ಉಪ್ಪಳಿಗೆ-ಶೇಖಮಲೆ ರಸ್ತೆಗೆ ಗುದ್ದಲಿಪೂಜೆ
Team Udayavani, Oct 19, 2017, 4:21 PM IST
ಉಪ್ಪಳಿಗೆ: ವಿಧಾನಸಭಾ ಕ್ಷೇತ್ರದ ಉಪ್ಪಳಿಗೆ- ಶೇಖಮಲೆ ರಸ್ತೆ ಅಭಿವೃದ್ಧಿಗೆ ಶಾಸಕಿ ಶಕುಂತಳಾ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. 50-54ರ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯ ‘ಒಂದು ಬಾರಿ ಅಭಿವೃದ್ಧಿ ‘ ಶೀರ್ಷಿಕೆಯಡಿ 2 ಕೋಟಿ ರೂ. ಅನುದಾನ ಮಂಜೂರುಗೊಂಡಿದೆ.
ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕಿ ಶಕುಂತಳಾ ಶೆಟ್ಟಿ, ರಸ್ತೆ ಅಭಿವೃದ್ಧಿಯಾಗುವ ಮೂಲಕ ಜನತೆಯ ಬಹುಕಾಲದ ಕನಸು ನನಸಾಗಲಿದೆ. ರಸ್ತೆ ಅಗಲೀಕರಣಕ್ಕೆ ಖಾಸಗಿ ಜಮೀನಿನವರು ಸಹಕರಿಸಿದರೆ ಕೆಲಸಕ್ಕೆ ವೇಗ ಸಿಗಲಿದೆ. ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಆತ್ಮತೃಪ್ತಿ ಇದೆ ಎಂದರು.
ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ
ತಾ.ಪಂ. ಸದಸ್ಯೆ ಮೀನಾಕ್ಷಿ ಮಂಜುನಾಥ್ ಮಾತನಾಡಿ, ಹಿಂದೆಯೂ ಈ ಭಾಗದಲ್ಲಿ ಅನುದಾನದ ಲಭ್ಯತೆ ತಕ್ಕಂತೆ ರಿಪೇರಿ, ಅಭಿವೃದ್ಧಿ ಕೆಲಸ ಮಾಡಲಾಗಿತ್ತು. ಈಗ ಶಾಸಕಿ ಶಕುಂತಳಾ ಶೆಟ್ಟಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಮಾವತಿ, ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಎಪಿಎಂಸಿ ಸದಸ್ಯ ಕಾರ್ತಿಕ್ ರೈ ಬೆಳ್ಳಿಪ್ಪಾಡಿ, ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯರಾದ ರಕ್ಷಣ್ ರೈ, ಮೊಯಿದು ಕುಂಞಿ, ನಿಡ್ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಅವಿನಾಶ್ ರೈ ಕುಡ್ಚಿಲ, ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯ ಶಶಿಕಿರಣ್ ರೈ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ತಾ| ಕೆಡಿಪಿ ಸದಸ್ಯ ಕೃಷ್ಣ ಪ್ರಸಾದ್ ಆಳ್ವ ಸ್ವಾಗತಿಸಿ, ನಿರೂಪಿಸಿದರು. ಎಂಜಿನಿಯರ್ ಗೋಕುಲ್ ದಾಸ್ ಅವರು ಕಾಮಗಾರಿಯ ಕುರಿತು ಮಾಹಿತಿ ನೀಡಿದರು.
1,000 ಕೋ.ರೂ. ಅನುದಾನ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಮಾತನಾಡಿ, ಶಾಸಕಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 1,000 ಕೋಟಿ ರೂ. ಅಭಿವೃದ್ಧಿ ಅನುದಾನ ತರಿಸಿದ್ದಾರೆ. ಕ್ಷೇತ್ರದಲ್ಲಿ ಇದುವರೆಗೆ ಯಾರೂ ಮಾಡದ ಅಭಿವೃದ್ಧಿ ಕೆಲಸವನ್ನು ಅವರು ಮಾಡಿದ್ದಾರೆ. ಇಡೀ ಕರ್ನಾಟಕವೇ ಅನುದಾನ ವಿಚಾರದಲ್ಲಿ ಪುತ್ತೂರು ಕಡೆ ನೋಡುವಂತೆ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ