20 ವರ್ಷ ಕಳೆದರೂ ಡಾಮರು ಕಾಣದ ರಸ್ತೆಗಳು


Team Udayavani, Sep 23, 2017, 5:34 PM IST

23Udi-3.jpg

ಸವಣೂರು : ಪುತ್ತೂರು ತಾಲೂಕಿನ ಗಡಿ ಗ್ರಾಮವಾದ ಕೊಳ್ತಿಗೆಯ ಬಹುತೇಕ ರಸ್ತೆಗಳು ಸಂಪರ್ಕ ರಸ್ತೆಗಳಾಗಿವೆ. ಒಂದು ಭಾಗದ ರಸ್ತೆಗಳು ಸುಳ್ಯ ತಾಲೂಕಿಗೆ, ಮತ್ತೂಂದು ಭಾಗದ ರಸ್ತೆಗಳು ಪಕ್ಕದ ಗ್ರಾಮಗಳಿಗೆ ಕೊಂಡಿಯಾಗಿವೆ. ಕೊಳ್ತಿಗೆ ಗ್ರಾಮದಲ್ಲಿ ಸಂಪರ್ಕ ರಸ್ತೆಗಳಿದ್ದರೂ ಅವುಗಳು ಇದುವರೆಗೂ ಡಾಮರು ಕಂಡಿಲ್ಲ. 20 ವರ್ಷಗಳಿಂದ ಬೇಡಿಕೆ ಸಲ್ಲಿ ಸಿದರೂ ಯಾರೂ ಸ್ಪಂದಿಸಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.

ಬಾಯಂಬಾಡಿ- ಮಾಡಾವು ಕಟ್ಟೆ ರಸ್ತೆ
ಈ ರಸ್ತೆ ಕೊಳ್ತಿಗೆ ಗ್ರಾಮದ ಬಾಯಂಬಾಡಿಯಿಂದ ಅಡ್ಯಾರ್‌ಗುಂಡ- ಕಳಾಯಿ ಮೂಲಕ ಮಾಡಾವು ಕಟ್ಟೆಯನ್ನು ಸಂಪರ್ಕಿಸುತ್ತದೆ. ಪಾರ್ಲದ ವರೆಗಿನ ರಸ್ತೆಗೆ 20 ವರ್ಷಗಳ ಹಿಂದೆ ಡಾಮರು ಹಾಕಲಾಗಿದೆ. ಈಗ ಅದು ಪೂರ್ಣ ಮಾಯವಾಗಿದೆ. ಈ ರಸ್ತೆಯ ಮೂಲಕ ಸಾಗಿದರೆ ಪೆರ್ಲಂಪಾಡಿ ನಿವಾಸಿಗಳು ಮಾಡಾವು ಕಟ್ಟೆ ಬಳಿಯಿಂದ ಪುತ್ತೂರಿಗೆ ನೇರವಾಗಿ ಸಂಪರ್ಕ ಸಾಧಿಸಬಹುದು. ಹೊಂಡ-ಗುಂಡಿಗಳಿರುವ ಮಣ್ಣಿನ ರಸ್ತೆಯಾಗಿದ್ದರಿಂದ ಯಾವುದೇ ವಾಹ ನಗಳು ತೆರಳುವಂತಿಲ್ಲ. ಸುಮಾರು 6 ಕಿ.ಮೀ. ಉದ್ದದ ರಸ್ತೆ ಈಗಲೂ ಗ್ರಾಪಂ ಸುಪರ್ದಿಯಲ್ಲೇ ಇದ್ದು ಇನ್ನೂ ಜಿ.ಪಂ. ರಸ್ತೆಯಾಗಿ ಮೇಲ್ದರ್ಜೆಗೇರಿಲ್ಲ. ಇದಕ್ಕಾಗಿ ಯಾರೂ ಮುತುವರ್ಜಿ ವಹಿಸಿಲ್ಲ ಎಂಬು ದು ಗ್ರಾಮಸ್ಥರ ಆರೋಪ.

ಪಾಂಬಾರು-  ಅಮಲ
– ಮುಚ್ಚಿ ನಡ್ಕ ರಸ್ತೆ

ಪೆರ್ಲಂಪಾಡಿಯಿಂದ ಪಾಂಬಾರು- ಅಮಲ- ಮುಚ್ಚಿನಡ್ಕ ರಸ್ತೆ 5 ಕಿ.ಮೀ. ಉದ್ದವಿದೆ. ಜಿ.ಪಂ. ವ್ಯಾಪ್ತಿಗೊಳಪಡುವ ರಸ್ತೆಗೆ 20 ವರ್ಷಗಳ ಹಿಂದೆ 2 ಕಿ.ಮೀ. ದೂರದವರೆಗೆ ಡಾಮರು ಹಾಕಲಾಗಿದೆ. ಉಳಿದಂತೆ ರಸ್ತೆಯ ಸ್ಥಿತಿ ಅಯೋಮ ಯವಾಗಿದೆ. ಮಳೆಗಾಲದಲ್ಲಿ ರಸ್ತೆಯ ಮೂಲಕ ಸಾಗಬೇಕಾದರೆ ಹರಸಾಹಸ ಪಡಬೇಕಾದ ಸನ್ನಿವೇಶ ಇದೆ.

ಮೊಗಪ್ಪೆ-ಕುಲ್ಲಂಪಾಡಿ
– ಐವರ್ನಾಡು ರಸ್ತೆ

ಮೊಗಪ್ಪೆಯಿಂದ- ಕುಲ್ಲಂಪಾಡಿ ಮೂಲಕ ಐವರ್ನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ 3 ಕಿ.ಮೀ. ಉದ್ದವಿದ್ದು, ಜಿ.ಪಂ. ವ್ಯಾಪ್ತಿಯಲ್ಲಿದೆ. ಸುಳ್ಯ ತಾಲೂಕಿನ ಐವರ್ನಾಡಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯೂ ಡಾಮರು ಕಾಮಗಾರಿಯಾಗಿಲ್ಲ. ಮಾವಿನಕಟ್ಟೆಯಿಂದ ದುಗ್ಗಳಕ್ಕೆ ತೆರಳುವ ರಸ್ತೆಯೂ ಹೀನಾಯ ಸ್ಥಿತಿಯಲ್ಲಿದ್ದು, ಸಂಚಾರಕ್ಕೆ ದುರ್ಗಮವಾಗಿದೆ. ಪೆರ್ಲಂ ಪಾಡಿ- ಆನಡ್ಕ- ಕಣಿಯಾರ್‌ ರಸ್ತೆ ದುರಸ್ತಿ ಕಾಣದೇ ಅದೆಷ್ಟೋ ವರ್ಷಗಳು ಕಳೆದಿವೆ. ಮಳೆಗಾಲದಲ್ಲಿ ಇಲ್ಲಿ ವಾಹನಗಳ ಸಂಚಾರ ಸಾಧ್ಯವೇ ಇಲ್ಲ. ಬೇಸಗೆಯಲ್ಲಿ ಮಾತ್ರ ಕಷ್ಟ ಪಟ್ಟು ಸಂಚರಿಸುತ್ತವೆ.

ಕೊಳ್ತಿಗೆ ಗ್ರಾಮದ ಬಹುತೇಕ ರಸ್ತೆಗಳು, ಸಂಪರ್ಕ ರಸ್ತೆಗಳು ಹದಗೆಟ್ಟಿವೆ. ಮುಖ್ಯ ರಸ್ತೆಗಳು ಉತ್ತಮವಾಗಿದ್ದರೂ ಗ್ರಾಮದ ಒಳಗೆ ಸಂಚರಿಸುವ ರಸ್ತೆಗಳು ಹಾಳಾಗಿವೆ. ಶಾಸಕರು ಮತ್ತು ಸಂಸದರು ಇನ್ನೂ ಹೆಚ್ಚಿನ ಅನುದಾನವನ್ನು ನೀಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆ.

ಡಾಮರು ಪೂರ್ಣಗೊಂಡಿಲ್ಲ
ಗ್ರಾಮದ ಅಭಿವೃದ್ಧಿಗೆ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಸಂಸದ ನಳಿನ್‌ಕುಮಾರ್‌ ಕಟೀಲು ಅನುದಾನ ನೀಡಿದ್ದಾರೆ. ನೆಟ್ಟಾರಿನಿಂದ ಪೆರ್ಲಂಪಾಡಿಗೆ ತೆರಳುವ ಮುಖ್ಯ ರಸ್ತೆಗೆ ಶಾಸಕರ ನಿಧಿಯಿಂದ 1.70 ಕೋಟಿ ರೂ. , ಪಾಂಬಾರು ರಸ್ತೆಗೆ 1.70 ಕೋಟಿ ರೂ., ಗೋಳಿತ್ತಡಿ ರಸ್ತೆಗೆ 10 ಲಕ್ಷ ರೂ. ಅನುದಾನ ನೀಡಿದ್ದಾರೆ. ಸಂಸದರ ನಿಧಿಯಿಂದ ಆನಡ್ಕ ರಸ್ತೆ 600 ಅಡಿ ಕಾಂಕ್ರೀಟ್‌ ಕಾಮಗಾರಿ ಮತ್ತು ಕಲಾಯಿಯಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಮೋರಿ ರಚನೆ ಮತ್ತಿತರ ಕಾಮಗಾರಿಗಳು ಸಾಗಿವೆ. ಈ ಅನುದಾನಗಳಿಂದ ಯಾವುದೇ ರಸ್ತೆಗಳಿಗೆ ಸಂಪೂರ್ಣವಾಗಿ ಡಾಮರು ಹಾಕಲಾಗಿಲ್ಲ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.