ನ್ಯಾ| ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯ
Team Udayavani, Mar 12, 2018, 1:19 PM IST
ಸೇಡಂ: ನ್ಯಾ| ಎ.ಜೆ. ಸದಾಶಿವ ಆಯೋಗ ರಚಿತ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಮಾದಿಗರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡ ಸೇಡಂನಿಂದ ಕಲಬುರಗಿ ಕಾಲ್ನಡಿಗೆ ಜಾಥಾಕ್ಕೆ ಹಂಪಿ ಮಾತಂಗ ಮಠದ ಪೂರ್ಣಾನಂದ ಸ್ವಾಮೀಜಿ ಚಾಲನೆ ನೀಡಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹೊರಟ ಜಾಥಾ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ಕಲಬುರಗಿ ಕ್ರಾಸ್ ಮೂಲಕ
ಮುಂದುವರಿಯಿತು. ಈ ವೇಳೆ ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ವಿಜಯಕುಮಾರ ಆಡಕಿ, ಅನೇಕ ವರ್ಷಗಳಿಂದ ಸದಾಶಿವ ಆಯೋಗದ ವರದಿ ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆದರೆ ಯಾವ
ಕಾರಣಕ್ಕಾಗಿ ವರದಿ ಅನುಷ್ಠಾನಕ್ಕೆ ಹಿಂದೇಟು ಹಾಕಲಾಗುತ್ತಿದೆ ಎಂಬುದು ಅರಿಯದಂತಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹುಬ್ಬಳ್ಳಿ, ಕೂಡಲಸಂಗಮ ಮತ್ತು ಬೆಂಗಳೂರಿನಲ್ಲಿ ನಡೆದ ಸಮಾರಂಭಗಳಲ್ಲಿ ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡುವ ಭರವಸೆ ನೀಡಿ ಈಗ ಕೈ ಚೆಲ್ಲಿ ಕೂತಿದ್ದಾರೆ ಎಂದು ಆರೋಪಿಸಿದರು.
ಜಾಥಾ ವ್ಯವಸ್ಥಾಪಕ ಶ್ರೀಶೈಲ ಎಂ.ಜಿ. ಮಾತನಾಡಿ, ಸರ್ಕಾರ ದಲಿತರ ಶಕ್ತಿ ಅರಿತು ಕೂಡಲೇ ವರದಿ ಜಾರಿಗೆ ಮುಂದಾಗಬೇಕು. ಇಲ್ಲವಾದಲ್ಲಿ ಹೋರಾಟಗಳು ಉಗ್ರ ಸ್ವರೂಪ ಪಡೆದುಕೊಳ್ಳಲಿವೆ ಎಂದು ಹೇಳಿದರು.
ಸುಂದರ ಮಂಗಾ, ಜಗನ್ನಾಥ ಚಿಂತಪಳ್ಳಿ, ಜಾನ ಹೊಸಳ್ಳಿಕರ್, ಮಾರುತಿ ಕೊಡಂಗಲಕರ್, ಗಣಪತರಾವ ಚಿಮ್ಮನಚೋಡ್ಕರ್, ಕಾಶಿನಾಥ ನಾಟೀಕಾರ, ಶರಣಪ್ಪ ಕಣೇಕಲ್, ರಾಮು ಕಣೇಕಲ್, ಲೊಕೇಶ ಹಂದರಕಿ, ಸುರೇಶ ಇವಣಿ, ಮಲ್ಲಿಕಾರ್ಜುನ ರಾಜೊಳ್ಳಿ, ಬಸವರಾಜ ಕಾಳಗಿ, ರಾಜು ಕಾಳಗಿ, ಶಂಭುಲಿಂಗ ನಾಟೀಕಾರ, ಈರಪ್ಪ
ಗುಂಡಗುರ್ತಿ, ಮಹೇಶ, ಹಣಮಂತ ಭರತನೂರ, ಅಶೋಕ ಫೀರಂಗಿ, ಅನಂತಪ್ಪ ಮೋತಕಪಲ್ಲಿ, ವೆಂಕಟಪ್ಪ ಮೋತಕಪಲ್ಲಿ, ಹಣಮಂತ ಲೋಕಪಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ