ತಡೆ ಬೇಲಿ ನಿರ್ಮಿಸಿದ ಅನಂತರ ಉಳಿದ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ನಗರಸಭೆ ಎಇಇ ಪುರಂದರ ಅವರು ತಿಳಿಸಿದ್ದಾರೆ.

ಪಾರ್ಕ್‌ ಒಳಗಡೆ ಸಣ್ಣದೊಂದು ಓಪನ್‌ ಸ್ಟೇಜ್‌ ಇರಲಿದೆ. ಸಣ್ಣ ಕಾರ್ಯಕ್ರಮಗಳಿಗೆ ಇದನ್ನು ಬಳಕೆ ಮಾಡಬಹುದು. ಇದಲ್ಲದೆ ಹೂ-ಗಿಡಗಳನ್ನು ನೆಟ್ಟು ಸುಂದರ ಪಾರ್ಕ್‌ ತಲೆ ಎತ್ತಲಿದೆ. ಪಾರ್ಕ್‌ ನ ಸುತ್ತ ಸುಮಾರು 6 ಅಡಿ ವಿಸ್ತಾರದಲ್ಲಿ ಪಾಥ್‌ ವೇ ನಿರ್ಮಿಸಲಾಗುವುದು. ಬೆಳಗ್ಗೆ ಹಾಗೂ ಸಂಜೆ ಹೊತ್ತು ಸ್ಥಳೀಯ ನಿವಾಸಿಗಳು ಇಲ್ಲಿ ವಾಕಿಂಗ್‌ ಹೋಗಲು ಅನುಕೂಲವಾಗುವಂತೆ ರಚಿಸಲು ಚಿಂತನೆ ನಡೆಸಲಾಗಿದೆ.

ಮಕ್ಕಳ ಆಟಿಕೆ
ಪಾರ್ಕ್‌ ಎಂದಾಕ್ಷಣ ಹಿರಿಯರೇ ಓಡಾಡಿಕೊಂಡಿರುತ್ತಾರೆ ಎಂಬ ಆಲೋಚನೆ ಸುಳಿ ಯುತ್ತದೆ. ಆದರೆ ಇಲ್ಲಿ ಮಕ್ಕಳಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಮಕ್ಕಳಿಗಾಗಿ ಆಟಿಕೆ ವಸ್ತು ಗಳನ್ನು, ಮಕ್ಕಳ ದೈಹಿಕ ಬೆಳವಣಿಗೆಗೆ ಪೂರಕ ಪರಿ ಕರಗಳನ್ನು ಇಡಲಾಗುವುದು. ಸುತ್ತಮುತ್ತಲಿನ ಮನೆ ಗಳ ಮಕ್ಕಳು ಇಲ್ಲಿ ಬಂದು ಹೊಸ ವಾತಾವರಣಕ್ಕೆ ತೆರೆದುಕೊಳ್ಳಲು ಇದು ಸೂಕ್ತ ಸ್ಥಳವಾಗಲಿದೆ.

ಇದು ನಗರದ ನಾಲ್ಕನೇ ಪಾರ್ಕ್‌
ಮೊಟ್ಟೆತ್ತಡ್ಕ, ನೆಲ್ಲಿಕಟ್ಟೆ, ನಗರಸಭೆ ಸಮೀಪ ಒಟ್ಟು ಮೂರು ಪಾರ್ಕ್‌ಗಳಿವೆ. ಮೊಟ್ಟೆತ್ತಡ್ಕ ಪಾರ್ಕ್‌ ಬಿಟ್ಟರೆ ಉಳಿದ ಎರಡೂ ಪಾರ್ಕ್‌ಗಳ ಸ್ಥಿತಿ ಉತ್ತಮವಾಗಿಲ್ಲ. ನಗರಸಭೆ ಸಮೀಪವಿರುವ ಚಿಣ್ಣರ ಪಾರ್ಕ್‌ಗೆ ಮಕ್ಕಳೇ ಬರುತ್ತಿಲ್ಲ. ಇದನ್ನು ಅಭಿವೃದ್ಧಿಪಡಿಸಬೇಕು ಎಂಬ ನೆಲೆಯಲ್ಲಿ ಹಮ್ಮಿಕೊಂಡ ಹಲವು ಯೋಜನೆ ವಿಫಲವಾದವು. ಇದೀಗ ನಾಲ್ಕನೇ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿದ್ದು, ಸವಾಲು ಹಲವಿವೆ. ಸ್ವತ್ಛತೆ, ನಿರ್ವಹಣೆ ನಗರಸಭೆ ಜವಾಬ್ದಾರಿಯಾದರೂ, ಪಾರ್ಕನ್ನು ಬಳಸಿಕೊಳ್ಳುವಲ್ಲಿ ನಾಗರಿಕರೇ ಮುಂದೆ ಬರಬೇಕು. ಮಾತ್ರವಲ್ಲ ಪಾರ್ಕ್‌ನ ನೈಜ ಉದ್ದೇಶವನ್ನು ಅರ್ಥ ಮಾಡಿಕೊಂಡು, ಜನಸಾಮಾನ್ಯರಿಗೆ ತಲುಪಿಸಬೇಕಾಗಿದೆ.

ಉಳಿಕೆ ಹಣದ ಬಳಕೆ
ನಗರೋತ್ಥಾನದಡಿ ಸಾಮೆತ್ತಡ್ಕದಲ್ಲಿ ಪಾರ್ಕ್‌ ನಿರ್ಮಿಸಲಾಗುವುದು. ಪುತ್ತೂರು ಕಿಲ್ಲೆ ಮೈದಾನವನ್ನು ಅಭಿವೃದ್ಧಿ ಮಾಡಿ, ಉಳಿಕೆ ಹಣವನ್ನು ಇದಕ್ಕೆ ಬಳಸಿಕೊಳ್ಳಲಾಗುವುದು. ಒಂದು ವೇಳೆ ಅನುದಾನ ಕಡಿಮೆಯಾದರೆ, ಇತರ ಅನುದಾನವನ್ನು ವಿನಿಯೋಗಿಸಿಕೊಳ್ಳಲಾಗುವುದು. ಪುತ್ತೂರು ನಗರದ ಸಂಪೂರ್ಣ ಅಭಿವೃದ್ಧಿ ದೃಷ್ಟಿಯಿಂದ ಹಮ್ಮಿಕೊಂಡ ಹಲವು ಯೋಜನೆಗಳಲ್ಲಿ ಇದೂ ಒಂದು.
ಜಯಂತಿ ಬಲ್ನಾಡು 
ಅಧ್ಯಕ್ಷೆ , ಪುತ್ತೂರು ನಗರಸಭೆ

ಹೊಸ ವಾತಾವರಣ
ಜನರಿಗೆ ಹೊಸ ವಾತಾವರಣ ತೆರೆದುಕೊಡುವ ಪಾರ್ಕ್‌, ಸಾಮೆತ್ತಡ್ಕದಲ್ಲಿ ತಲೆ ಎತ್ತಲಿದೆ. ಆರೋಗ್ಯದ ದೃಷ್ಟಿಯಿಂದಲೂ ಪಾರ್ಕ್‌ ಉತ್ತಮ. ಸಾಮೆತ್ತಡ್ಕ ಪರಿಸರದಲ್ಲಿ ಹೆಚ್ಚಿನ ಮನೆಗಳಿದ್ದು, ಪಾರ್ಕ್‌ ನಿರ್ಮಿಸಿದರೆ
ಉತ್ತಮ ಎಂಬ ಅಭಿಪ್ರಾಯವನ್ನು ಸಾಮಾನ್ಯ ಸಭೆಯಲ್ಲಿ ಇಡಲಾಗಿತ್ತು. ಇದೀಗ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ರೂಪಾ ಶೆಟ್ಟಿ,
ಪೌರಾಯುಕ್ತೆ, ನಗರಸಭೆ

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.