ಹತ್ತಿಗೆ ಗುಲಾಬಿ ಕಾಯಿಕೊರಕ ಕೀಟ ಬಾಧೆ: ನಿರ್ವಹಣೆಗೆ ಸಲಹೆ


Team Udayavani, Aug 21, 2017, 3:15 PM IST

cotton.jpg

ರಾಯಚೂರು: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿಟಿ ಹತ್ತಿ ಬೆಳೆಯನ್ನು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು,
ಗುಲಾಬಿ ಕಾಯಿಕೊರಕ ಕೀಟದ ಬಾಧೆ ಕಂಡು ಬರುವ ಸಾದ್ಯತೆ ಇದೆ. ಹೀಗಾಗಿ ರೈತರು ಸಮಗ್ರ ಕೀಟ ನಿರ್ವಹಣೆ
ಪದ್ಧತಿ ಅನುಸರಿಸಲು ಕೃಷಿ ಇಲಾಖೆ ಸಲಹೆ ನೀಡಿದೆ. ಕೀಟದ ಸಮೀಕ್ಷೆಗಾಗಿ ಪ್ರತಿ ಹೆಕ್ಟೇರ್‌ಗೆ ಐದರಂತೆ ಲಿಂಗಾರ್ಷಕ ಬಲೆ ನೆಡಬೇಕು. ಇಪ್ಪತ್ತು ದಿನಕ್ಕೊಮ್ಮೆ ಲೂರ್‌ಗಳನ್ನು ಬದಲಿಸಬೇಕು. ಬಿದ್ದಿರುವ ಪತಂಗ ಲೆಕ್ಕ ಮಾಡಬೇಕು. ಇಡೀ ಕ್ಷೇತ್ರದಲ್ಲಿ 60 ಹೂಗಳನ್ನು ಪರಿಶೀಲಿಸಬೇಕು. ಇಲ್ಲವೇ ಅಲ್ಲಲ್ಲಿ ಸಂಗ್ರಹಿಸಿದ 20 ಬಲಿತ ಕಾಯಿಗಳನ್ನು ತೆರೆದು ಗುಲಾಬಿ ಕಾಯಿಕೊರಕದ ಬಾಧೆಯನ್ನು ಮತ್ತು ಮರಿಹುಳುಗಳನ್ನು ಲೆಕ್ಕ ಮಾಡುವ ಮೂಲಕ ರೋಗ ಬಾಧೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದು. ಮೂರು ದಿನ ಎಂಟು ಪತಂಗಗಳು ಮೋಹಕ ಬಲೆಗಳಲ್ಲಿ ಬಿದ್ದಿರುವುದು ಅಥವಾ 60 ಹೂ ಹಾನಿಯಾಗಿರುವುದು ಅಥವಾ 20 ಕಾಯಿಗಳಲ್ಲಿ ಎರಡು ಅಥವ ಎರಡಕ್ಕಿಂತ ಹೆಚ್ಚು ಮರಿಹುಳುಗಳು ಇದ್ದರೆ
ಆರ್ಥಿಕ ಹಾನಿ ಮಟ್ಟ ತಲುಪಿದೆ ಎಂದು ಗ್ರಹಿಸಬೇಕು. ಪ್ರತಿ ಹೆಕ್ಟೇರ್‌ಗೆ 30ರಂತೆ ಲಿಂಗಾರ್ಷಕ ಬಲೆಗಳನ್ನು
ಸಮನಾಂತರವಾಗಿ ಅಳವಡಿಸಬೇಕು. ಬಲೆಗೆ ಬಿದ್ದ ಪತಂಗಗಳನ್ನು ಸಾಯಿಸಲು ಡಿಡಿವಿಪಿ ಕೀಟನಾಶಕದಲ್ಲಿ ಅದ್ದಿದ ಅರಳೆ ಬಲೆಯಲ್ಲಿ ಇಡಬೇಕು. ಲಿಂಗಾರ್ಷಕ ಬಲೆಗಳು ಬೆಳೆ ಮಟ್ಟದಿಂದ 15 ಸೆಂಮೀ ಎತ್ತರದಲ್ಲಿರಬೇಕು. 2 ಮಿಲೀ ಪ್ರಾಫೆನೋಫಾಸ್‌ 50 ಇಸಿ ಅಥವಾ ಒಂದು ಗ್ರಾಂ ಥೈಯೋಡಿಕಾರ್ಬ್ 75 ಡಬ್ಲ್ಯೂಪಿ ಅಥವ 0.4 ಗ್ರಾಂ ಇಮಾಮೆಕ್ಟಿನ್‌ ಬೆಂಝೋಯೇಟ್‌ 5 ಇಸಿ ಪ್ರತಿ ಲೀಟರ್‌ ನೀರಿಗೆ ಹಾಕಿ 15 ದಿನದ ಅಂತರದಲ್ಲಿ ಸಿಂಪಡಿಸಬೇಕು. ಪದೇ ಪದೇ ಒಂದೇ ಕೀಟನಾಶಕ ಉಪಯೋಗಿಸಬಾರದು. ಪೈರಿಥ್ರಾಯಿಡ್‌ ಕೀಟನಾಶಕಗಳಾದ 0.5 ಮಿ.ಲೀ ಲ್ಯಾಮಡ್‌ ಸೈಹೆಲೊಥ್ರಿನ್‌ ಅಥವಾ 0.5 ಮಿಲೀ ಡೆಕಾಮೆತ್ರಿನ್‌ 2.8 ಇಸಿ ಅಥವಾ 0.5 ಮಿಲೀ ಸೈಪ ರ್ಮೆಥ್ರಿನ್‌ 10 ಇಸಿ ಪ್ರತಿ ಲೀಟರ್‌ ನೀರಿನಲ್ಲಿ ಬೆರೆಸಿ ಬಿತ್ತನೆಯಾದ 100 ದಿನಗಳ ನಂತರ ಸಿಂಪಡಿಸಬೇಕು. ಸಿಂಥಟಿಕ್‌ ಪೈರಿಥ್ರಾಯಿಡ್‌ ಕೀಟನಾಶಕಗಳನ್ನು ಕೇವಲ ಒಂದು ಅಥವಾ ಎರಡು ಸಲ ಮಾತ್ರ 15-20 ದಿನಗಳ ಅಂತರದಲ್ಲಿ ಸಿಂಪಡಿಸಬೇಕು. ಪೈರಿಥ್ರಾಯಿಡ್‌ ಗುಂಪಿಗೆ ಸೇರಿದ ಕೀಟನಾಶಕಗಳನ್ನು ಪದೇ ಪದೇ ಬಳಸುವುದರಿಂದ ಸಸ್ಯ ಹೇನು ಮತ್ತು ಬಿಳಿ ನೋಣದ ಸಂಖ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಬೇರೆ ಕೀಟನಾಶಕಗಳನ್ನು ಬಳಸುವುದರಿಂದ ಕೀಟದ ಬಾಧೆ ಕುಗ್ಗಿಸಬಹುದು. ಮಾಹಿಗಾಗಿ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಲು ಕೋರಲಾಗಿದೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.