ರೇಣುಕಾಚಾರ್ಯ, ಸುಧಾಕರ್‌ ವರ್ತನೆ ಖಂಡಿಸಿ ಪ್ರತಿಭಟನೆ


Team Udayavani, Mar 13, 2020, 3:47 PM IST

KOLAR-TDY-1

ಶ್ರೀನಿವಾಸಪುರ: ಶಾಸಕ ರಮೇಶ್‌ಕುಮಾರ್‌, ಉತ್ತಮ ವ್ಯಕ್ತಿತ್ವ ಹೊಂದಿದ್ದು, ಸಮಾಜದ ಎಲ್ಲ ವರ್ಗದವರ ದನಿಯಾಗಿದ್ದಾರೆ. ಜತೆಗೆ ರಾಜ್ಯದ ಮುತ್ಸದ್ದಿ ರಾಜಕಾರಣಿಯಾಗಿ ಕೆಲಸ ಮಾಡುತ್ತಿರುವ ಅವರ ಬಗ್ಗೆ ಕೀಳಾಗಿ ಮಾತನಾಡಿರುವ ರೇಣುಕಾಚಾರ್ಯ ಹಾಗೂ ಸುಧಾಕರ್‌ ವರ್ತನೆ ಖಂಡಿಸಿ, ಕಾಂಗ್ರೆಸ್‌ನ ನೂರಾರು ಮಂದಿ ಕಾರ್ಯಕರ್ತರು ಪಟ್ಟಣದ ಬಸ್‌ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಇಬ್ಬರ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಿಂದ ರೇಣುಕಾಚಾರ್ಯ ಪ್ರತಿಕೃತಿಯೊಂದಿಗೆ ಬಸ್‌ ನಿಲ್ದಾಣದವರಿಗೆ ಮೆರವಣಿಗೆ ನಡೆಸಿದರು. ನಂತರ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಬಗ್ಗೆ ಹಗುರವಾಗಿ ಮಾತನಾಡಿದ ರೇಣುಕಾಚಾರ್ಯ ಹಾಗು ಸುಧಾಕರ್‌ ವಿರುದ್ಧ ಘೋಷಣೆ ಕೂಗಿದರು.

ಶಾಸಕರ ವರ್ಚಸ್ಸು ಕುಗ್ಗಿಸುವ ಕೆಲಸ: ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ದಿಂಬಾಲ್‌ ಅಶೋಕ್‌ ಮಾತನಾಡಿ, ಶಾಸಕ ರಮೇಶ್‌ಕುಮಾರ್‌ ವರ್ಚಸ್ಸು ಕುಗ್ಗಿಸುವ ಸಲುವಾಗಿ ಕೆಲವು ಗಂಭೀರ ಆರೋಪ ಮಾಡಿದ್ದಾರೆ. ಕೊಲೆ ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಮಾಡದ ಕೆಲಸಗಳನ್ನು ಅವರ ಮೇಲೆ ಹಾಕಿದ್ದರೂ, ಅದರಿಂದ ಖುಲಾಸೆಯಾಗಿದ್ದಾರೆ. ಆದರೂ ರಮೇಶ್‌ ಕುಮಾರ್‌ ಕೊಲೆ ಮಾಡಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರಿಗೆ ತಾಕತ್ತಿದ್ದರೆ ಕೋರ್ಟ್‌ಗೆ ಹೋಗಬೇಕು. ಆದರೆ ಬಾಯಿಗೆ ಬಂದದ್ದನ್ನು ಮಾತನಾಡುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆರೋಪಿಸಿರು.

ಸುಧಾರಕರ್‌ ಮೊದಲು ರಾಜಕಾರಣ ತಿಳಿದುಕೊಳ್ಳಲಿ: ಚಿಕ್ಕಬಳ್ಳಾಪುರದ ಸುಧಾಕರ್‌, ಮಟ್ಟಿಗೆ ಹೇಳುವುದಾದರೆ ಹಣದ ಆಸೆಯಿಂದ ಪಕ್ಷ ಬದಲಾವಣೆ ಮಾಡಿದ್ದಾರೆ. ಇದುವರೆಗೂ ಕೆ.ಸಿ.ವ್ಯಾಲಿ, ಎತ್ತಿನ ಹೊಳೆ ವಿಚಾರದ ಬಗ್ಗೆ ಬಾಯಿ ತೆರೆದಿಲ್ಲ. ಅಂತಹವರು ರಮೇಶ್‌ಕುಮಾರ್‌ ಬಗ್ಗೆ ಮಾತನಾಡುತ್ತಾರೆ. ಅವರ ರಾಜಕಾರಣ ಕುತಂತ್ರವಾಗಿದ್ದು, ರಮೇಶ್‌ಕುಮಾರ್‌ ವ್ಯಕ್ತಿತ್ವವನ್ನು ತೇಜೋವಧೆ ಮಾಡಲು ನಡೆಸುತ್ತಿರುವ ಹುನ್ನಾರವಾಗಿದೆ. ಹೀಗೆ ಮಾತನಾಡುತ್ತಿದ್ದರೆ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ನಡೆಸಬೆಕಾಗುತ್ತದೆ ಎಂದು ಎಚ್ಚರಿಸಿದರು.

ಕ್ಷೇತ್ರಕ್ಕೆ ಬಂದು ಶಾಸಕರ ಕುರಿತು ತಿಳಿದುಕೊಳ್ಳಿ: ರಾಯಲ್ಪಾಡು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ರೆಡ್ಡಿ ಮಾತನಾಡಿ, ರಮೇಶ್‌ ಕುಮಾರ್‌ ಈ ನಾಡಿನ ಜನಪ್ರಿಯ ನಾಯಕರಾಗಿದ್ದಾರೆ. ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರಕ್ಕೆ ಮಾತ್ರವಲ್ಲದೆ ಕರ್ನಾಟಕದ ನಾಯಕರಾಗಿದ್ದಾರೆ. ತಮ್ಮ ಜೀವಮಾನವನ್ನು ಜನರಿಗೆ ಮುಡಿಪಾಗಿಟ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಎಲ್ಲೋ ಇದ್ದು ಮಾತನಾಡುವ ವಿರೋಧಿಗಳು ಈ ಕ್ಷೇತ್ರಕ್ಕೆ ಬಂದು ಜನರನ್ನು ವಿಚಾರಿಸಬೇಕು. ಆಗ ನಿಜಾಂಶ ಗೊತ್ತಾಗುತ್ತದೆ. ಆದರೆ ಉತ್ತಮ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಶಾಸಕರ ಚಾರಿತ್ರ್ಯವಧೆ ಮಾಡುವುದನ್ನು ನಾವು ಸಹಿಸುವುದಿಲ್ಲ. ಅದಕ್ಕೆ ಪ್ರತ್ಯುತ್ತರವಾಗಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಿ.ವಿ.ವೆಂಕಟರೆಡ್ಡಿ, ಕೆ.ಕೆ. ಮಂಜುನಾಥ್‌, ವೇಣು, ಗೌನಿಪಲ್ಲಿ ಮಧು, ಪುರಸಭೆ ಸದಸ್ಯ ಬಿ.ಆರ್‌.ಬಾಸ್ಕರ್‌, ಉಪ್ಪರಪಲ್ಲಿ ತಿಮಯ್ಯ, ರಾಮಾಂಜಮ್ಮ, ಶಿವರಾಜ್‌ ಇತರರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.