ಕುಗ್ಗದ ದೀಪಾವಳಿ ಖುಷಿ


Team Udayavani, Oct 20, 2017, 1:31 PM IST

ray-1.jpg

ರಾಯಚೂರು: ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಪಟಾಕಿ, ಪೂಜಾ ಸಾಮಗ್ರಿ ಸೇರಿ ಅಗತ್ಯ
ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಖರೀದಿ ಜೋರಾಗಿತ್ತು. ಹಬ್ಬವನ್ನು ಎಲ್ಲರೂ ಸಡಗರ ಸಂಭ್ರಮದಿಂದ ಆಚರಿಸಿದರು.
ಬೆಳಕಿನ ಹಬ್ಬಕ್ಕೆ ಎಂದಿನಂತೆ ಈ ಬಾರಿಯೂ ಅದ್ಧೂರಿ ಸ್ವಾಗತ ದೊರೆತಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ
ಸುರಿದಿದ್ದ ಮಳೆಯಿಂದ ಹಳ್ಳಿಗಳಲ್ಲಿ ಹಬ್ಬಕ್ಕೆ ಮಂಕು ಕವಿದಂತೆ ಕಂಡರೂ ನಗರ ಪ್ರದೇಶಗಳಲ್ಲಿ ಯಾವುದೇ ಬದಲಾವಣೆ
ಕಂಡು ಬರಲಿಲ್ಲ. ನರಕ ಚತುರ್ದಶಿ, ದೀಪಾವಳಿ ಅಮಾವಾಸ್ಯೆ ಹಾಗೂ ಬಲಿ ಪಾಡ್ಯಮಿಗೆ ಸಿದ್ಧತೆಗಳು ಜೋರಾಗಿದ್ದವು.

ಎರಡು ದಿನಗಳ ಮುಂಚೆಯೇ ಸಡಗರ ಶುರುವಾಗಿತ್ತು. ಹಬ್ಬದ ನಿಮಿತ್ತ ಎಲ್ಲ ಅಂಗಡಿ ಮುಂಗಟ್ಟುಗಳನ್ನು, ಮನೆಗಳನ್ನು ಸುಣ್ಣ ಬಣ್ಣಗಳಿಂದ ಅಲಂಕರಿಸಲಾಗಿತ್ತು. ಎಲ್ಲೆಡೆ ಅಲಂಕಾರಿಕ ದೀಪಗಳನ್ನು ಹಾಕಿದ್ದು ಝಗಮಗಿಸುವಂತೆ ಕಂಡು ಬಂತು. ಮನೆಗಳ ಮುಂದೆ ಬಿಡಿಸಿದ ಬಣ್ಣದ ಬಣ್ಣದ ರಂಗೋಲಿ ಹಬ್ಬದ ಕಳೆ ಹೆಚ್ಚಿಸಿದ್ದವು. 

ಖರೀದಿ ಜೋರು: ಹಬ್ಬದ ನಿಮಿತ್ತ ಅಗತ್ಯ ಸಾಮಗ್ರಿಗಳ ಖರೀದಿ ಜೋರಾಗಿತ್ತು. ಬೆಲೆ ಏರಿಕೆ ನಡುವೆಯೂ ಜನ ಪೂಜಾ ಸಾಮಗ್ರಿಗಳನ್ನು ಖರೀದಿಸುತ್ತಿರುವುದು ಕಂಡುಬಂತು. ಮಾರುಕಟ್ಟೆಯಲ್ಲಿ ಗಿಜಿಗುಡುವ ವಾತಾವರಣವಿತ್ತು. ಬಾಳೆದಿಂಡು, ಹಣ್ಣು, ಹೂಗಳಿಗೆ ಎಲ್ಲಿಲ್ಲದ ಬೇಡಿಕೆ ಇತ್ತು. ಅಂಗಡಿ ಪೂಜೆಗಳಿಗಾಗಿ ಕುಂಬಳಕಾಯಿ ಖರೀದಿ ಜೋರಾಗಿತ್ತು. ಒಟ್ಟಾರೆ ಹಬ್ಬದ ಖರೀದಿ ಜೋರಾಗಿದ್ದರಿಂದ ವರ್ತಕರಲ್ಲಿ ಲಾಭದ ಮಂದಹಾಸ ಕಂಡು ಬಂತು. ಇನ್ನು ಆಕಾಶ ಬುಟ್ಟಿಗಳ ಮಾರಾಟ ಜೋರಾಗಿದ್ದು, ಬಣ್ಣ ಬಣ್ಣದ
ವಿವಿಧ ಆಕಾರಗಳ ಆಕಾಶ ಬುಟ್ಟಿಗಳ ಮಾರಾಟವಾಗಿದೆ. ಇನ್ನು ರಾಜಸ್ಥಾನದಿಂದ ಬಂದ ಹಣತೆ ವ್ಯಾಪಾರಿಗಳು ಕೂಡ ವಿವಿಧ
ಆಕೃತಿಗಳ ಹಣತೆಗಳನ್ನು ಮಾರಾಟ ಮಾಡಿ ಲಾಭದ ರುಚಿ ಕಂಡಿದ್ದಾರೆ.

ದೀಪಾವಳಿ ಪೂಜೆಗೆ ಅಗತ್ಯವಾದ ಕಬ್ಬು, ಬಾಳೆದಿಂಡು, ಮಾವಿನಎಲೆ, ಚಂಡುಹೂವು, ಚಂಡುಹೂವಿನ ಗಿಡ, ಹೂವಿನ ಹಾರಗಳ ಬೆಲೆ ಹೆಚ್ಚಿದ್ದರೂ ಸಾರ್ವಜನಿಕರು ಮಾತ್ರ ತಮ್ಮ ಇತಿಮಿತಿಯಲ್ಲಿ ಚೌಕಾಸಿ ಮಾಡುತ್ತ ಖರೀದಿಸುತ್ತಿರುವುದು ಕಂಡುಬಂತು.

ಪಟಾಕಿ ವ್ಯಾಪಾರ ಡಲ್‌: ಈ ಬಾರಿ ಪಟಾಕಿ ವ್ಯಾಪಾರ ಎಂದಿನಂತಿಲ್ಲ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ನಗರಸಭೆಯೇ ಮಳಿಗೆಗಳನ್ನು ಸಿದ್ಧಪಡಿಸುತ್ತಿದ್ದು, ವರ್ತಕರು ಇಂತಿಷ್ಟು ಹಣ ನೀಡಿ ವ್ಯಾಪಾರ ಮಾಡುತ್ತಿದ್ದರು. ಆದರೆ, ಈ ಬಾರಿ ಮಳಿಗೆಗಳನ್ನು ವರ್ತಕರೇ ಹಾಕಿಕೊಳ್ಳುವಂತಾಗಿದೆ. ಅಲ್ಲದೇ, ಜನ ಕೂಡ ಪಟಾಕಿ ಖರೀದಿಸಲು ಅಷ್ಟೊಂದು ಉತ್ಸಾಹ ತೋರುತ್ತಿಲ್ಲ. ವ್ಯಾಪಾರ ನಿರೀಕ್ಷೆಯಷ್ಟಾಗಿಲ್ಲ ಎನ್ನುತ್ತಿದ್ದಾರೆ. ಚೀನಾ ಪಟಾಕಿಗಳ ನಿಷೇಧ, ಪರಿಸರ ಸ್ನೇಹಿ ಆಚರಣೆಗೆ ಜನ ಒತ್ತು ಕೊಟ್ಟಿರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಬೆಲೆ ಏರಿಕೆ, ಮಳೆ ಕಾಟದ ಮಧ್ಯಯೂ ಹಬ್ಬಕ್ಕೆ ಯಾವುದೇ ಕುಂದುಟಾಗಿಲ್ಲ. ಎಲ್ಲರೂ ಹಬ್ಬವನ್ನು ಸಂಭ್ರಮದಿಂದಲೇ ಆಚರಿಸಿರುವುದು ವಿಶೇಷ 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.