‘ಶಾಸಕರ ಸುಳ್ಳು ಭರವಸೆ ಒಪ್ಪಲು ಇಲ್ಲಿನವರು ದಡ್ಡರಲ್ಲ’


Team Udayavani, Oct 19, 2017, 4:46 PM IST

19-Mng-15.jpg

ಸುಳ್ಯ: ಹದಗೆಟ್ಟಿರುವ ಕಾಂತಮಂಗಲ -ಅಜ್ಜಾವರ -ಅ ಡ್ಪಂಗಾಯ -ಮಂಡೆಕೋಲು ಜಿ.ಪಂ. ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಮಂಗಳವಾರ ನಾಗರಿಕ ಹಿತರಕ್ಷಣ ವೇದಿಕೆಯಿಂದ ಕಾಂತಮಂಗಲ ಅಪ್ಪಾಜಿರಾವ್‌ ಸರ್ಕಲ್‌ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯಪ್ರಕಾಶ್‌ ರೈ, ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಿಚಾರಗಳಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡಿಲ್ಲ. ಆದರೆ ಅಜ್ಜಾವರ, ಮಂಡೆಕೋಲು ಗ್ರಾಮದ ಜನರ ಬಹು ವರ್ಷದ ಬೇಡಿಕೆಯಾದ ರಸ್ತೆ ಅಭಿವೃದ್ಧಿಗೆ ಐದು ಬಾರಿ ಆಯ್ಕೆಯಾಗಿರುವ ಶಾಸಕ ಎಸ್‌. ಅಂಗಾರ ಅವರು ಮನ್ನಣೆ ನೀಡದೆ, ಇದೀಗ ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಬಿಡುಗಡೆಯಾದ ಅನುದಾನಕ್ಕೆ ರಾಜ್ಯದ ಯಾವ ಇಲಾಖೆ, ಸಚಿವರು, ಜನಪ್ರತಿನಿಧಿಗಳು ತಡೆ ತರುತ್ತಿದ್ದಾರೆ ಎನ್ನುವುದನ್ನು ಬಿಜೆಪಿ ಬಹಿರಂಗಪಡಿಸಿದರೆ, ಶಾಸಕರೊಂದಿಗೆ ಅಂತಹವರ ವಿರುದ್ಧ ಪ್ರತಿಭಟಿಸಲು ನಾವು ಸಿದ್ಧ ಎಂದು ಸವಾಲೆಸೆದರು.

ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಮಂಜೂ ರಾಗಿದ್ದರೂ ಆ ಪ್ರಸ್ತಾವನೆಯನ್ನು ಬದಲಾಯಿಸಲಾಗಿದೆ. ಕೇಂದ್ರದ ಸಿಆರ್‌ಎಫ್‌ ಯೋಜನೆಯಡಿ 6 ಕೋಟಿ ರೂ. ಬಿಡುಗಡೆ ಆಗಿದ್ದರೂ ಕೆಲಸ ಶುರುವಾಗುವ ಲಕ್ಷಣ ಇಲ್ಲ. ಹಾಗಾಗಿ ಟೆಂಡರ್‌ ಪ್ರಕ್ರಿಯೆಗೆ ರಾಜ್ಯ ಸರಕಾರ ತಡೆ ಒಡ್ಡುತ್ತದೆ ಎಂದು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

ಜಿ.ಪಂ. ಮಾಜಿ ಸದಸ್ಯ ಧನಂಜಯ ಅಡ್ಪಂಗಾಯ ಮಾತನಾಡಿ, ವಾಜಪೇಯಿ ಸರಕಾರದ ಅವಧಿಯಲ್ಲಿ ಸಿಆರ್‌ಎಫ್‌ ಯೋಜನೆಯಡಿ ಜಿಲ್ಲೆಯ ವಿವಿಧ ಶಾಸಕರು ತಮ್ಮ ಕ್ಷೇತ್ರದ ರಸ್ತೆಗಳಿಗೆ ಅನುದಾನ ಬಳಸಿದ್ದಾರೆ. ಆಗಿಂದಲೇ ಸುಳ್ಯ ಶಾಸಕರಾಗಿದ್ದ ಅಂಗಾರ ಈ ಯೋಜನೆಯನ್ನು ಬಳಸಿಕೊಂಡಿಲ್ಲ. ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇರುವುದರಿಂದ ಈಗ ಸಿಆರ್‌ಎಫ್‌ನಡಿ ಪ್ರಸ್ತಾವನೆ ಸಲ್ಲಿಸಿ, ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಆಗುತ್ತಿದೆ ಎಂದು ಅಪಾದಿಸಿದರು. ಎಲ್ಲ ಸ್ತರದ ಅಧಿಕಾರವೂ ಬಿಜೆಪಿಗೆ ಸಿಕ್ಕಿದೆ. ಅದನ್ನು ಮರೆತು ಬಿಜೆಪಿ ಮೌನವಾಗಿದೆ ಎಂದರು.

ಶಾಫಿ ದಾರಿಮಿ ಮಾತನಾಡಿ, 19 ವರ್ಷಗಳಿಂದ ಇಲ್ಲಿ ರಸ್ತೆ ದುರಸ್ತಿ ಆಗಿಲ್ಲ. ಪಾದೆಯಾತ್ರೆಯ ಮೂಲಕ ಅಧಿಕಾರಿ, ಜನಪ್ರತಿನಿಧಿಗಳ ಗಮನ ಸೆಳೆದರೂ ಸ್ಪಂದನೆ ಸಿಕ್ಕಿಲ್ಲ. ಇಲ್ಲಿನ ಜನರು ಏನು ತಪ್ಪು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಜವಾಬ್ದಾರಿಯಿಂದ ವರ್ತಿಸಲಿ
ನ.ಪಂ. ಸದಸ್ಯ ಗೋಕುಲ್‌ದಾಸ್‌ ಮಾತನಾಡಿ, ಕ್ಷೇತ್ರದ ಶಾಸಕರು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು, ಜವಾಬ್ದಾರಿಯಿಂದ ವರ್ತಿಸಲಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅರಂಬೂರು ಪ್ರದೇಶದ ಜನ ಸೇತುವೆಗೆ ಬೇಡಿಕೆ ಇಟ್ಟಿದ್ದರು. ಜನಾರ್ದನ ಪೂಜಾರಿ ಅವರು ಚುನಾವಣೆಯಲ್ಲಿ ಸೋತರೂ ಅನುದಾನ ಕೊಡಿಸಿ, ಮಾತು ಉಳಿಸಿಕೊಂಡರು. ಆದರೆ, ಬಿಜೆಪಿ ಇದನ್ನು ರಾಜಕೀಯ ಲಾಭಕ್ಕೆ ಬಳಸುತ್ತಿದೆ ಎಂದು ಆರೋಪಿಸಿದರು.

ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್‌ ರೈ ಮೇನಾಲ ಮಾತನಾಡಿ, ಊರಿನ ಜನರಿಗೆ ರಸ್ತೆ ಬೇಕಿದೆ. ಯಾವುದೇ ಪಕ್ಷದ ವಿಚಾರಕ್ಕಿಂತಲೂ ರಸ್ತೆ ಡಾಮರು ಕಾಣುವುದು ಮುಖ್ಯ ಎಂದರು.

ನಾಗರಾಜ ಮುಳ್ಯ, ಅಶೋಕ ಎಡಮಲೆ, ವಿನಯ ಆಳ್ವ, ಚಂದ್ರಶೇಖರ ಮೇನಾಲ ಮಾತನಾಡಿದರು. ಪ್ರತಿಭಟನ ಸಭೆಯಲ್ಲಿ ಮುರಳಿ ಮಾವಂಜಿ, ರಾಹುಲ್‌ ಅಡ್ಪಂಗಾಯ, ನವೀನ್‌ ಪೂಜಾರಿ, ಉದಯ್‌, ಧರ್ಮಪಾಲ ಕೊಯಿಂಗಾಜೆ, ಗಂಗಾಧರ ಮೇನಾಲ, ಶಾಫಿ ಕುತ್ತುಮೊಟ್ಟೆ, ಸುಧೀರ್‌ ರೈ ಮೇನಾಲ, ಸಾಮಾಜಿಕ ಕಾರ್ಯಕರ್ತ ಶಾರೀಖ್‌ ಉಪಸ್ಥಿತರಿದ್ದರು. 

ಮನೆಗೆ ಹೋಗುವ ದಿನ ಬಂದಿದೆ
ನ್ಯಾಯವಾದಿ ಸುಕುಮಾರ್‌ ಕೋಡ್ತುಗುಳಿ ಮಾತನಾಡಿ, ಹದಿನೈದು ವರ್ಷಗಳಿಂದ ನರಕಸದೃಶ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಜನಪ್ರತಿನಿಧಿಗಳು ಮೌನವಾಗಿದ್ದಾರೆ. ಐದು ಬಾರಿ ಆಯ್ಕೆಯಾದ ಶಾಸಕ ಅಂಗಾರ ತಾರತಮ್ಯ ಮಾಡುತ್ತಿದ್ದಾರೆ. ರಸ್ತೆ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಶಾಸಕರು ಮಾತನಾಡಬೇಕು. 15 ದಿವಸಗಳಲ್ಲಿ ಗುಂಡಿ ಮುಚ್ಚುವ ಕೆಲಸವಾದರೂ ಆಗಬೇಕು. ಇಲ್ಲದಿದ್ದರೆ ಪಾದಯಾತ್ರೆಯ ಮೂಲಕ ಮುತ್ತಿಗೆ ಹಾಕಬೇಕಾದೀತು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.