ಎಂಥ ಸ್ಥಿತಿಯಲ್ಲೂ ಧರ್ಮ ತೊರೆಯದಿರಿ: ರಘುವಿಜಯ ತೀರ್ಥರು


Team Udayavani, Aug 22, 2017, 4:09 PM IST

ray 3.jpg

ರಾಯಚೂರು: ಎಂಥದ್ದೇ ಉನ್ನತ ಸ್ಥರದಲ್ಲಿದ್ದರೂ ಧರ್ಮಾಚರಣೆ ತೊರೆಯದೆ ಬ್ರಾಹ್ಮಣತೆ ಉಳಿಸಿಕೊಳ್ಳಬೇಕು.
ಮುಂದಿನ ಪೀಳಿಗೆಗೆ ಆಚಾರ ವಿಚಾರಗಳ ಮಹತ್ವ ತಿಳಿಸಬೇಕು ಎಂದು ಆರ್ಯ ಆಕ್ಷೋಭ್ಯ ಮಠದ ಪೀಠಾಧಿಪತಿ ಶ್ರೀ ರಘುವಿಜಯ ತೀರ್ಥರು ಹೇಳಿದರು. ನಗರದ ಯಾದವ ಭವನದಲ್ಲಿ ಅಖೀಲ ಭಾರತ ಬ್ರಾಹ್ಮಣ ಮಹಾಸಭಾ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ವಿಪ್ರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿಪ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಾಹ್ಮಣ ಸಮಾಜದವರು ಧರ್ಮಾಚರಣೆ ವಿಚಾರದಲ್ಲಿ ತೋರುತ್ತಿರುವ ತಾತ್ಸಾರ ಮನೋಭಾವ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಇತಿಹಾಸ ಅವಲೋಕಿಸಿದಾಗ
ಧರ್ಮಾಚರಣೆ ಜೊತೆ ಜೊತೆಗೆ ಉನ್ನತ ಅಧಿಕಾರವನ್ನು ಅನುಭವಿಸಿದಂಥ ಬ್ರಾಹ್ಮಣ ಸಮಾಜವು ಇಂದು ಕೇವಲ
ಒಂದು ಜಾತಿಯಾಗಿ ಗುರುತಿಸಿಕೊಳ್ಳುತ್ತಿರುವುದು ಸರಿಯಲ್ಲ. ಎಂಥ ಸಂದರ್ಭದಲ್ಲೂ ಧರ್ಮ ತೊರೆಯಬಾರದು ಎಂದರು. ಬ್ರಾಹ್ಮಣರಿಗೆ ಸಮಾಜದಲ್ಲಿ ವಿಶೇಷ ಗೌರವದ ಸ್ಥಾನಮಾನವಿದೆ. ಆಚರಣೆಗಳು, ಕಟ್ಟುಪಾಡುಗಳನ್ನು
ಚಾಚೂ ತಪ್ಪದೆ ನಿರ್ವಹಿಸುವ ಮೂಲಕ ಇತರೆ ಸಮಾಜಕ್ಕೆ ಮಾದರಿ ಎನಿಸಿಕೊಂಡದ್ದು ಬ್ರಾಹ್ಮಣ ಸಮಾಜ. ಇಂಥ
ಗೌರವ ಕಾಪಾಡಿಕೊಂಡು ಹೋಗಬೇಕಾದ ಮಹತ್ತರ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು. ನಗರಸಭೆ ಉಪಾಧ್ಯಕ್ಷ ಜಯಣ್ಣ ಮಾತನಾಡಿ, ಇಂಥ ಕಾರ್ಯಕ್ರಮಗಳಿಂದ ಬಡ ಮಕ್ಕಳಿಗೆ ಓದುವ ಉತ್ಸಾಹ ಇಮ್ಮಡಿಗೊಳ್ಳಲಿದೆ ಎಂದರು.
ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಾಲಕೃಷ್ಣ ದೋಟಿಹಾಳ, ಜಿ. ರಮಾಕಾಂತ, ಶ್ರೀನಿಧಿ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದ ಡಿ.ಹನುಮಂತರಾವ್‌ ವಕೀಲ್‌ ಅವರಿಗೆ ಪ್ರಸಕ್ತ ಸಾಲಿನ ವಿಪ್ರಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಎಚ್‌.ಎನ್‌. ಹಿರಿಯಣ್ಣ ಮಾತನಾಡಿದರು, ಶೇಷಾದ್ರಿ ಕುಲಕರ್ಣಿ ವಿಶೇಷ ಉಪನ್ಯಾಸ ನೀಡಿದರು. ಮಹಾಸಭಾದ ವಲಯ ಉಪಾಧ್ಯಕ್ಷ ನರಸಿಂಗರಾವ್‌ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಉಪಾಧ್ಯಕ್ಷ ಬಿ.ವಿ.ಮಂಜುನಾಥ, ಸದಸ್ಯರಾದ ತಾರಾನಾಥ, ಜಿಲ್ಲಾಧ್ಯಕ್ಷ ಆನಂದ ತೀರ್ಥ ಫಡ್ನಿಸ್‌, ಕಾರ್ಯದರ್ಶಿ ಪ್ರಾಣೇಶ ಮುತಾಲಿಕ್‌, ಸಮಾಜದ
ಮುಖಂಡರಾದ ಜಗನ್ನಾಥ ಕುಲಕರ್ಣಿ, ಗಿರೀಶ ಕನಕವೀಡು, ಡಾ| ಪ್ರಮೋದ ಕಟ್ಟಿ, ಶಾಮರಾವ್‌ ಹೇಮನೂರು, ಮುದ್ದು ರಂಗರಾವ್‌ ಮುತಾಲಿಕ್‌ ಸೇರಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.