ಜನರ ಹೆಗಲ ಮೇಲೆ ರಾಯಚೂರು ಜಿಪಂ CEO ಸವಾರಿ;ವಿಧಾನಸಭೆಯಲ್ಲಿ ಪ್ರಸ್ತಾಪ
Team Udayavani, Mar 24, 2017, 1:16 PM IST
ಬೆಂಗಳೂರು/ರಾಯಚೂರು:ನೀರಿನ ಅಭಾವ ಪರಿಶೀಲನೆಗೆ ತೆರಳಿದ್ದ ರಾಯಚೂರು ಸಿಇಒ ಕೂರ್ಮಾರಾವ್ ಜನರ ಹೆಗಲ ಮೇಲೆ ಕುಳಿತು ಸವಾರಿ ಮಾಡಿದ್ದ ಪ್ರಕರಣ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಘಟನೆ ಶುಕ್ರವಾರ ನಡೆದಿದೆ.
ಪರಿಶೀಲನೆಗೆ ಆಗಮಿಸಿದ್ದ ಜಿಪಂ ಸಿಇಒ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಲು ನಿರಾಕರಿಸಿದಾಗ ಜನರು, ಸಿಇಒ ಅವರನ್ನು ಹೆಗಲ ಮೇಲೆ ಹೊತ್ತೊಯ್ದಿರುವುದಾಗಿ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ವಿಧಾನಸಭೆಯ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ್ದರು.
ಸಿಇಒ ಅವರನ್ನು ಹೊತ್ತೊಯ್ಯುವಾಗ ಅವರ ಕಾಲಲ್ಲಿ ಶೂ ಕೂಡಾ ಇತ್ತು. ಇದು ರಾಜ್ಯದ ರೈತರಿಗೆ ಮತ್ತು ಜನರಿಗೆ ಮಾಡಿದ ಅಪಮಾನ, ಕೂಡಲೇ ಸಿಇಒ ಅನ್ನು ಅಮಾನತು ಮಾಡಬೇಕೆಂದು ವಿಪಕ್ಷಗಳು ಆಗ್ರಹಿಸಿದವು.
ಜನರ ಹೆಗಲ ಮೇಲೆ ಕುಳಿತು ಸವಾರಿ ಮಾಡಿದ ಸಿಇಒ ಘಟನೆ ಬಗ್ಗೆ ಕೂಡಲೇ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಜಯಚಂದ್ರ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ